Skip to main content

Blog number 1180. ಸ್ನೇಕ್ ಪ್ರಬಾಕರ್ ಅವರ ಪದ್ಮಶ್ರೀ ಆಶ್ರಮ, ಹಾವು ಹಿಡಿದು ಕಾಡಿಗೆ ಬಿಟ್ಟು ಅನಾಥರನ್ನು ಪಾಲನೆ ಮಾಡುವ ಅಪರೂಪದ ವ್ಯಕ್ತಿ

https://youtu.be/teUwX3R4ptc

ಸ್ನೇಕ್_ಪ್ರಬಾಕರ್_ಅವರ_ಪದ್ಮಶ್ರೀ_ಅನಾಥಾಶ್ರಮಕ್ಕೆ_ಸಹೃದಯವಂತರ_ಸಹಾಯ_ಅವಶ್ಯಕತೆ_ಇದೆ

#ಕ್ಷಣಮಾತ್ರದಲ್ಲಿ_ದೇವರದಯ_ಅದೃಷ್ಟ_ಮತ್ತು_ಇವರ_ವೃತ್ತಿಯ_ಚಾಕಚಕ್ಯತೆಯಿಂದ_ಕಾಳಿಂಗಸಪ೯ದಿಂದ_ಬದುಕುಳಿದ

#ಸ್ನೇಕ್_ಪ್ರಬಾಕರ್

  ಮೊನ್ನೆ ದಿನಾಂಕ 10- ಜನವರಿ -2021 ರ ಭಾನುವಾರ ಮಧ್ಯಾಹ್ನ ಕಾಳಿಂಗ ಸಪ೯ ಹಿಡಿಯುವ ವೇಳೆ ಅಚಾತುಯ೯ದಿಂದ ಆಯಾ ತಪ್ಪಿ ಬಿದ್ದು ಕಾಳಿಂಗ ಸಪ೯ ಎರೆಡು ಬಾರಿ ಅತಿ ಸಮೀಪದಲ್ಲಿ ಇವರ ಕಾಲು ಮತ್ತು ಮುಖಕ್ಕೆ ಕಚ್ಚುವ ಪ್ರಯತ್ನದಲ್ಲಿ ಇವರು ತಪ್ಪಿಸಿಕೊಂಡು ಕ್ಷಣ ಮಾತ್ರದಲ್ಲಿ ಎಡಗೈಯಲ್ಲಿ ಕಾಳಿಂಗ ಸಪ೯ ಹಿಡಿದು ಬದುಕುಳಿದ ವಿಡಿಯೋ ಶಿವಮೊಗ್ಗದ ಗೆಳೆಯರಾದ ಮಂಜು ಮಿಸ್ಟ್ ಮಾಡಿದ್ದು ಈಗ ದೇಶ ವಿದೇಶದಲ್ಲಿ ವೈರಲ್ ಆಗಿದೆ.
  ಇವತ್ತು ನನ್ನಲ್ಲಿ ಬಂದಾಗ ಆ ಘಟನೆ ಬಗ್ಗೆ ಸ್ನೇಕ್ ಪ್ರಬಾಕರ್ ಅವರ ಸಂದಶ೯ನ ಮಾಡಿದ ವಿಡಿಯೋ ಇಲ್ಲಿದೆ.
   ಇವರಿಗೇನಾದರು ಆಗಿದ್ದರೆ ಇವರ ಕುಟುಂಬ ಮಾತ್ರವಲ್ಲ ಇವರ ನಂಬಿ ಇವರ ಆಶ್ರಯದಲ್ಲಿರುವ ಅನಾಥರಿಗೂ ದೊಡ್ಡ ಆಪತ್ತಾಗುತ್ತಿತ್ತು, ಹಾವು ಹಿಡಿದು ಕಾಡಿಗೆ ಬಿಡುವ ಇವರಿಗೆ ಹಳ್ಳಿ ಜನ ಕೊಡುವ ಗೌರವ ಸಂಭಾವನೆಯೇ ಇವರ ಅನಾಥಾಶ್ರಮ ನಡೆಸಲು ಬೇಕಾದ ಅಥಿ೯ಕ ಮೂಲ.
   ಜೀವದ ಹಂಗು ತೊರೆದು ಮಲೆನಾಡಿನ ಹಳ್ಳಿಗಳ  ಮನೆಯ ಒಳಗೆ ಬರುವ ವಿಷದ ನಾಗರ, ಕಾಳಿಂಗ ಹಿಡಿದು ಕಾಡಿಗೆ ಬಿಡುವ ಇವರ ಕಾಯಕ ತುಂಬಾ ಅಪಾಯಕಾರಿಯೆ.
  ಸ್ನೇಕ್ ಪ್ರಬಾಕರ್ ಗೆ ಮತ್ತು ಅವರು ನಡೆಸುವ ಅನಾಥಾಶ್ರಮಕ್ಕೆ ನಿರಂತರ ಅಥಿ೯ಕ ಸಹಾಯದ ಅವಶ್ಯಕತೆ ಇದೆ, ನಾನು ಅನೇಕ ವರ್ಷದಿಂದ ನಿರಂತರವಾಗಿ ಪ್ರತಿ ತಿಂಗಳು 100kg ಊಟದ ಅಕ್ಕಿ ನೀಡುತ್ತಿದ್ದೇನೆ ಇದರಿಂದ ಮಾತ್ರ ಅಲ್ಲಿನ ಸಮಸ್ಯೆ ಬಗೆಹರಿಯುವುದಿಲ್ಲ ಅಲ್ಲಿರುವ ಅನಾಥರಿಗೆ ಊಟೋಪಚಾರ ಚಿಕಿತ್ಸೆಗೆ ಹೆಚ್ಚಿನ ವೆಚ್ಚ ಭರಿಸಲು ಸಹಾಯ ಮಾಡುವ ಮನಸ್ಸಿರುವವರು ಸ್ನೇಕ್ ಪ್ರಭಾಕರ್ ಗೆ ನೇರ ಸಂಪಕಿ೯ಸಿ ಸಹಾಯ ಮಾಡಲು ವಿನ೦ತಿಸುತ್ತೇನೆ.
  ಸ್ನೇಕ್ ಪ್ರಭಾಕರ್ ಸೆಲ್ ನಂಬರ್ 9008640558.
ಇವರ ಬ್ಯಾಂಕ್ ಅಕೌಂಟ್ ಮಾಹಿತಿ
 Padmashree charitable trust, Account number 1516101008488,IFSC CNRB 0001516,CANARA BANK kodur branch,phone number 9008640558

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...