Skip to main content

Blog number 1167. ಒಂದು ಕಾಲದ ಸಮುದಾಯದ ಮುಖಂಡರು ಆಗಿದ್ದ ಘಂಟಿನ ಕೊಪ್ಪದ ತಾರೇಸಿಕ್ಕಿ ಹಿರೇನಾಯಕರ ನೆನಪು ಅವರ ಮೊಮ್ಮಗಳಿಂದ

#ಘ೦ಟಿನಕೊಪ್ಪದ_ತಾರೇಸಿಕ್ಕಿ_ಮನೆತನದವರು.

#ತಾರೇಸಿಕ್ಕಿ_ಹಿರೇನಾಯ್ಕರು_ತಾಲ್ಲೂಕು_ಬೋರ್ಡ್_ಮೆಂಬರ್_ಆಗಿದ್ದರು.

#ಅವರ_ಮಗ_ಯೋಗೇಂದ್ರಪ್ಪ_ಮತ್ತು_ಮೊಮ್ಮಗಳು_ಚಂದ್ರಕಲಾ_ನಿನ್ನೆ_ಬಂದಿದ್ದರು.
  
    ಆನಂದಪುರಂ ಹೋಬಳಿ ಯಡೇಹಳ್ಳಿ ಗ್ರಾಮ ಪಂಚಾಯತ್ ನ ತಾರೇಸಿಕ್ಕಿ ಹಿರೇನಾಯ್ಕರು ಆರು ಅಡಿಗಿಂತ ಎತ್ತರದ ನೀಳಕಾಯರು, ಪಂಚಾಯ್ತಿ, ಸಭೆ ಸಮಾರಂಭದಲ್ಲಿ ಇವರ ಮಾತು ಕಥೆ ಮತ್ತು ಇವರ ದೈರ್ಯದ ಮುಂದೆ ಅವರ ಎದರು ನಿಂತು ಮಾತಾಡುವ ದೈಯ೯ ಯಾರಿಗೂ ಇರುತ್ತಿರಲಿಲ್ಲ ಆಗ ತಾಲ್ಲೂಕ್ ಬೋರ್ಡ್ ಅಧ್ಯಕ್ಷರು ಕಾಗೋಡು ತಿಮ್ಮಪ್ಪನವರು, ಹಿರೇನಾಯ್ಕರು ತಾಲ್ಲೂಕ್ ಬೋರ್ಡ್ ಮೆಂಬರ್ ಆಗಿದ್ದರಂತೆ.
   1986-87ರ ಮಂಡಲ್ ಪಂಚಾಯತ್ ಪ್ರದಾನರ ಆಯ್ಕೆ ಚುನಾವಣೆಯಲ್ಲಿ ನಾನು ಮತ್ತು ತಾರೇಸಿಕ್ಕಿ ಹಿರೇನಾಯ್ಕರು ಒಂದಾಗಿ ಹೊಸಗುಂದದ ಕೋವಿ ನಾರಾಯಣಪ್ಪರನ್ನು ಪ್ರದಾನರಾಗಿ ಮತ್ತು ಹೊಸಗುಂದದ ಎ.ಕೆ. ಕೊಲ್ಲಪ್ಪರನ್ನು ಉಪ ಪ್ರದಾನರಾಗಿ ಆಯ್ಕೆ ಮಾಡಿದ್ದು ಇತಿಹಾಸ.
   ಇವರ ಉಲ್ಲೇಖಿಸಿ ಪೇಸ್ ಬುಕ್ ನಲ್ಲಿ ಪೋಸ್ಟ್ ಒಂದು ಹಾಕಿದ್ದೆ.
   ನಿನ್ನೆ ಬೆಳಿಗ್ಗೆ ಶಿವಮೊಗ್ಗದ ಮಿನಾಕ್ಷಿ ಭವನದ ಹತ್ತಿರದ ಬಾಪೂಜಿ ಕಾಲೇಜಿನ ಅಧ್ಯಾಪಕಿ ಶ್ರೀಮತಿ ಚಂದ್ರಕಲಾ ಪೋನ್ ಮಾಡಿದ್ದರು ನಂತರ ತಮ್ಮ ತಂದೆ ಜೊತೆ ಕಛೇರಿಗೆ ಬಂದಾಗಲೇ ಗೊತ್ತಾಗಿದ್ದು ಇವರು ತಾರೇಸಿಕ್ಕಿ ಹಿರೇನಾಯಕರ ಪುತ್ರ ಯೋಗೇಂದ್ರರ ಎರಡನೆ ಪುತ್ರಿ ಅಂತ.
 ಇವರ ಅಜ್ಜ ಸಾಯುವಾಗ ಇವರಿಗೆ 3 - 4 ವರ್ಷವಾದ್ದರಿಂದ ಅವರ ನೆನಪು ಮಸಕು ಮಸುಕಾಗಿದೆ ಆದರೆ ಅಜ್ಜನ ಬಗ್ಗೆ ಹೆಚ್ಚು ತಿಳಿಯುವ ಆಸಕ್ತಿ ಮತ್ತು ಅಜ್ಜನ ನೆನಪು ಹಸಿರಾಗಿಡುವ ಆಸೆ ಮೊಮ್ಮಗಳಿಗೆ.
   ಆದ್ದರಿಂದ ನಾನು ಬರೆದ ಪೋಸ್ಟ್ ಅವರ ವಾಟ್ಸಪ್ ಗೆ ಕಳಿಸಲು ವಿನಂತಿಸಿದರು,ಕೂಡಲೇ ಕಳಿಸಿದೆ ಮತ್ತು ನಿಮ್ಮ ಅಜ್ಜನ ಪೋಟೋ ವಾಟ್ಸಪ್ ಮಾಡಮ್ಮ ಅಂದಿದ್ದಕ್ಕೆ ಅವರ ಚೀಲದಲ್ಲಿದ್ದ ಅವರ ಅಜ್ಜನ ಪೋಟೋವನ್ನೆ ಹೊರತೆಗೆದರು ಅದನ್ನು ನಾನು ನನ್ನ ಮೊಬೈಲ್ ನಲ್ಲಿ ಸೆರೆ ಹಿಡಿದೆ.
  ಅಜ್ಜನ ಪೋಟೋ ಹಳೆಯದಾಗಿದ್ದರಿಂದ ಅದನ್ನು ಸಾಗರಕ್ಕೆ ಒಯ್ದು ಹೊಸದಾಗಿ ಸ್ಟುಡಿಯೋದಲ್ಲಿ ಪ್ರತಿ ಮಾಡಿಸಿ ಪ್ರೇಂ ಹಾಕಿಸಿಕೊಂಡು ಊರಿಗೆ ಹೋಗುವಾಗ ನನ್ನ ಬೇಟಿಗೆ ಬಂದಿದ್ದರು ಅಪ್ಪ ಮತ್ತು ಮಗಳು.
  ನಿಜಕ್ಕೂ ಹಿರೇನಾಯ್ಕರ ಮೇಲೆ ಮೊಮ್ಮಗಳ ಈ ಪ್ರೀತಿ ನನಗೆ ತುಂಬಾ ಇಷ್ಟ ಆಯಿತು ಈಗಿನ ಮಕ್ಕಳಲ್ಲಿ ಅಜ್ಜ ಅಜ್ಜಿ ನೆನಪೇ ಇಲ್ಲದ ಕಾಲದಲ್ಲಿ ಚಂದ್ರಕಲಾ ಬಿನ್ನರಾಗಿ ಕಾಣುತ್ತಾರೆ ತಂದೆ ಮಗಳಿಗೆ ನನ್ನ ಪುಸ್ತಕಗಳನ್ನು ನೆನಪಿಗಾಗಿ ನೀಡಿ ಬಿಳ್ಕೊಟ್ಟೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...