Skip to main content

Blog number 1181. ಗಂಜಿ ಮನೆತನದವರೇ ಒಂದು ಕಾಲದ ಮಲೆನಾಡಿನಲ್ಲಿ ಮರ ಅರಣ್ಯದಿಂದ ಮರ ಕತ್ತರಿಸಿ ಅವಶ್ಯಕತೆಯ ಆಕಾರದ ಮರ ಮಟ್ಟು ತಯಾರಿಸುತ್ತಿದ್ದರು, ಮರ ಕತ್ತರಿಸುವ ಮೊದಲು ಮರದಲ್ಲಿರುವ ದೈವ- ಬೂತಗಳಿಗೆ ಪ್ರಾರ್ಥಿಸಿ ಮನೆ ಕಟ್ಟುವ ಯಜಮಾನನಿಂದ ಮೊದಲ ಕೊಡಲಿ ಪೆಟ್ಟು ಸಾಂಕೇತಿಕವಾಗಿ ಹಾಕಿಸಿ ಮರ ಕೊಯ್ಯುವ ಪಾಪ ಮಾಲಿಕನಿಗೆ ವರ್ಗಾಯಿಸುತ್ತಿದ್ದರು.

#ಗಂಜಿ_ಮನೆತನದ_ಕುಲಕಸಬು

#ಮರ_ಕಡಿತಲೆ_ಮಾಡಿ_ಕೊಡುವುದು

#ಮರ_ಕೊಯ್ಯುವ_ಯಂತ್ರಗಳಿಲ್ಲದ_ಕಾಲದಲ್ಲಿ

#ಕರಾವಳಿಯ_ಗಂಜಿಯವರೆ_ಮಲೆನಾಡಿನ_ಮರಮಟ್ಟು_ತಯಾರಕರು.

#ವನದೇವತೆಯ_ಆರಾಧಕರು_ಗಂಜಿ_ಮನೆತನದವರು.

    ಮರ ಮಟ್ಟುಗಳನ್ನ ಕಾಡಿನಿ೦ದ ಕಡಿದು ಉಪಯೋಗಕ್ಕೆ ಬೇಕಾದ ಆಕಾರರಕ್ಕೆ ಕೊಯ್ಯುವ ಕೆಲಸ ಮಾಡುವವರಿಗೆ ಗಂಜಿಯವರು ಎನ್ನುತ್ತಾರೆ ಅವರೆಲ್ಲರ ಹೆಸರಿನ ಮುಂದೆ ಗಂಜಿ ಬರುತ್ತದೆ ಉದಾಹರಣೆಗೆ ಅವರಲ್ಲಿ ಗಣಪ ಎಂಬ ಹೆಸರಿದ್ದರೆ ಅವರು ಗಂಜಿ ಗಣಪ ಅಂತ.
     ಇವರು ವನದೇವಿಯ ಭಕ್ತರು, ಬೇಕಾದ ಸೂಕ್ತ ಮರ ಆಯ್ಕೆ ಮಾಡಿದ ಮೇಲೆ ಸುತ್ತ ಮುತ್ತ ಯಾವುದೇ ದೇವಾಲಯವಿದ್ದರೆ ಆ ಮರ ಕಡಿಯುವುದಿಲ್ಲ, ಶಕುನಗಳನ್ನ ಹೆಚ್ಚು ನಂಬುತ್ತಾರೆ, ಎಲ್ಲವೂ ಸರಿಯಾದ ಮರ ಆಯ್ಕೆ ಮಾಡಿದ ಮೇಲೆ ಯಾರಿಗೆ ಆ ಮರ ಬಳಕೆ ಆಗುತ್ತದೆ ಆ ಮನೆಯ ಯಜಮಾನನಿOದ ಮೊದಲ ಕೊಡಲಿ ಕಚ್ಚು ಹಾಕಿಸುತ್ತಾರೆ ಯಾಕೆಂದರೆ ಆ ಮರದಲ್ಲಿ ಯಾವುದೇ ಅಗೋಚರ ಶಕ್ತಿ ಇದ್ದರೆ ಗಂಜಿಯವರಿಗೆ ಬಾಧಿಸದಿರಲಿ ಎಂದು ಮರ ಕಡಿದ ಪಾಪ ತಮಗೆ ತಟ್ಟಬಾರದು ಎಂಬುದು ಅವರ ಉದ್ದೇಶ.
  ಬೇಕಾಬಿಟ್ಟ ಕಾಡು ಕಡಿಯುವವರು ಇವರಲ್ಲ, ನೂರು ಮರ ಇದ್ದರೆ ಅದರಲ್ಲಿ ಒಂದು ಮರ ಮಾತ್ರ ಇವರ ಆಯ್ಕೆ.
  ಇವರುಗಳು ಪಶ್ಚಿಮ ಘಟ್ಟ ಮತ್ತು ಕರಾವಳಿ ಅಂಚಿನ ಬೈಂದೂರು, ಭಟ್ಕಳ, ಗೇರುಸೊಪ್ಪೆ, ಕುಮಟಾದಲ್ಲಿ ಹೆಚ್ಚಾಗಿ ಇದ್ದಾರೆ.
  ಇದೇ ರೀತಿ ಕಾಸರಗೋಡು, ಕುಂಬಳೆ, ಬೇಕಲ್ ನ ಮಲೆಯಾಳಿ ಮರ ಕೊಯ್ಯುವವರಿದ್ದಾರೆ ಆದರೆ ಅವರಿಗೆ ಗಂಜಿಯವರ೦ತೆ ನಿಯಮ ಇಲ್ಲ.
  ಇದು ನಾನು ಬರೆದು ಪ್ರಕಟಸಿರುವ ಕೆಳದಿ ರಾಣಿ ಚOಪಕಾ ಕಾದ೦ಬರಿಯಲ್ಲಿ ಆ ಕಾಲದಲ್ಲಿ ಮಲೆನಾಡಿನಲ್ಲಿ ಮನೆ ಕಟ್ಟುವವರಿಗೆ ಕಾಡಿನಿಂದ ಮರ ಕಡಿದು ಮರ ಮಟ್ಟು ತಯಾರಿಸಿ ಕೊಡುತ್ತಿದ್ದ ಗಂಜಿಯವರ ಉಲ್ಲೇಖದ ಒಂದು ಅಧ್ಯಾಯ ಇದೆ.    ಈಗ ಗಂಜಿಯವರಾರು ಕುಲ ಕಸುಬು ಮಾಡುತ್ತಿಲ್ಲ ಅವರ ಹೆಸರಿನ ಮುಂದಿನ ಗಂಜಿ ನಾಮ ಅದೃಶ್ಯ ಆಗಿದೆ, 1963ರಲ್ಲಿ ನಮ್ಮ ಮೂಲ ಮನೆಗೆ ಗಂಜಿ ಗಣಪಣ್ಣರ ತಂಡ ಮರ ಮಟ್ಟು ತಯಾರಿಸಿ ಕೊಟ್ಟಿದ್ದರು.
  ನಿಯಮಗಳಿದ್ದ ಕಾಲದಲ್ಲಿ ಪ್ರಕೃತಿ ಸಮತೋಲನ ಇತ್ತು, ಈಗ ನಿಯಮಗಳಿಲ್ಲ ಎಲ್ಲಿ ನೋಡಿದರು ಪರಿಸರ ನಾಶ ಇದರ ಬಗ್ಗೆ ಪರಿಸರ ಪ್ರೇಮಿಗಳು ಹೆಚ್ಚಿನ ಸಂಶೋದನೆ ಮಾಡಬಹುದು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...