Skip to main content

Blog number 1204. ಡಾಕ್ಟರ್ ಡೊಂಗ್ರೆ ಪಾರ್ಕ್ ಅಮೇರಿಕಾದ ಅತಿ ಹೆಚ್ಚು ಆದಾಯ ಗಳಿಸುವ ನಂಬರ್ ಒನ್ ಅಕ್ಯೂಪಂಚರಿಸ್ಟ್, ವಿಶ್ವದರ್ಜೆ ಅಕ್ಯೂಪಂಚರ್ ಚಿಕಿತ್ಸೆ ನನ್ನ ಹೊಂಬುಜ ಲಾಡ್ಜ್ ನಲ್ಲಿ ಭಾರತೀಯರಿಗೆ ಸಿಗಬಹುದಾ? ಗೊತ್ತಿಲ್ಲ

https://youtu.be/vpQBNys1RCs

#ಭಾಗ_1.

#ಅಮೇರಿಕಾದ_ನಂಬರ್_ಒನ್_ಆಕ್ಯೂಪಂಚರಿಸ್ಟ್

#ಡಾಕ್ಟರ್_ಡೊಂಗ್ರೆ_ಪಾರ್ಕ್_ನನ್ನ_ಬೇಟಿಗಾಗಿ_ನನ್ನ_ಊರಿಗೆ 

#ಇವರ_ವಾರ್ಷಿಕ_ಆದಾಯ_ಎರೆಡು_ದಶಲಕ್ಷ_ಡಾಲರ್.

#ಆಕ್ಯೂಪಂಚರ್_ಚಿಕಿತ್ಸೆ_ಜಗಪ್ರಸಿದ್ದ.

#ಇದರ_ಮೂಲ_ಚೀನಾ_ಎಂಬುದು_ತಪ್ಪು_ಇದು_ಕೋರಿಯಾದ್ದು.

#ಇದಕ್ಕೆ_ಆದಾರ_1600_ವಷ೯ದ_ಯೆಲ್ಲೋ_ಬುಕ್_ಆಫ್_ಎಂಪರರ್

#ಮತ್ತು_ಕೋರಿಯಾದ_ರಾಷ್ಟ್ರೀಯ_ಮ್ಯೂಸಿಯಂನಲ್ಲಿರುವ_ವಿವಿದ_ಸೂಜಿಗಳು

#ಮುಂದಿನ_ದಿನಗಳಲ್ಲಿ_ವಿಶ್ವದರ್ಜಿಯ_ಅಕ್ಯುಪಂಚರ್_ಚಿಕಿತ್ಸೆ_ನನ್ನ_ಸಂಸ್ಧೆಯಿಂದ_ಸಾಧ್ಯವಾ?

   ಮೊನ್ನೆ ಅಂದರೆ 26- ಜನವರಿ -2023ರ ಸಂಜೆ ಅಮೆರಿಕಾದ ಟೆಕ್ಸಾಸ್ ರಾಜ್ಯದ ಡಾಲ್ ಹೌಸ್ ಸಿಟಿಯ ಅಮೇರಿಕಾ ಪೌರಾತ್ಯದ  ದಕ್ಷಿಣ ಕೊರಿಯಾ ಮೂಲದ ಡಾಕ್ಟರ್ ಡೊಂಗ್ರೆ ಪಾರ್ಕ್ ನನ್ನ ಬೇಟಿಗಾಗಿ ಒಂದು ತಿಂಗಳ ಮೊದಲೇ ಬರುವುದಾಗಿ ತಿಳಿಸಿದ್ದರು.
  ಅದೇ ದಿನ ನಮ್ಮ ಊರಿನ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದ 17ನೇ ವಾರ್ಷಿಕೋತ್ಸವದ ಅಂತಿಮ ದಿನದ ರಂಗಪೂಜೆಯಲ್ಲಿ ನಾನಿದ್ದೆ .
  ಅಲ್ಲಿಗೆ ಬಂದು ರಂಗ ಪೂಜೆ ಮುಗಿಯುವ ತನಕ ಎಲ್ಲಾ ಪೂಜಾ ವಿಧಾನ ವೀಕ್ಷಿಸಿ ಪ್ರಸಾದ ಸ್ವೀಕರಿಸಿ ತಡ ರಾತ್ರಿವರೆಗೆ ಅನೇಕ ವಿಚಾರಗಳ ಚರ್ಚಿಸಿ, ಬೆಳಿಗ್ಗೆ ಜೋಗ್ ಪಾಲ್ಸ್  ವೀಕ್ಷಿಸಿ ವಾಪಾಸು ಬಂದು ನಂತರ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ವಾಪಾಸಾದರು.
  ಇವರು ದಕ್ಷಿಣ ಕೋರಿಯಾ ಮೂಲದವರು ಈಗ ಅಮೇರಿಕಾ ಪ್ರಜೆ ಅಷ್ಟೆ ಅಲ್ಲ ಅಮೇರಿಕಾದ ನಂಬರ್ ಒನ್ ಅಕ್ಯುಪ್ರಶರಿಸ್ಟ್ ಇವರ ವಾರ್ಷಿಕ ಆದಾಯ ಎರೆಡು ಮಿಲಿಯನ್ ಡಾಲರ್ ಅಂದರೆ ವಾರ್ಷಿಕ 16 ಕೋಟಿ ಆದಾಯದ ಡಾಕ್ಟರ್.
  ಅಕ್ಯುಪಂಕ್ಚರ್ ಚೀನಾ ಮೂಲದೆಂಬ ಅಭಿಪ್ರಾಯ ತಪ್ಪು ಅದು ಕೊರಿಯಾ ಮೂಲ ಅದಕ್ಕೆ ಎಲ್ಲೊ ಬುಕ್ ಆಪ್ ಎಂಪರರ್ ಎಂಬ 1600 ವರ್ಷದ ಹಿಂದಿನ ದಾಖಲೆ ಮತ್ತು ಕೋರಿಯಾ ರಾಷ್ಟ್ರೀಯ ಮ್ಯೂಸಿಯಂನಲ್ಲಿರುವ ವಿಬಿನ್ನ ಸೂಜಿಗಳನ್ನು ಪರಿಗಣಿಸಬಹುದೆಂದು ಡಾಕ್ಟರ್ ಪಾರ್ಕರ್ ತಿಳಿಸಿದರು.
  ಮುಂದಿನ ದಿನದಲ್ಲಿ ವಿಶ್ವದರ್ಜೆಯ ಅಕ್ಯೂಪಂಚರ್ ಚಿಕಿತ್ಸೆ ನನ್ನ ಹೊಂಬುಜ ಲಾಡ್ಜ್ ನಲ್ಲಿ ಸಿಗಬಹುದಾ? ಗೊತ್ತಿಲ್ಲ ಡಾಕ್ಟರ್ ಪಾರ್ಕರ್ ಗೆ ಬಿಟ್ಟಿದ್ದೇನೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...