Skip to main content

Blog number 1193. ನಮ್ಮ ತಂದೆ ಮಾರಾಟ ರದ್ದು ಮಾಡಿ ನನಗೆ ನೀಡಿದ ಜಮೀನು

1972ರಲ್ಲಿ ನಮ್ಮ ತಂದೆಗೆ ದರಕಾಸ್ತುನಲ್ಲಿ ಸಾಗರ ತಾಲ್ಲೂಕಿನ ಆನಂದಪುರಂ ಹೋಬಳಿಯ ತಾವರೇಹಳ್ಳಿ ಗ್ರಾಮದ ಸ.ನಂ.44ರಲ್ಲಿ 6 ಎಕರೆ ಖುಷ್ಕಿ ಜಮೀನು ಮಂಜೂರಾಗಿತ್ತು, ಆ ಸ್ಥ೪ದ ಹೆಸರು ಜೇಡಿ ಸರ ಯಾಕೆಂದರೆ ಅಲ್ಲಿನ ಮಣ್ಣಿನಲ್ಲಿ ಜೇಡಿ ಜಾಸ್ತಿ ಹಾಗಾಗಿ ಇದು ಫಲವತ್ತಾದ ಜಮೀನಲ್ಲ ಬೇರೆ ಕಡೆ ಜಮೀನು ಮಂಜೂರು ಮಾಡಿ ಅಂತ ನಮ್ಮ ತಂದೆ ಮತ್ತು ಅನೇಕರು ಸಕಾ೯ರಕ್ಕೆ ಅಜಿ೯ ಸಲ್ಲಿಸಿ ಈ ಜಮೀನು ಬೇಡ ಅಂತ ತೀಮಾ೯ನಿಸಿದ್ದರು.
       ಸಕಾ೯ರ ಇವರ ಅಜಿ೯ ಪುರಸ್ಕರಿಸಲಿಲ್ಲ, ನಾನು ಚಿಕ್ಕವನಿದ್ದಾಗ ಈ ಜಮೀನು ಖರೀದಿಸಲು ಆನಂದಪುರದ ಟಿಂಬರ್ ಕಂಟ್ರಾಕ್ಟರ್ ಚಂದ್ರಹಾಸ ಶೇಟ್ ಮತ್ತು ಮಧ್ಯಸ್ಥಿಕೆಗಾಗಿ ಗ್ರಾಮ ಪಂಚಾಯತ್ ನೌಕರರಾದ ಪ್ರತಾಪ್ ಸಿಂಗ್ ಮತ್ತು ಬಳೆಗಾರ್ ಸುಬ್ಬಣ್ಣ ಬಂದಿದ್ದರು.
       ಒಳಗಿನ ಕೋಣೆಯಲ್ಲಿ ಮಾರಾಟದ ಮಾತುಕಥೆ ಅಂತಿಮ ಹಂತಕ್ಕೆ ಬರುತ್ತಿತ್ತು. ಹೊರಗಿನ ಕೋಣೆಯಲ್ಲಿ ಬುಗುರಿಯನ್ನ ಗಾಳಿಯಲ್ಲಿ ಹಾರಿಸಿ ಅಂಗೈ ಮೇಲೆ ತಿರುಗಿಸುತ್ತಾ ಒಳಗಿನ ವ್ಯವಹಾರ ಆಲೈಸುತ್ತಿದ್ದೆ.
           ಎಕರೆಗೆ ಅಂತಿಮವಾಗಿ ನಮ್ಮ ತಂದೆ 2500 ರಂತೆ 6 ಎಕರೆಗೆ 15000 ಕೇಳುತ್ತಿದ್ದರು ಆದರೆ ಚಂದ್ರಹಾಸ ಶೇಟ್ರವರು 12000ಕ್ಕೆ ಪಟ್ಟು ಹಿಡಿದಿದ್ದರು ಅಷ್ಟರಲ್ಲಿ ಒಳಕ್ಕೆ ಇಣುಕಿದ ನಾನು ಅಪ್ಪಯ್ಯ ಆ ಜಮೀನು ನನಗೆ ಇರಲಿ ಅಂದೆ, ನನಗೆ ಬೇಕೆ ಬೇಕು ಎನ್ನುವ ಹಟವಾಗಲಿ ಅಥವ ಇನ್ನಾವುದೆ ಉದ್ದೇಶವಿರಲಿಲ್ಲ, ಆದರೆ ನಮ್ಮ ತಂದೆ ಈ ವ್ಯವಹಾರ ಅಲ್ಲಿಗೆ ತುಂಡರಿಸಿದರು " ಚOದ್ರಹಾಸ ಸರಿ ಬಿಡು ನನ್ನ ಮಗನಿಗೆ ಈ ಜಮೀನು ಇರಲಿ" ಅಂದರು.ಆಗ ಖರೀದಿದಾರರು ನಮ್ಮ ತಂದೆಗೆ " ಈ ಸಣ್ಣ ಹುಡುಗನಿಗೆ ಏನು ಗೊತ್ತು ಕೃಷ್ಣಣ್ಣ 15000ನೆ ಕೊಡುತೀನಿ ನನಗೆ ಇರಲಿ" ಅಂದರು,ಮುಂದೆ ಅಂತಿಮ ತೀಮಾ೯ನ ಏನಂತ ಕಾಯದೆ ಆಟಕ್ಕೆ ಓಡಿದೆ.
         ನಮ್ಮ ತಂದೆಯಿಂದ ಬಂದ ಈ ಜಮೀನಿನಲ್ಲಿ ಏನೆಲ್ಲ ಪ್ರಯತ್ನ ಮಾಡಿದೆ, ಅಡಿಕೆ ಹಾಕಿದೆ ಫಸಲು ಬರುವ ಮೊದಲೇ ಯಾರೋ ದುರುದ್ದೇಶದಿಂದ ಬೆಂಕಿ ಕೊಟ್ಟು ಸುಟ್ಟರು, ನಂತರ ಮಾವು, ಸಪೋಟ ಮತ್ತು ತೆಂಗು ಕೃಷಿ ಮಾಡಿದೆ ಆದರೆ ಅಲ್ಲಿನ ಜಾನುವಾರುಗಳಿಗಿಂತ ಹೆಚ್ಚು ಹೊಟ್ಟೆಕಿಚ್ಚು ಅಲ್ಲಿನ ಕೆಲವರಿಗಿತ್ತಾ ಗೊತಿಲ್ಲ, ಆದರೆ ಜಾನುವಾರಿಗಿಂತ ಅಂತ ಜನರೇ ಬೇಲಿ ಕಿತ್ತಿ ಜಾನುವಾರನ್ನ ಬಿಡುತ್ತಿದ್ದರು.
       ನಂತರ ಈ ಎಲ್ಲಾ ಕೃಷಿಗಿ೦ತ ರಬ್ಬರ್ ಬೆಳೆ ಬೆಳೆಯಲು ತೀಮಾ೯ನಿಸಿದೆ, ಮುಂಬಾಳಿನ ಪಾದರ್ ಜೋಸ್ ರಬ್ಬರ್ ಬೆಳೆಯಲು ಹೇಳಿದರೆ ಉತ್ಸಾಹ ತೋರದೆ ಕಾಲಹರಣ ಮಾಡಿದ್ದು ದೊಡ್ಡ ತಪ್ಪು ಅಂತ ಅನ್ನಿಸಿತ್ತು. ರಬ್ಬರ್ ಸಸಿ ನೆಟ್ಟರೂ ನನಗೆ ತೊoದರೆ ಕೊಡುವವರು ತಪ್ಪಲಿಲ್ಲ ದೊಡ್ಡ ಅಗಳು ತೆಗೆದೆ, ತಂತಿ ಬೇಲಿ ಮಾಡಿದೆ, ಪ್ರಯಾಸದ 8 ವಷ೯ದ ಕೃಷಿ ಈ ವಷ೯ ಅಲ್ಪ ಅದಾಯ ನೀಡುತ್ತಿದೆ, ಮಳೆಗಾಲದ ನಂತರ ಹೆಚ್ಚು ಲಾಭ ಗ್ಯಾರಂಟಿ ಅಂತ ರಬ್ಬರ್ ಟ್ಯಾಪರ್ ಗಳು ಹೇಳುತ್ತಿದ್ದಾರೆ.
       ವ್ಯವಹಾರಗಳಲ್ಲಿ ಹೆಚ್ಚು ಲಾಭ ಇರಬಹುದು ಅಲ್ಲಿ ಶಾಂತಿ ನೆಮ್ಮದಿ ಖಂಡಿತಾ ಇಲ್ಲ ಹಾಗಾಗಿ ನನಗೆ ನನ್ನ ಜಮೀನಿನಲ್ಲಿ ಒಂದು ಮನೆ, ಈಜು ಕೊಳ ಮಾಡಬೇಕೆಂಬ ಆಸೆ ಹುಟ್ಟಿದೆ.ಈಗಾಗಲೆ ಸುತ್ತಲೂ ವಾಕಿಂಗ್ ಟ್ರಾಕ್ ಮಾಡಿದ್ದೇನೆ.
        ಮೊನ್ನೆ ಇಡೀ ದಿನ ಅಲ್ಲಿ ಕಳೆದೆ, ಕೆಲಸದವರ ಜೊತೆ ತಿರುಗಾಟ ಮಧ್ಯಾನದ ಊಟ ಆಯಿತು, ಅಲ್ಲಿನ ಕೆಲ ಮೊಬೈಲ್ ಫೋಟೊಗಳು ಕೂಡ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...