Skip to main content

Blog number 1206. ಸಾಗರ ವಿಧಾನಸಭಾ ಸದಸ್ಯರಾದ ಹರತಾಳು ಹಾಲಪ್ಪನವರು ನಮ್ಮ ಊರಿನ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದ ರಥೋತ್ಸವಕ್ಕೆ ಆಗಮಿಸಿದ್ದರು ಅವರನ್ನು ದೇವಾಲಯದ ಜಾತ್ರಾ ಸಮಿತಿವತಿಯಿಂದ ಸನ್ಮಾನಿಸಲಾಯಿತು,ಅವರು ದೇವಾಲಯದ ರಥಬೀದಿಯ ಕಾಂಕ್ರೀಟ್ ರಸ್ತೆ ನಿರ್ಮಿಸಿ ಕೊಟ್ಟಿದ್ದಾರೆ.

#ಶಾಸಕರಾದ_ಹರತಾಳುಹಾಲಪ್ಪನವರು

#ನಮ್ಮ_ಊರಿನ_ವರಸಿದ್ಧಿವಿನಾಯಕ_ದೇವರ_ಜಾತ್ರೆಯಲ್ಲಿ

#ದೇವಾಲಯದ_ಎದುರಿಗೆ_ಕಾಂಕ್ರೀಟ್_ರಸ್ತೆ_ಮಾಡಿಸಿದ್ದಾರೆ

#ಅನೇಕ_ಹಿಂದಿನ_ಸಂದರ್ಭಗಳ_ನೆನಪಿಸಿಕೊಂಡರು.

   2018ರ ವಿಧಾನಸಭಾ ಚುನಾವಣೆಯ ದಿನಗಳ ಒಂದು ರಾತ್ರಿ ಹರತಾಳು ಹಾಲಪ್ಪನವರು ನನ್ನ ಹಳೇ ಕಛೇರಿಗೆ ಬಂದಿದ್ದರು, ನಂತರ ನನ್ನ ಮಗಳ ಮದುವೆಗೆ ಬಂದು ಶುಭ ಹಾರೈಸಿದಾಗ ನನಗೆ ಆಶ್ಚಯ೯ ಕೂಡ ಯಾಕೆಂದರೆ ವಿವಾಹ ಆಮಂತ್ರಣ ಮುದ್ದಾಂ ನೀಡಲಾಗದೆ ಅಂಚೆ ಮುಖಾಂತರ ಕಳಿಸಿದರೂ ಅವರೂ ಆಗಮಿಸಿದ್ದರು.
  ನಂತರದ ಬೇಟಿ ಮೊನ್ನೆ ನಮ್ಮ ಊರಿನ ಶ್ರೀ ವರಸಿದ್ದಿ ವಿನಾಯಕ ದೇವರ ರಥೋತ್ಸವದ ದಿನ (25- ಜನವರಿ -20 23ರ ಬುಧವಾರ) ಒಳ ಬರುತ್ತಲೇ "ಅರುಣ್ ಪ್ರಸಾದ್ ನಮ್ಮ ಹಳೆಯ ಗೆಳೆಯರು" ಅನ್ನುತ್ತಾ ಅವರು ಪದವಿ ಓದುವಾಗ ಸಾಗರದ ಸೊರಬ ರಸ್ತೆಯ ಹಳೆಯ ಯುನೈಟೆಡ್‌ ಟ್ರೇಡಿಂಗ್ ಕಂಪನಿ ಎದುರಿಗಿದ್ದ ಬಿಸಿಎಂ ಕಾಲೇಜು ಹಾಸ್ಟೆಲ್ ನಲ್ಲಿದ್ದಾಗ ನಾನು ಅದೇ ಕಟ್ಟಡದಲ್ಲಿದ್ದ ಮೆಟ್ರಿಕ್ ಹಾಸ್ಟೆಲ್ ನಲ್ಲಿ ಎಸ್ ಎಸ್ ಎಲ್ ಸಿ ಅದನ್ನು ನೆನಪು ಮಾಡಿಕೊಂಡರು.
  ವಿದ್ಯಾರ್ಥಿ ಜೀವನದಲ್ಲೂ ಹಾಲಪ್ಪ ಮಾತುಗಾರರು, ಕವಿಗಳ ಪದ್ಯಗಳನ್ನು ಉಲ್ಲೇಖಿಸಿ ರಸವತ್ತಾಗಿ ಮಾತಾಡುತ್ತಾ ನೆರೆದವರೆಲ್ಲರನ್ನು ನಗಿಸುತ್ತಿದ್ದರು ಅದೇ ರೀತಿ ವಿದ್ಯಾರ್ಥಿ ಸಂಘಟನೆಯಲ್ಲೂ ಮುಂದಿದ್ದರು.
   ರೈಲಿನ ಪ್ರಯಾಣದಲ್ಲಿ ಹೆಚ್ಚಾಗಿ ಪುಸ್ತಕ ಓದುತ್ತೇನೆ ಮೊನ್ನೆ ಒಂದು ಅತ್ಯುತ್ತಮ ಪುಸ್ತಕ ಓದಿದೆ ನಿಮಗೆ ಕಳಿಸುತ್ತೇನೆ ಅಂದರು.
  ನಾನು ಅವರನ್ನು ಅವರು ಈ ಜಾತ್ರೆಯಲ್ಲಿ ದೇವಾಲಯದ ಎದುರಿನ ರಥಬೀದಿಗೆ ಕಾಂಕ್ರೀಟ್ ರಸ್ತೆ ಮಾಡಿಸಿದ್ದಕ್ಕಾಗಿ ವೈಯಕ್ತಿಕವಾಗಿ ಅಭಿನಂದಿಸಿದೆ ಕಾರಣ ದೇವಾಲಯದಿಂದ ಯಾವುದೇ ಮನವಿ ಮಾಡದಿದ್ದರೂ ಅವರೇ ದೇವಾಲಯದ ರಥಬೀದಿಯ ರಸ್ತೆಯ ಅನಿವಾರ್ಯತೆ ಗಮನಿಸಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಪೂರ್ಣ ಮಾಡಿಸಿದ್ದು.
   ಮುಂದಿನ ದಿನದಲ್ಲಿ ದೇವಾಲಯದ ಸುತ್ತಲೂ ಸುಸಜ್ಜಿತ ಕಂಪೌಂಡ್ ಗೋಡೆ ನಿರ್ಮಿಸುವುದಾಗಿ ತಿಳಿಸುವಾಗ ಅವರ ಜೊತೆಯವರು ಹೊಸನಗರ ರಸ್ತೆ ರಾಷ್ಟ್ರೀಯ ಹೆದ್ದಾರಿಗಾಗಿ ಅಗಲಿಕರಣ ಆಗಲಿದೆ ಅಂದಾಗ ಅವರು ಶಿಕಾರಿಪುರದಿಂದ ಹೊಸನಗರ ಹೋಗುವ ಹಾವೇರಿ-ಬೈಂದೂರು ರಾಷ್ಟೀಯ ಹೆದ್ದಾರಿ ದೇವಸ್ಥಾನದ ನಂತರ ಈ ರಸ್ತೆಗೆ ಸೇರಲಿದೆ ಅಂದಾಗ ನಾನು ಈ ಹಿಂದಿನ ಸರ್ವೆ ಗೇರುಬೀಸು ರಸ್ತೆಯಲ್ಲಿ ಬಂದು ಈ ರಸ್ತೆಗೆ ಸೇರಲಿತ್ತಲ್ಲ? ಅಂದದ್ದಕ್ಕೆ ಇಲ್ಲ ಬದಲಾಗಿದೆ ನಿಮಗೆ ಆ ನಕಾಶೆ ಕಳಿಸುವುದಾಗಿ ತಿಳಿಸಿದರು.
   ಜಾತ್ರಾ ಸಮಿತಿಯಿಂದ ಶಾಸಕರನ್ನು ಸನ್ಮಾನಿಸಿ ಶ್ರೀ ವರಸಿದ್ಧಿವಿನಾಯಕ ದೇವರ ಚಿತ್ರ ಪಟ ನೆನಪಿನ ಕಾಣಿಕೆ ಆಗಿ ಸಮಿತಿಯವರು ನೀಡಿದರು ಶಾಸಕರಿಗಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು.
   ನಂತರ ದೇವಾಲಯದ ಆವರಣದಲ್ಲಿ ಅರ್ಧ ಹೋಳಿಗೆ ಸ್ಟೀಕರಿಸಿದರು, ವಿಶ್ವವ್ಯಾಪಿ ಗಣೇಶ ಪ್ರಸಿದ್ದಿಯ ಗೋವರ್ದನ ಅಂಕೋಲೆಕರ್ ನೀಡಿದ ದೃಷ್ಟಿಗಣಪತಿ ಸ್ವೀಕರಿಸಿ ಅವರಿಂದ ಮಾಹಿತಿ ಪಡೆದರು.
    ಖ್ಯಾತ ಭಜನಾ ಹಾಡುಗಾರರಾದ ಸಾಗರದ ಸಿದ್ದ ಸಮಾದಿ ಯೋಗದ ಗಣೇಶ್ ಗುರೂಜಿ ಅವರ ಬಗೆರ್ ಹುಕುಂ ಅರ್ಜಿಯ ಬಗ್ಗೆ ಅವರಿಗೆ ತಿಳಿಸಿದಾಗ ಮುಂದಿನ ಬಗರ್ ಹುಕುಂ ಸಭೆಯಲ್ಲೇ ಆ ಕಡತ ಮಂಡಿಸಲು ಅವರ ಆಪ್ತರಿಗೆ ಆದೇಶಿಸಿದರು.
  ನಂತರ ರಥಬೀದಿ ಉತ್ಸವಕ್ಕೆ ಹೊರಡಲಿರುವ ರಥಕ್ಕೆ ನಮಸ್ಕರಿಸಿ ಅವರ ಪಕ್ಷದ ಮುಖಂಡರು ನಾಯಕರನ್ನು ಮಾತಾಡಿಸಿ ತೆರಳಿದರು.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ