Skip to main content

Blog number 1211. ಭಾರತ್ ಜೋಡೋ ಯಾತ್ರೆ ಪೂಣ೯ 3750 ಕಿ.ಮಿ. ಸಾಗಿದ ಶಿವಮೊಗ್ಗದ ಏಕೈಕ ದೇಶ ಯಾತ್ರಿ ಡಾಕ್ಟರ್ ಸುಶೃತ್ ತೀರ್ಥಹಳ್ಳಿಯ ಯಡೂರಿನ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ವಕೀಲ ದಿವ೦ಗತ ಹಿರಿಯಣ್ಣ ಗೌಡರ ಅಣ್ಣ ಮೈಸೂರಿನ ಗೋಪಾಲಗೌಡ ಶಾಂತವೇರಿ ಮೆಮೋರಿಯಲ್ ಹಾಸ್ಪಿಟಲ್ ಡಾ. ವಿಷ್ಣುಮೂರ್ತಿ ಅವರ ಪುತ್ರ

https://youtu.be/8rRmhdXVK9E

#ರಾಹುಲ್_ಗಾಂಧಿ_ಭಾರತ್_ಜೋಡೋ_ಯಾತ್ರಿ

#ಶಿವಮೊಗ್ಗದ_ಏಕೈಕ_ಭಾರತ್_ಯಾತ್ರಿ

#ರಾಜ್ಯದ_ಆರು_ಕನ್ನಡಿಗರಲ್ಲಿ_ಒಬ್ಬರು.

#ತೀರ್ಥಹಳ್ಳಿಯ_ಯಡೂರು_ಮೂಲದ_ಡಾಕ್ಟರ್_ಸುಶೃತ್

#ಅಮೇರಿಕಾದ_ಯುವ_ನ್ಯೂರಾಲಿಜಿಸ್ಟ್_ಡಾಕ್ಟರ್.

#ಇವರು_ತೀರ್ಥಹಳ್ಳಿಯ_ಜಿಲ್ಲಾಪಂಚಾಯಿತಿ_ಸದಸ್ಯರಾಗಿದ್ದ_ಹಿರಿಯಣ್ಣಗೌಡರ_ಅಣ್ಣನ_ಮಗ.

#ಡಾಕ್ಟರ್_ವಿಷ್ಣುಮೂರ್ತಿ_ಮೈಸೂರಿನಲ್ಲಿ_ಗೋಪಾಲಗೌಡ_ಶಾಂತವೇರಿ_ಸ್ಮಾರಕ_ಆಸ್ಪತ್ರೆ_ನಿರ್ಮಿಸಿದ್ದಾರೆ.

   ಮೈಸೂರಿನಲ್ಲಿ ನಾನು ಕಾಗೋಡು ಹೋರಾಟದ ನೇತಾರ ಗಣಪತಿಯಪ್ಪ ಮತ್ತು ಸಮಾಜವಾದಿ ಲೇಖಕ ಕೋಣಂದೂರು ವೆಂಕಪ್ಪ ಗೌಡರ ಜೊತೆ ಡಾಕ್ಟರ್ ವಿಷ್ಣು ಮೂತಿ೯ ಅವರನ್ನು ಅವರ ಗೋಪಾಲಗೌಡ ಶಾಂತವೇರಿ ಸ್ಮಾರಕ ಆಸ್ಪತ್ರೆಯಲ್ಲಿ ಬೇಟಿ ಮಾಡಿದ್ದೆ.
  ನಮ್ಮ ಜಿಲ್ಲೆಯ ತೀರ್ಥಹಳ್ಳಿಯ ಯಡೂರು ಮೂಲದ ಇವರು ಮೈಸೂರಿನಲ್ಲಿ ಶಾಂತವೇರಿ ಗೋಪಾಲಗೌಡರ ಹೆಸರಿನ ಆಸ್ಪತ್ರೆ ಮಾಡಿರುವುದು ನನಗೆ ಹೆಮ್ಮೆ ಅನ್ನಿಸಿತ್ತು ಆಗ ಅವರು (2001) ಶಾಂತವೇರಿ ಗೋಪಾಲಗೌಡರ ಹೆಸರಲ್ಲಿ ವೈದ್ಯಕೀಯ ಕಾಲೇಜ್ ಪ್ರಾರಂಬಿಸುವ ಅವರ ಕನಸು ಹೇಳಿದ್ದರು.
   ಡಾಕ್ಟರ್ ವಿಷ್ಣು ಮೂರ್ತಿ ಅವರ ತಮ್ಮ ಶಿವಮೊಗ್ಗದಲ್ಲಿ ವಕೀಲಿ ವೃತ್ತಿ ನಡೆಸುತ್ತಿದ್ದ ಯಡೂರಿನ ಹಿರಿಯಣ್ಣ ಗೌಡರು 1995 - 2000 ನನ್ನ ಜೊತೆ ಶಿವಮೊಗ್ಗ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದರು ಈಗ ಇವರಿಬ್ಬರೂ ಇಲ್ಲ.
  ಡಾಕ್ಟರ್ ವಿಷ್ಣು ಮೂರ್ತಿ ಅವರ ಪುತ್ರ ಡಾಕ್ಟರ್ ಸುಶೃತ ಅಮೇರಿಕಾದಲ್ಲಿ ನ್ಯೂರೋಲೋಜಿಸ್ಟ್ ಆಗಿದ್ದವರು ಈಗ ಮೈಸೂರಲ್ಲಿ ತಮ್ಮ ತಂದೆಯ ಆಸ್ಟತ್ರೆ ನೋಡಿಕೊಳ್ಳುತ್ತಿದ್ದಾರೆ.
  ಇವರು ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದ ತನಕ 3750 ಕಿ.ಮಿ. ನಡೆದ ದೇಶ ಯಾತ್ರಿ, ಕರ್ನಾಟಕದಿಂದ ಆರು ಜನ ಮಾತ್ರ ಈ ಯಾತ್ರೆ ಮಾಡಿದ ದೇಶ ಯಾತ್ರಿಗಳು.
  ಶಿವಮೊಗ್ಗ ಜಿಲ್ಲೆಯಿ೦ದ ಏಕೈಕ ಭಾರತ ಜೋಡೋ ಯಾತ್ರೆ 3750 ಕಿ.ಮಿ. ಪೂರ್ಣ  ಮಾಡಿದ ತೀರ್ಥಹಳ್ಳಿ ಯಡೂರು ಮೂಲದ ಡಾಕ್ಟರ್ ಸುಶೃತ ಮೈಸೂರಿನ ಗೋಪಾಲಗೌಡ ಶಾಂತವೇರಿ ಮೆಮೋರಿಯಲ್ ಆಸ್ಪತ್ರೆಯ ಡಾ.ವಿಷ್ಣುಮೂರ್ತಿ ಪುತ್ರ ಮತ್ತು ನನ್ನ ಜಿಲ್ಲಾ ಪಂಚಾಯತ್ ಸಹ ಸದಸ್ಯರಾಗಿದ್ದ ವಕೀಲರು ಆಗಿದ್ದ ಹಿರಿಯಣ್ಣ ಗೌಡರ ಪುತ್ರ ಎಂಬುದು ಹೆಮ್ಮೆಯ ಸಂಗತಿ.
  ಶಿವಮೊಗ್ಗ ಜಿಲ್ಲೆಯ ಪತ್ರಕರ್ತರು, ರಾಜಕೀಯ ಪಕ್ಷಗಳ ಕಾರ್ಯಕರ್ತರು ತಪ್ಪದೇ ಈ ಸಂದರ್ಶನ ನೋಡಬೇಕು, ಇವರ ಪ್ರಬುದ್ದ ಮಾತುಗಳು ಮುಂದಿನ ದಿನದಲ್ಲಿ ಅದೃಷ್ಟ ಮತ್ತು ಅವಕಾಶ ಸಿಕ್ಕರೆ ರಾಜ್ಯದ ಒಬ್ಬ ಅತ್ಯುತ್ತಮ ಜನಪ್ರತಿ ಆಗುವ ಲಕ್ಷಣಗಳು ಇವರಲ್ಲಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...