Skip to main content

Blog number 1195. ನಮ್ಮ ಊರಿನ ಕೇರಳ ಸಂಜಾತ ಗೆಳೆಯ ಬೇಬಿ ಉಲ್ ಹನನ್ ಪುತ್ರಿ ಇಂಜಿನಿಯರ್ ಮರಿಯಾ ಬೇಬಿ ವಿವಾಹ ಆಹ್ವಾನ ಪತ್ರಿಕೆ.

#ನಮ್ಮ_ಊರಿನ_ಮರಿಯಾ_ಬೇಬಿ_ವಿವಾಹ_ಆಹ್ವಾನ_ಪತ್ರಿಕೆ.

#ಪತ್ರಿಕೆ_ನೀಡಲು_ಸ್ವತಃ_ಮದುಮಗಳು_ಬಂದಿದ್ದರು

#ಸಹೋದರ_ಅಮಲ್_ಮತ್ತು_ಮರಿಯಾ_ಗೆಳತಿ_ಜೊತೆಯಾಗಿ

#ಇವರ_ಕುಟುಂಬ_ಕೇರಳದಿಂದ_ಬಂದವರು

#ಬೇಬಿ_ಉಲ್_ಹನನ್_ದಂಪತಿಗಳ_ಈ_ಮಕ್ಕಳ_ಸಾಧನೆ_ಸಣ್ಣದಲ್ಲ.

#ನೂತನ_ದಂಪತಿಗಳಿಗೆ_ಶುಭಹಾರೈಕೆಗಳು.
   
   ಬೇಬಿ ಉಲ್ ಹನನ್ ಕುಟುಂಬ 1991 - 92ರಲ್ಲಿ ನನ್ನ ಯಡೇಹಳ್ಳಿ ಗ್ರಾಮ ಪಂಚಾಯತ್ ನ ಹಾದೀಬೀಸು ಎಂಬಲ್ಲಿ ಜಮೀನು ಖರೀದಿಸಿ ಕೃಷಿ ಪ್ರಾರಂಭಿಸಿದರು.
   ರಬ್ಬರ್, ಅಡಿಕೆ, ಗೇರು ಮತ್ತು ತಾಳೆ ಕೃಷಿ ಜೊತೆಯಲ್ಲಿ ಬೇಬಿ ಸ್ಥಳಿಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಚಿತವಾಗಿ ಉಪನ್ಯಾಸ ಮಾಡುತ್ತಿದ್ದರು.
   ನಂತರ ಬಿಹಾರದಲ್ಲಿನ ಶಿಕ್ಷಣ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು ಅಲ್ಲಿಂದ ಬಂದು ಪುನಃ ಕೃಷಿಯಲ್ಲಿ ತೊಡಗಿದಾಗಲೇ ಕೆಲವು ಹಿತ ಶತೃಗಳು ಇವರ ಜಮೀನಿನ ವಿಚಾರವಾಗಿ ಇವರಿಗೂ ಇವರ ತಂದೆ ತಾಯಿಗೂ ಬಿನ್ನಾಭಿಪ್ರಾಯ ತಂದರು ಅದೆಲ್ಲವನ್ನು ಬಗೆಹರಿಸುವಲ್ಲಿ ಇವರ ದೊಡ್ಡ ಮಗಳು ಮರಿಯಾ ಇಂಜಿನಿಯರ್ ಆಗಿ ಕಾಂಗ್ನಿಜೆಂಟ್ ಕಂಪನಿಯಲ್ಲಿ ಉದ್ಯೋಗ ಪಡೆದರು.
  ಮಗ ಅಮಲ್ ಕೂಡ ಮ್ಯಾನೇಜ್ ಮೆಂಟ್ ಪದವಿದರನಾಗಿ ಉತ್ತಮ ಉದ್ಯೋಗದಲ್ಲಿ ಇದ್ದಾರೆ ಈ ಸಂದರ್ಭದಲ್ಲೆ ಮರಿಯಾ ವಿವಾಹ ಆಹ್ವಾನ ಪತ್ರಿಕೆ ನೀಡಲು ನನ್ನಲ್ಲಿಗೆ ಅವರ ಸಹೋದರ ಮತ್ತು ಮರಿಯಾ ಸಹೋದ್ಯೋಗಿ ಗೆಳತಿ ಜೊತೆ ನಿನ್ನೆ ಬಂದಿದ್ದರು.
   ಈ ಕುಟುಂಬ ನಮ್ಮ ಊರಿಗೆ ಬಂದಾಗ ಇವರಿಗೆ ಅವರ ಮಾತೃ ಬಾಷೆ ಮಲೆಯಾಳ ಮಾತ್ರ ಗೊತ್ತಿತ್ತು, ಇವರ ತಂದೆ ಬೇಬಿಗೆ ಮಾತ್ರ ಮಲೆಯಾಳದ ಜೊತೆ ಇಂಗ್ಲೀಷ್ ಚೆನ್ನಾಗಿ  ಬರುತ್ತಿತ್ತು.
   ಈ ಇಬ್ಬರೂ ಮಕ್ಕಳನ್ನು ಸರ್ಕಾರಿ ಕನ್ನಡ ಮಾಧ್ಯಮ ಶಾಲೆಯಲ್ಲೇ ವಿದ್ಯಾಬ್ಯಾಸ ಕೊಡಿಸಿದರು ಆಗ ಇವರ ಮನೆಗೆ ವಿದ್ಯುತ್ ಸಂಪರ್ಕ ಕೂಡ ಇರಲಿಲ್ಲ, ಈ ಮಕ್ಕಳು ಪದವಿ ವಿದ್ಯಾಬ್ಯಾಸ ಪಡೆದ ಮೇಲೆ ವಿದ್ಯುತ್ ಬಂದಿದೆ.
   ಕೇರಳದಿಂದ ಕರ್ನಾಟಕಕ್ಕೆ ವಲಸೆ ಬಂದು ಇಲ್ಲಿನ ಕನ್ನಡ ಭಾಷೆಯಲ್ಲಿ ಓದು ಪ್ರಾರಂಬಿಸಿ, ವಿದ್ಯುತ್ ಸಂಪರ್ಕ ಇಲ್ಲದೇ ಇಂಜಿನಿಯರ್ ಆದ ಮರಿಯಾಳ ಸಾದನೆ ಸಣ್ಣದಲ್ಲ ಅದೇ ರೀತಿ ಇವರ ತಮ್ಮ ಅಮಲ್ ಕೂಡ.
  ನಾಡಿದ್ದು ಸೋಮವಾರ ಮರಿಯಾಳ ವಿವಾಹ ಇಡುವಳ್ಳಿಯ ಚರ್ಚ್ ನಲ್ಲಿ ನೆರವೇರಲಿದೆ, ನನ್ನ ಗೆಳೆಯ ಬೇಬಿ ಉಲ್ ಹನನ್ ಮಗಳಾದ ಪ್ರತಿಭಾವಂತಳಾದ ಮರಿಯಾಬೇಬಿ ವಿವಾಹ ಮಹೋತ್ಸವಕ್ಕೆ ಶುಭ ಹಾರೈಸುತ್ತಾ ದೇವರು ನೂತನ ದಂಪತಿಗಳಿಗೆ ಆಯುರಾರೋಗ್ಯ - ಆಯಸ್ಸು- ಐಶ್ವಯ೯ ದಯಪಾಲಿಸಲಿ ಎಂದು ಹಾರೈಸುತ್ತೇನೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...