Skip to main content

Blog number 1180. ಸ್ನೇಕ್ ಪ್ರಬಾಕರ್ ಅವರ ಪದ್ಮಶ್ರೀ ಆಶ್ರಮ, ಹಾವು ಹಿಡಿದು ಕಾಡಿಗೆ ಬಿಟ್ಟು ಅನಾಥರನ್ನು ಪಾಲನೆ ಮಾಡುವ ಅಪರೂಪದ ವ್ಯಕ್ತಿ

https://youtu.be/teUwX3R4ptc

ಸ್ನೇಕ್_ಪ್ರಬಾಕರ್_ಅವರ_ಪದ್ಮಶ್ರೀ_ಅನಾಥಾಶ್ರಮಕ್ಕೆ_ಸಹೃದಯವಂತರ_ಸಹಾಯ_ಅವಶ್ಯಕತೆ_ಇದೆ

#ಕ್ಷಣಮಾತ್ರದಲ್ಲಿ_ದೇವರದಯ_ಅದೃಷ್ಟ_ಮತ್ತು_ಇವರ_ವೃತ್ತಿಯ_ಚಾಕಚಕ್ಯತೆಯಿಂದ_ಕಾಳಿಂಗಸಪ೯ದಿಂದ_ಬದುಕುಳಿದ

#ಸ್ನೇಕ್_ಪ್ರಬಾಕರ್

  ಮೊನ್ನೆ ದಿನಾಂಕ 10- ಜನವರಿ -2021 ರ ಭಾನುವಾರ ಮಧ್ಯಾಹ್ನ ಕಾಳಿಂಗ ಸಪ೯ ಹಿಡಿಯುವ ವೇಳೆ ಅಚಾತುಯ೯ದಿಂದ ಆಯಾ ತಪ್ಪಿ ಬಿದ್ದು ಕಾಳಿಂಗ ಸಪ೯ ಎರೆಡು ಬಾರಿ ಅತಿ ಸಮೀಪದಲ್ಲಿ ಇವರ ಕಾಲು ಮತ್ತು ಮುಖಕ್ಕೆ ಕಚ್ಚುವ ಪ್ರಯತ್ನದಲ್ಲಿ ಇವರು ತಪ್ಪಿಸಿಕೊಂಡು ಕ್ಷಣ ಮಾತ್ರದಲ್ಲಿ ಎಡಗೈಯಲ್ಲಿ ಕಾಳಿಂಗ ಸಪ೯ ಹಿಡಿದು ಬದುಕುಳಿದ ವಿಡಿಯೋ ಶಿವಮೊಗ್ಗದ ಗೆಳೆಯರಾದ ಮಂಜು ಮಿಸ್ಟ್ ಮಾಡಿದ್ದು ಈಗ ದೇಶ ವಿದೇಶದಲ್ಲಿ ವೈರಲ್ ಆಗಿದೆ.
  ಇವತ್ತು ನನ್ನಲ್ಲಿ ಬಂದಾಗ ಆ ಘಟನೆ ಬಗ್ಗೆ ಸ್ನೇಕ್ ಪ್ರಬಾಕರ್ ಅವರ ಸಂದಶ೯ನ ಮಾಡಿದ ವಿಡಿಯೋ ಇಲ್ಲಿದೆ.
   ಇವರಿಗೇನಾದರು ಆಗಿದ್ದರೆ ಇವರ ಕುಟುಂಬ ಮಾತ್ರವಲ್ಲ ಇವರ ನಂಬಿ ಇವರ ಆಶ್ರಯದಲ್ಲಿರುವ ಅನಾಥರಿಗೂ ದೊಡ್ಡ ಆಪತ್ತಾಗುತ್ತಿತ್ತು, ಹಾವು ಹಿಡಿದು ಕಾಡಿಗೆ ಬಿಡುವ ಇವರಿಗೆ ಹಳ್ಳಿ ಜನ ಕೊಡುವ ಗೌರವ ಸಂಭಾವನೆಯೇ ಇವರ ಅನಾಥಾಶ್ರಮ ನಡೆಸಲು ಬೇಕಾದ ಅಥಿ೯ಕ ಮೂಲ.
   ಜೀವದ ಹಂಗು ತೊರೆದು ಮಲೆನಾಡಿನ ಹಳ್ಳಿಗಳ  ಮನೆಯ ಒಳಗೆ ಬರುವ ವಿಷದ ನಾಗರ, ಕಾಳಿಂಗ ಹಿಡಿದು ಕಾಡಿಗೆ ಬಿಡುವ ಇವರ ಕಾಯಕ ತುಂಬಾ ಅಪಾಯಕಾರಿಯೆ.
  ಸ್ನೇಕ್ ಪ್ರಬಾಕರ್ ಗೆ ಮತ್ತು ಅವರು ನಡೆಸುವ ಅನಾಥಾಶ್ರಮಕ್ಕೆ ನಿರಂತರ ಅಥಿ೯ಕ ಸಹಾಯದ ಅವಶ್ಯಕತೆ ಇದೆ, ನಾನು ಅನೇಕ ವರ್ಷದಿಂದ ನಿರಂತರವಾಗಿ ಪ್ರತಿ ತಿಂಗಳು 100kg ಊಟದ ಅಕ್ಕಿ ನೀಡುತ್ತಿದ್ದೇನೆ ಇದರಿಂದ ಮಾತ್ರ ಅಲ್ಲಿನ ಸಮಸ್ಯೆ ಬಗೆಹರಿಯುವುದಿಲ್ಲ ಅಲ್ಲಿರುವ ಅನಾಥರಿಗೆ ಊಟೋಪಚಾರ ಚಿಕಿತ್ಸೆಗೆ ಹೆಚ್ಚಿನ ವೆಚ್ಚ ಭರಿಸಲು ಸಹಾಯ ಮಾಡುವ ಮನಸ್ಸಿರುವವರು ಸ್ನೇಕ್ ಪ್ರಭಾಕರ್ ಗೆ ನೇರ ಸಂಪಕಿ೯ಸಿ ಸಹಾಯ ಮಾಡಲು ವಿನ೦ತಿಸುತ್ತೇನೆ.
  ಸ್ನೇಕ್ ಪ್ರಭಾಕರ್ ಸೆಲ್ ನಂಬರ್ 9008640558.
ಇವರ ಬ್ಯಾಂಕ್ ಅಕೌಂಟ್ ಮಾಹಿತಿ
 Padmashree charitable trust, Account number 1516101008488,IFSC CNRB 0001516,CANARA BANK kodur branch,phone number 9008640558

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ