Skip to main content

Blog number 1181. ಗಂಜಿ ಮನೆತನದವರೇ ಒಂದು ಕಾಲದ ಮಲೆನಾಡಿನಲ್ಲಿ ಮರ ಅರಣ್ಯದಿಂದ ಮರ ಕತ್ತರಿಸಿ ಅವಶ್ಯಕತೆಯ ಆಕಾರದ ಮರ ಮಟ್ಟು ತಯಾರಿಸುತ್ತಿದ್ದರು, ಮರ ಕತ್ತರಿಸುವ ಮೊದಲು ಮರದಲ್ಲಿರುವ ದೈವ- ಬೂತಗಳಿಗೆ ಪ್ರಾರ್ಥಿಸಿ ಮನೆ ಕಟ್ಟುವ ಯಜಮಾನನಿಂದ ಮೊದಲ ಕೊಡಲಿ ಪೆಟ್ಟು ಸಾಂಕೇತಿಕವಾಗಿ ಹಾಕಿಸಿ ಮರ ಕೊಯ್ಯುವ ಪಾಪ ಮಾಲಿಕನಿಗೆ ವರ್ಗಾಯಿಸುತ್ತಿದ್ದರು.

#ಗಂಜಿ_ಮನೆತನದ_ಕುಲಕಸಬು

#ಮರ_ಕಡಿತಲೆ_ಮಾಡಿ_ಕೊಡುವುದು

#ಮರ_ಕೊಯ್ಯುವ_ಯಂತ್ರಗಳಿಲ್ಲದ_ಕಾಲದಲ್ಲಿ

#ಕರಾವಳಿಯ_ಗಂಜಿಯವರೆ_ಮಲೆನಾಡಿನ_ಮರಮಟ್ಟು_ತಯಾರಕರು.

#ವನದೇವತೆಯ_ಆರಾಧಕರು_ಗಂಜಿ_ಮನೆತನದವರು.

    ಮರ ಮಟ್ಟುಗಳನ್ನ ಕಾಡಿನಿ೦ದ ಕಡಿದು ಉಪಯೋಗಕ್ಕೆ ಬೇಕಾದ ಆಕಾರರಕ್ಕೆ ಕೊಯ್ಯುವ ಕೆಲಸ ಮಾಡುವವರಿಗೆ ಗಂಜಿಯವರು ಎನ್ನುತ್ತಾರೆ ಅವರೆಲ್ಲರ ಹೆಸರಿನ ಮುಂದೆ ಗಂಜಿ ಬರುತ್ತದೆ ಉದಾಹರಣೆಗೆ ಅವರಲ್ಲಿ ಗಣಪ ಎಂಬ ಹೆಸರಿದ್ದರೆ ಅವರು ಗಂಜಿ ಗಣಪ ಅಂತ.
     ಇವರು ವನದೇವಿಯ ಭಕ್ತರು, ಬೇಕಾದ ಸೂಕ್ತ ಮರ ಆಯ್ಕೆ ಮಾಡಿದ ಮೇಲೆ ಸುತ್ತ ಮುತ್ತ ಯಾವುದೇ ದೇವಾಲಯವಿದ್ದರೆ ಆ ಮರ ಕಡಿಯುವುದಿಲ್ಲ, ಶಕುನಗಳನ್ನ ಹೆಚ್ಚು ನಂಬುತ್ತಾರೆ, ಎಲ್ಲವೂ ಸರಿಯಾದ ಮರ ಆಯ್ಕೆ ಮಾಡಿದ ಮೇಲೆ ಯಾರಿಗೆ ಆ ಮರ ಬಳಕೆ ಆಗುತ್ತದೆ ಆ ಮನೆಯ ಯಜಮಾನನಿOದ ಮೊದಲ ಕೊಡಲಿ ಕಚ್ಚು ಹಾಕಿಸುತ್ತಾರೆ ಯಾಕೆಂದರೆ ಆ ಮರದಲ್ಲಿ ಯಾವುದೇ ಅಗೋಚರ ಶಕ್ತಿ ಇದ್ದರೆ ಗಂಜಿಯವರಿಗೆ ಬಾಧಿಸದಿರಲಿ ಎಂದು ಮರ ಕಡಿದ ಪಾಪ ತಮಗೆ ತಟ್ಟಬಾರದು ಎಂಬುದು ಅವರ ಉದ್ದೇಶ.
  ಬೇಕಾಬಿಟ್ಟ ಕಾಡು ಕಡಿಯುವವರು ಇವರಲ್ಲ, ನೂರು ಮರ ಇದ್ದರೆ ಅದರಲ್ಲಿ ಒಂದು ಮರ ಮಾತ್ರ ಇವರ ಆಯ್ಕೆ.
  ಇವರುಗಳು ಪಶ್ಚಿಮ ಘಟ್ಟ ಮತ್ತು ಕರಾವಳಿ ಅಂಚಿನ ಬೈಂದೂರು, ಭಟ್ಕಳ, ಗೇರುಸೊಪ್ಪೆ, ಕುಮಟಾದಲ್ಲಿ ಹೆಚ್ಚಾಗಿ ಇದ್ದಾರೆ.
  ಇದೇ ರೀತಿ ಕಾಸರಗೋಡು, ಕುಂಬಳೆ, ಬೇಕಲ್ ನ ಮಲೆಯಾಳಿ ಮರ ಕೊಯ್ಯುವವರಿದ್ದಾರೆ ಆದರೆ ಅವರಿಗೆ ಗಂಜಿಯವರ೦ತೆ ನಿಯಮ ಇಲ್ಲ.
  ಇದು ನಾನು ಬರೆದು ಪ್ರಕಟಸಿರುವ ಕೆಳದಿ ರಾಣಿ ಚOಪಕಾ ಕಾದ೦ಬರಿಯಲ್ಲಿ ಆ ಕಾಲದಲ್ಲಿ ಮಲೆನಾಡಿನಲ್ಲಿ ಮನೆ ಕಟ್ಟುವವರಿಗೆ ಕಾಡಿನಿಂದ ಮರ ಕಡಿದು ಮರ ಮಟ್ಟು ತಯಾರಿಸಿ ಕೊಡುತ್ತಿದ್ದ ಗಂಜಿಯವರ ಉಲ್ಲೇಖದ ಒಂದು ಅಧ್ಯಾಯ ಇದೆ.    ಈಗ ಗಂಜಿಯವರಾರು ಕುಲ ಕಸುಬು ಮಾಡುತ್ತಿಲ್ಲ ಅವರ ಹೆಸರಿನ ಮುಂದಿನ ಗಂಜಿ ನಾಮ ಅದೃಶ್ಯ ಆಗಿದೆ, 1963ರಲ್ಲಿ ನಮ್ಮ ಮೂಲ ಮನೆಗೆ ಗಂಜಿ ಗಣಪಣ್ಣರ ತಂಡ ಮರ ಮಟ್ಟು ತಯಾರಿಸಿ ಕೊಟ್ಟಿದ್ದರು.
  ನಿಯಮಗಳಿದ್ದ ಕಾಲದಲ್ಲಿ ಪ್ರಕೃತಿ ಸಮತೋಲನ ಇತ್ತು, ಈಗ ನಿಯಮಗಳಿಲ್ಲ ಎಲ್ಲಿ ನೋಡಿದರು ಪರಿಸರ ನಾಶ ಇದರ ಬಗ್ಗೆ ಪರಿಸರ ಪ್ರೇಮಿಗಳು ಹೆಚ್ಚಿನ ಸಂಶೋದನೆ ಮಾಡಬಹುದು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...