Skip to main content

Blog number 1220.ಕಿರಿಯ ಗೆಳೆಯ ಪತ್ರಕರ್ತ ಪವನ್ ಕುಮಾರ್ ಕಠಾರೆ ನನ್ನ ಕಾದಂಬರಿ ಬೆಸ್ತರ ರಾಣಿ ಚಂಪಕಾ ಬಗ್ಗೆ ಬರೆದದ್ದು

ಯುವಕರಿಗೆ ಉತ್ಸಾಹಿ ಮಾರ್ಗದರ್ಶಕರು  ಹಾಗೂ ಸಂಕಷ್ಟದಲ್ಲಿರುವವರಿಗೆ ನೆರವನ್ನು ನೀಡುವ ಮಿತ್ರರು ಹಾಗೂ ನಮ್ಮೂರಿನ ಇತಿಹಾಸವನ್ನು ಮರಳಿ ನೆನಪಿಸಲು ಬರೆದ ಕೃತಿಯಾದ ಖ್ಯಾತ ರಾಜಾ ವೆಂಕಟಪ್ಪ ನಾಯಕ ಮತ್ತು ಚಂಪಕ ರಾಣಿ ದುರಂತ ಪ್ರೇಮಕಥೆಯ ಲೇಖಕರು ಶ್ರೀಯುತ ಕೆ ಅರುಣ್ ಪ್ರಸಾದ್.

ಶ್ರೀಯುತ *ಕೆ.ಅರುಣ್ ಪ್ರಸಾದ್* ರವರು ಆನಂದಪುರ ಭಾಗದ ಜನರಲ್ಲಿ ಎಂದು ಅಚ್ಚಳಿಯದೆ ಉಳಿಯುವ ಮಹಾನ್ ವ್ಯಕ್ತಿ.
ಇವರ ಹೆಸರು  ಜಿಲ್ಲೆಯ ಸುತ್ತಮುತ್ತಲಿನ ಎಲ್ಲ ಗ್ರಾಮದ ಚಿಕ್ಕ ಪುಟ್ಟ ಮಕ್ಕಳಿಂದ ಹಿಡಿದು ವೃದ್ಧಾಪ್ಯದಲ್ಲಿ ರುವಂತಹ ಎಲ್ಲಾ ವ್ಯಕ್ತಿಗಳಿಗೂ ಕೂಡ ಚಿರ ಪರಿಚಿತ.
ಇದಕ್ಕೆ ಕಾರಣ ಅವರು ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಕರ ಜೊತೆ ನಡೆದುಕೊಳ್ಳುವ ಉತ್ತಮ ಬಾಂಧವ್ಯ.
 ಇವರು ಬಡವ ಹಾಗೂ ಶ್ರೀಮಂತ ಎಂಬ ಭೇದ ಭಾವವಿಲ್ಲದೆ ತಮ್ಮ ಪಕ್ಕದಲ್ಲಿ ಎಲ್ಲಾ ವರ್ಗದ ಜನರನ್ನು ಕೂರಿಸಿಕೊಂಡು ಮಾತನಾಡುವ ಸೌಜನ್ಯಯುತ ವ್ಯಕ್ತಿ.ಇವರು ಜಿಲ್ಲಾ ಪಂಚಾಯತ್ ಸದಸ್ಯರಾದಗ ಮಾಡಿದ ಕೆಲಸ ಕಾರ್ಯಗಳು ಇನ್ನೂ ಕೂಡ ಜೀವಂತವಾಗಿದೆ.
ಹಾಗೂ ಯಡೇಹಳ್ಳಿಯಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ವರಸಿದ್ಧಿ ವಿನಾಯಕ ಸ್ವಾಮಿ ದೇವಾಲಯವನ್ನು ಕೂಡ ಕಟ್ಟಿಸಿದವರು ಇವರೆ, ಯಾವುದೇ ವ್ಯಕ್ತಿಗಳು ತಮಗೆ ಕಷ್ಟವಿದೆ ಎಂದು ಅವರ ಬಳಿ ಹೋದಾಗ ತಮ್ಮ ಕೈಲಾದಷ್ಟು ಸಹಾಯವನ್ನೂ ಮಾಡಿ ಕಳಿಸುವಂತಹ ಮಹಾನ್ ದಾನಿಗಳು ಕೂಡ ಹೌದು.
ತಮ್ಮ ಆತ್ಮೀಯರಿಗೆ ಏನಾದರೂ ಸಂಕಷ್ಟ ಒದಗಿದಾಗ ಇವರಷ್ಟು ಮರಗುವವರು ಮತ್ತೊಬ್ಬರಿಲ್ಲ.

ಆನಂದಪುರಂನ ಶ್ರೀಮಂತ ಉದ್ಯಮಿಗಳಲ್ಲಿ ಇವರು ಕೂಡ ಒಬ್ಬರಾಗಿದ್ದರೂ ಸ್ವಲ್ಪವೂ ಅಹಂಕಾರವಿಲ್ಲದ ನೇರ ನುಡಿಯ ಸೃಜನಶೀಲತೆಯ ವ್ಯಕ್ತಿ.
ಇವರ ಸಲಹೆ ಸಹಕಾರ ಹಾಗೂ ಸಹಾಯದಿಂದ ಅದೆಷ್ಟೋ ಜನ ಇಂದು ಬದುಕನ್ನು ಕಟ್ಟಿಕೊಂಡಿದ್ದಾರೆ.
ನಾಡಿಗೆ ಹೇಗೆ ಡಾ।। ರಾಜ್ ಕುಮಾರ್ ಅಣ್ಣಾವ್ರು ಎಂಬ ಹೆಸರನ್ನು ಪಡೆದಿದ್ದಾರೋ ಹಾಗೆ ಇಲ್ಲಿನ ಭಾಗದ ಜನರಿಗೆ ಇವರು ಅಣ್ಣಾವ್ರು,
ನಾನು ಗಮನಿಸಿದ ಹಾಗೆ ಯಾರೇ ಇವರನ್ನು ಮಾತನಾಡಿಸಲು ಹೋದಾಗ ಇವರ ಕುಟುಂಬದ ಹತ್ತಿರ  ಅಣ್ಣಾವ್ರು ಇದಾರ ಅಂತ ಕೇಳುತ್ತಿದ್ದುದು ನಿಜಕ್ಕೂ ನನಗೆ ಸಂತಸವೆನಿಸುತ್ತಿತ್ತು.

ಇವರ ಮಗ *ವರುಣ್ ಕೃಷ್ಣ* ನನ್ನ ಸಹಪಾಠಿ ಹಾಗೂ ಆತ್ಮೀಯ ಮಿತ್ರ ನಾನು ಇಂದು ಈ ಮಟ್ಟಕ್ಕೆ ಬೆಳೆಯಲು ಇವನು ಪ್ರತ್ಯಕ್ಷ ಕಾರಣನೂ ಹೌದು ಯಾಕೆಂದರೆ ನಾನು ಬಿ ಕಾಂ ಓದುತ್ತಿದ್ದಾಗ ಜೊತೆಯಲ್ಲಿ ಇದ್ದು     ಗುರುವಾಗಿ ಮಿತ್ರನಾಗಿ ನನಗೆ ಹೇಳಿಕೊಟ್ಟಿದ್ದು ಅದೆಷ್ಟೋ ನಿಜಕ್ಕೂ ಕೂಡ ಈತನನ್ನು ಯಾವತ್ತೂ ಕೂಡ ಮರೆಯುವ ಹಾಗಿಲ್ಲ.
ಇಂದು ಇವರು ನಮ್ಮೂರಿನ ಇತಿಹಾಸವನ್ನು ಮರಳಿ ನೆನಪಿಸುವಂತೆ ಬರೆದ ಲೇಖನವೂ ಜಗತ್ಪ್ರಸಿದ್ಧಿ ಆಗಲೆಂದು ಹಾರೈಸುತ್ತಾ ಇನ್ನಷ್ಟು ಲೇಖನಗಳನ್ನು ನಮಗೆ ನೀಡಲಿ ಎಂಬ ಆಶಯವನ್ನು ವ್ಯಕ್ತಪಡಿಸುತ್ತೇನೆ.

BY:
*PAVAN KUMAR*
*PUBLIC 7 TV REPORTER*
*ANANDAPURA* 
*SAGARA*

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...