Skip to main content

Blog number 1198. ಜಂಗಲ್ ವಾಲೆ ಬಾಬಾ ಜೈನ ಸಂತರು ನಮ್ಮಲ್ಲಿ ತಂಗಿದ್ದರು ಅವರ ಜೊತೆ ಸತ್ಸಂಗ ಮತ್ತು ಶಿವಮೊಗ್ಗ ಜಿಲ್ಲಾ ಪತ್ರಿಕೆ ಜನ ಹೋರಾಟಕ್ಕೆ ಸಂದರ್ಶನ ಮಾಡಿದ ಭಾಗ್ಯ ನನ್ನದು.

#ಜಂಗಲ್ ವಾಲೆ ಬಾಬ ಎಂದು ಪ್ರಖ್ಯಾತರಾಗಿದ್ದ ಜೈನ ಮುನಿ ರಾಷ್ಟ್ರ ಸಂತ 108 ಶ್ರೀ ಚಿನ್ಮಯ ಸಾಗರ ಮಹಾರಾಜರು ಅತ್ಯಂತ ಸಣ್ಣ ವಯಸ್ಸಿನಲ್ಲಿ ಸಲ್ಲೇಖನ ವೃತ (ಕೇವಲ ನೀರು ಮಾತ್ರ ಸೇವನೆ) ಕೈಗೊಂಡು ನಿನ್ನೆ ಶನಿವಾರದಿಂದ (12 ಅಕ್ಟೋಬರ್ 2019) ದಿಂದ ಯಮ ಸಲ್ಲೇಖನ ವೃತ ಅಂದರೆ ನೀರು ಸ್ವೀಕರಿಸದೆ ದೇಹ ತ್ಯಾಗಕ್ಕೆ ಮುಂದಾಗಿ ದೇಹ ತ್ಯಾಗ ಮಾಡಿದ್ದಾರೆ#.
 
  ಇಂತಹ ಪುಣ್ಯಪುರುಷರು ನಮ್ಮ ಕಲ್ಯಾಣ ಮಂಟಪದಲ್ಲಿ ತಂಗಿದ್ದರು,ಇವರ ಜೊತೆ ಕೆಲಸಮಯ ಕಳೆದದ್ದು, ಪತ್ರಿಕಾ ಸಂದಶ೯ನ ಮಾಡಿದ್ದು ನನ್ನ ಸೌಬಾಗ್ಯ ಮತ್ತು ಪೂವ೯ಜನ್ಮದ ಪುಣ್ಯ ಎಂದು ಬಾವಿಸುತ್ತೇನೆ ಇವರ ಬಗ್ಗೆ ನಾನು ಬರೆದ ಬ್ಲಾಗ್ ಲೇಖನ ಯಥಾವತ್ತು ಇಲ್ಲಿ ಹಾಕಿದ್ದೇನೆ.

 ಇಡೀ ದೇಶದಲ್ಲಿ ಜಂಗಲ್ ವಾಲೆ ಬಾಬ ಅಂತ ಚಿರಪರಿಚಿತರಾದ ಜೈನ ಮುನಿ ರಾಷ್ಟ್ರ ಸಂತ 108 ಮುನಿ ಶ್ರೀ ಚಿನ್ಮಯ ಸಾಗರ ಮಹರಾಜರು ನಮ್ಮಲ್ಲಿ ತ0ಗಿದ್ದರು ಮತ್ತು ಅವರನ್ನ ಶಿವಮೊಗ್ಗದ ಶೃ೦ಗೇಶ್ ರ ಜನ ಹೋರಾಟ ಪತ್ರಿಕೆಗೆ ಸಂದಶ೯ನ ಮಾಡಿದ್ದೆ ಅಂದರೆ ಅವರನ್ನ ಬಲ್ಲವರು ನಂಬುವುದಿಲ್ಲ.
    ಯಾಕೆಂದರೆ ಅವರು ಆಚರಿಸುವ ಚಾತುಮಾ೯ಸಕ್ಕೆ ಅನೇಕ ರಾಜ್ಯದ ಮುಖ್ಯಮಂತ್ರಿಗಳು, ಕೇಂದ್ರ ಸಕಾ೯ರದ ಮಂತ್ರಿಗಳು, ಉನ್ನತ ಹುದ್ದೆಯ ಅಧಿಕಾರಿಗಳು ಅವರನ್ನ ಹುಡುಕಿಕೊಂಡು ಬರುತ್ತಾರೆ.
      ರಾಜೀವ್ ಗಾ೦ದಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮನ್ಮೋಹನ್ ಸಿಂಗ್, ಮೋದಿ ಇವರೆಲ್ಲ ಇವರಿಗೆ ನೇರ ಸಂಪಕ೯ ಇರುವವರು, 2015ರಲ್ಲಿ ಇವರು ಕನಾ೯ಟಕಕ್ಕೆ ಬಂದಾಗ ಬೆಳಗಾಂ ಜಿಲ್ಲೆಯ ಖಾನಾಪುರದ ದಟ್ಟ ಅರಣ್ಯದಲ್ಲಿ ಚಾತುಮಾ೯ಸ ನಡೆಸಿದಾಗ ಅನೇಕ ಉತ್ತರ ಭಾರತದ ರಾಜ್ಯಗಳ ಮುಖ್ಯಮಂತ್ರಿಗಳು ಇವರ ಬೇಟಿಗೆ ಬಂದಿದ್ದರು, ಜೈನ ಪ್ರಮುಖರಾದ ದಮ೯ ಸ್ಥಳದ ವೀರೇ೦ದ್ರ ಹೆಗ್ಗೆಡೆಯವರಿಗೂ ಇವರ ದಶ೯ನ ಸಿಕ್ಕಿಲ್ಲ ಅಂತ ಮಹಾರಾಷ್ಟ್ರದ ಸತಾರದ ಜೈನ ಪ್ರಮುಖರು ಹೇಳಿದರು.
       ಅವಾಗ ಅವರನ್ನ ಸಂದಶಿ೯ಸಿದ ಪತ್ರಿಕೆ ಮತ್ತು ಪೋಟೋ ನೋಡಿದ ಅವರು ನನಗೆ ನೀವೇ ಪುಣ್ಯವಂತರು ಅಂದರು.
      ನನಗೆ ಇಂತ ಅವಕಾಶ ಯಾಕೆ ಸಿಗುತ್ತೆ ಗೊತ್ತಿಲ್ಲ ಆದರೆ ಸಾದು ಸಂತರು ನಮ್ಮಲ್ಲಿ ಬರುತ್ತಾರೆ ಉಳಿಯುತ್ತಾರೆ ಹಾಗು ಯಾರ ಹತ್ತಿರ ಬೆರೆಯದವರು ನನ್ನ ಹತ್ತಿರ ಆತ್ಮೀಯವಾಗಿ ಬೆರೆತು, ಕಾಲ ಕಳೆದು ಹೋಗುವಾಗ ಆಶ್ರೀವಾದ ಮಾಡಿ ಹೋಗುತ್ತಾರೆ.
 
       ನನ್ನ ತಂದೆ ಕೃಷ್ಣಪ ಮತ್ತು ತಾಯಿ ಸರಸಮ್ಮರ ಸ್ಮರಣಾಥ೯ ನಿಮಿ೯ಸಿರುವ "ಕೃಷ್ಣ ಸರಸ ಕನ್ವೆನ್ಷನ್ ಹಾಲ್" ನ ಮಹಿಮೆ ಅಂತ ಬಾವಿಸುತ್ತೇನೆ.
        ಹಿಂದಿನ ದಿನ ಸಾಗರದ ಜೈನ ಮುಖಂಡರಾದ ರಾಜ್ ಕುಮಾರ್ ಜೈನ್ ಮತ್ತು ವಿ.ಟಿ.ಸ್ವಾಮಿ ಬಂದು ನಾಳೆ ಒಬ್ಬ ಸಂತರು ಬರುತ್ತಾರೆ ಅವರಿಗೆ ತಂಗಲು ವ್ಯವಸ್ಥೆ ಮಾಡಬೇಕಾಗಿ ತಿಳಿಸಿದರು ಅದರಂತೆ ಮರುದಿನ ಬಂದವರು ಜಂಗಲ್ ವಾಲೆ ಬಾಬ.
        ಅವರು ಬಂದು ವಿರಾಜಮಾನರಾದ ನಂತರ ಮಾಲಿಕರನ್ನ ಕರೆಯಿರಿ ಅಂದರಂತೆ ಅವರಾಗಿ ಕರೆದದ್ದರಿಂದ ಹೋಗಿ ದಶ೯ನ ಪಡೆದು ಅವರನ್ನ ಮಾತಿಗೆ ಎಳೆದೆ, ಶಿವಮೊಗ್ಗದ ಜನ ಹೋರಾಟ ದಿನಪತ್ರಿಕೆಗೆ ಅವರ ಅನುಮತಿಯಿಂದ ಸಂದಶ೯ನ ಮಾಡಿದೆ, ಅವರು 3000ಕ್ಕೂ ಹೆಚ್ಚು ನಕ್ಸಲೈಟ್ಸ್ ರನ್ನ ಮುಖ್ಯ ವಾಹಿನಿಗೆ ತಂದವರು, ಹೆಚ್ಚಾಗಿ ಅರಣ್ಯ ಮತ್ತು ಅರುಣ್ಯವಾಸಿಗಳಂದಿಗೆ ಇರುವುದರಿಂದ ಇವರಿಗೆ ಜಂಗಲ್ ವಾಲೆ ಬಾಬ ಅಂತ ಹೆಸರಾಗಿದೆ.
        2015 ಮತ್ತು 2016 ರ ವರೆಗೆ ಕನಾ೯ಟಕದ ಪ್ರಮುಖ ಜೈನ ಕೇಂದ್ರ ಸಂದಶಿ೯ಸಿ ಈಗ ಕನಾ೯ಟಕ ದಾಟಿ ಹೋಗಿದ್ದಾರೆ, ಈ ಅವದಿಯಲ್ಲಿ ಎರೆಡು ಚಾತುಮಾ೯ಸ ಕನಾ೯ಟಕದಲ್ಲಿ ಮಾಡಿದ್ದಾರೆ ಒಂದು ಖಾನಾಪುರ ಮತ್ತು ಮೈಸೂರಿನ ಚಾಮುಂಡಿ ಬೆಟ್ಟದ ಅರಣ್ಯದಲ್ಲಿ.
           ದಮ೯ಸ್ಥಳದಲ್ಲಿ ಇವರಿಗೆ ವಿರೇಂದ್ರ ಹೆಗ್ಗಡೆಯವರು ನೀಡಿದ ಸ್ವಾಗತ ನಂತರ ಇವರು ಹೋದಲ್ಲೆಲ್ಲ ಇವರನ್ನ ಬೇಟಿ ಮಾಡಿದ ಗಣ್ಯರ ಮಾಹಿತಿ ಟ್ವಿಟರ್ ನಲ್ಲಿ ಮತ್ತು ಅಂತರ್ಜಾಲದಲ್ಲಿ ನೋಡಿದಾಗ ನಮ್ಮ ಆತಿಥ್ಯ ಸ್ವೀಕರಿಸಿದವರು, ಸಂದಶ೯ನಕ್ಕೆ ಅವಕಾಶ ನೀಡಿದವರು ಮತ್ತು ಆಶಿ೯ ವದಿಸಿದವರು ಇವರೇಯೆ ? ಎಂಬ ಅನುಮಾನ ಉಂಟಾಗುತ್ತೆ, ಇಂತಹ ರಾಷ್ಟ್ರ ಸಂತರ ಸಂದಶಿ೯ಸಿದ ಹೆಮ್ಮೆ ನನ್ನದು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...