Skip to main content

Blog number 1182.ನಮ್ಮ ಊರಿನ ಶ್ರೀ ವರಸಿದ್ದಿ ವಿನಾಯಕ ದೇವರ ಮೂಲ ವಿಗ್ರಹದ 3d ಸ್ಕ್ಯಾನಿಂಗ್ ನಿಂದ 3d ಪ್ರಿಂಟರ್ ನಲ್ಲಿ ಮೌಲ್ಡ್ ಮಾಡಿ ತಯಾರಿಸಿದ ಶ್ರೀ ವರಸಿದ್ಧಿ ವಿನಾಯಕ ದೇವರ ವಿಗ್ರಹಗಳು.

#ಇವತ್ತು_3d_ವಿಗ್ರಹ_ಬಂತು

#ನಮ್ಮೂರ_ವರಸಿದ್ದಿ_ವಿನಾಯಕ_ದೇವರದ್ದು

#ಡಿಸೆಂಬರ್_21ಕ್ಕೆ_ಆಕೃತಿ_3d_ಅವರು_ಸ್ಕ್ಯಾನ್_ಮಾಡಿದ್ದರು

#ಗೋವರ್ದನಅಂಕೋಲೆಕರ್_ಪುತ್ರ_ವಿಶ್ವವಸುಅ೦ಕೋಲೆಕರ್_ಇದನ್ನು_ಮೂರ್ತಿಯಾಗಿಸಿದ್ದಾರೆ.

#ಮೂಲ_ವಿಗ್ರಹಕ್ಕೆ_ಪಾಯಿಂಟ್001_ಕೂಡ_ವ್ಯತ್ಯಾಸವಿಲ್ಲ

     ಈ ಹಿಂದೆ 3ಡಿ ತಂತ್ರಜ್ಞಾನದಲ್ಲಿ ನಮ್ಮ ಊರಿನ ಶ್ರೀ ವರಸಿದ್ಧಿವಿನಾಯಕ ದೇವರ 3ಡಿ ಸ್ಕ್ಯಾನಿಂಗ್ ಆಕೃತಿ 3ಡಿ ಸಂಸ್ಥೆ ತಾನು ಹೊಸದಾಗಿ ಖರೀದಿಸಿದ 50 ಲಕ್ಷದ 3d ಸ್ಕ್ಯಾನರ್ ನಲ್ಲಿ ಸ್ಕ್ಯಾನ್ ಮಾಡಿ ನಂತರ ಅವರ 3ಡಿ ಪ್ರಿಂಟರ್ ನಲ್ಲಿ ಮೂಲ ವಿಗ್ರಹದ 5 ಇಂಚಿನ ಮಿನಿಯೇಚರ್ ಮೌಲ್ಡ್ ಮಾಡಿಕೊಟ್ಟರು.
https://arunprasadhombuja.blogspot.com/2022/12/blog-number-1141-50.html
  ಇದನ್ನು ಪ್ರಖ್ಯಾತ ವಿಶ್ವವ್ಯಾಪಿ ಗಣೇಶ ಪ್ರದರ್ಶನದ ಪ್ರಸಿದ್ಧಿಯ ಗೋವರ್ಧನ ಅಂಕೋಲೆಕರ್ ಅವರು ಅವರ ಪುತ್ರ ಬೆಂಗಳೂರಲ್ಲಿನ ಚಾಮರಾಜಪೇಟೆಯಲ್ಲಿ ಓಂ ಎಂಟರ್ಪ್ರೈಸೆಸ್ ಉದ್ಯಮ ನಡೆಸುವ ವಿಶ್ವವಸು ಅಂಕೋಲೆಕರ್ ಗೆ ಇದನ್ನು ಮೌಲ್ಡ್ ಮಾಡಿಸಿ ಪೈಬರ್ ನಲ್ಲಿ ವಿಗ್ರಹ ಮಾಡಿಸಿ ಸ್ಯಾಂಪಲ್ ಕಳಿಸಲು ತಿಳಿಸಿದ್ದರು.
   ಇವತ್ತು ವಿಶ್ವವಸು ಅಂಕೋಲೆಕರ್ 3 ವಿಬಿನ್ನ ಬಣ್ಣದಲ್ಲಿ ಮತ್ತು ಎರೆಡು ಪ್ರತ್ಯೇಕ ಪೀಠದಲ್ಲಿ ಒಟ್ಟು 5 ವರಸಿದ್ದಿ ವಿನಾಯಕ ದೇವರ ವಿಗ್ರಹ ಕಳಿಸಿದ್ದಾರೆ.
  ಸೋಮವಾರ ಮೂಲ ಕೃಷ್ಣ ಶಿಲಾ ವಿಗ್ರಹದ ಬಣ್ಣದಲ್ಲಿ ಇನ್ನೊಂದು ವಿಗ್ರಹ ಕಳಿಸಲಿದ್ದಾರೆ ಇದರಲ್ಲಿ ನಾವು ಆಯ್ಕೆ ಮಾಡುವ ವಿಗ್ರಹ ನಮ್ಮ ಬೇಡಿಕೆಗೆ ಅನುಗುಣವಾಗಿ ತಯಾರಿಸಿ ನೀಡಲಿದ್ದಾರೆ ಅದನ್ನು ದೇವಾಲಯದಲ್ಲಿ ಭಕ್ತರಿಗೆ ಖರೀದಿಸಲು ವ್ಯವಸ್ಥೆ ಮಾಡುವ ಉದ್ದೇಶ ಜಾತ್ರಾ ಸಮಿತಿಯ ಮತ್ತು ಟ್ರಸ್ಟ್ ನ ಉದ್ದೇಶವಾಗಿದೆ.
  ಇದೇ ತಿಂಗಳು ಅಂದರೆ 25 ಜನವರಿ 2023ರ ಬುಧವಾರ 17 ನೇ ವರ್ಷದ ಬ್ರಹ್ಮ ರಥೋತ್ಸವ, ಜಾತ್ರಾ ಕಾಯ೯ಕ್ರಮ ಇದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...