Skip to main content

Blog number 1221. ನಮ್ಮೂರ ಜಾತ್ರೆಯಲ್ಲಿ ಹೋಳಿಗೆ ತುಪ್ಪದ ಅನ್ನ ಸಂತರ್ಪಣೆಯ ಅಡುಗೆ ನಿರ್ವಹಿಸುವ ಅಡುಗೆ ತಂಡದ ನಾಯಕ ನಿಧಿಗೆ ಮಂಜಣ್ಣ.

ಹೋಳಿಗೆ_ತುಪ್ಪದ_ಕಾಂಬಿನೇಷನ್

#ಈ_ವರ್ಷದ_ವರಸಿದ್ದಿವಿನಾಯಕ_ದೇವರ_ಜಾತ್ರೆಗೆ_4500_ಹೋಳಿಗೆ.

#ಪ್ರತಿವರ್ಷದ_ಜಾತ್ರಾ_ಅಡುಗೆ_ನಿದಿಗೆ_ಮಂಜಣ್ಣ

#ಎಷ್ಟು_ಸಾವಿರ_ಜನ_ಆದರೂ_ಬೇಸರಿಸದೆ_ಅಡುಗೆ_ಮಾಡುವ_ಸಜ್ಜನರು.

#ಶುಚಿ_ರುಚಿಯ_ಅಡುಗೆ.

https://youtu.be/TR8EYLHl5x4

  ನಮ್ಮ ಊರಿನ ಶ್ರೀ ವರಸಿದ್ಧಿ ವಿನಾಯಕ ದೇವರ ಪ್ರತಿ ವರ್ಷದ ರಥೋತ್ಸವದ ಅಡುಗೆ ಶಿವಮೊಗ್ಗದ ನಿದಿಗೆ ಮಂಜಣ್ಣ ಮತ್ತು ತಂಡದವರದ್ದು.
  ನಿದಿಗೆ ಮಂಜಣ್ಣರ ಅಡುಗೆ ಯಾವತ್ತೂ ಪೇಲ್ ಆಗಿಲ್ಲ, ಕೆಲವು ನೂರರಿಂದ ಕೆಲವು ಸಾವಿರ ಜನರ ಮದುವೆ ಜಾತ್ರೆಗಳಲ್ಲೂ ಅದೇ ರುಚಿ - ಶುಚಿ.
  ಟೇಸ್ಟಿಂಗ್ ಪೌಡರ್, ಕೃತಕ ಬಣ್ಣ, ನೀರುಳ್ಳಿ - ಬೆಳ್ಳುಳ್ಳಿ ಇಲ್ಲದೆ ರಥೋತ್ಸವದ ಅನ್ನ ಸಂತರ್ಪಣೆ ಅಡುಗೆ ಮಾಡಬೇಕು.
  ಮದ್ಯಾಹ್ನ 12 ಗಂಟೆಗೆ  ದೇವರ ರಥೋತ್ಸವದ ಸಮಯದಲ್ಲಿ ಕೆಲವೇ ನೂರು ಜನರಿರುತ್ತಾರೆ ಮದ್ಯಾಹ್ನ 2ಕ್ಕೆ ಅದು ಮೂರು ಸಾವಿರಕ್ಕೂ ಮಿಕ್ಕುತ್ತದೆ ಅಷ್ಟು ಜನರ ನಿರೀಕ್ಷೆ ಇರಲಿ ಇಲ್ಲದಿರಲಿ ಬಂದವರೆಲ್ಲರಿಗೂ ಸಂತೃಪ್ತ ಬೋಜನ ಮಾಡಿಸುವ ಕೆಲಸ ಅಷ್ಟು ಸುಲಭವಲ್ಲ.
   ಪ್ರತಿವರ್ಷ ನಮ್ಮ ಜಾತ್ರೆಯಲ್ಲಿ ಅನ್ನ ಸಂತರ್ಪಣೆಯಲ್ಲಿ ಹೋಳಿಗೆ ತುಪ್ಪ ಬಡಿಸುವುದು ನಮ್ಮ ಪದ್ಧತಿ ಅದರಂತೆ ಈ ವರ್ಷ ಸುಮಾರು 4500 ಹೋಳಿಗೆ ತಯಾರಿಸಿ ಭಕ್ತರಿಗೆ ಬಡಿಸುವ ಜವಾಬ್ದಾರಿ ಅಡುಗೆ ತಂಡದ ಮುಖ್ಯಸ್ಥ ನಿಧಿಗೆ ಮಂಜಣ್ಣನವರದ್ದು ಅದನ್ನು ಯಶಸ್ವಿಯಾಗಿ ನಿರ್ವಹಿಸಿ ಜಾತ್ರಾ ಸಮಿತಿಯಿಂದ ದೇವಾಲಯದಲ್ಲಿ ಸನ್ಮಾನ ಸ್ವೀಕರಿಸಿದರು.
   ನಮ್ಮ ಕಲ್ಯಾಣ ಮಂಟಪದಲ್ಲಿ ಅನೇಕ ಮದುವೆಗಳು ನಿಧಿಗೆ ಮಂಜಣ್ಣರಿಗೆ ಸಿಗುತ್ತದೆ, ನನ್ನ ಮಗಳ ಮದುವೆ ಅಡುಗೆ ಕೂಡ ನಿಧಿಗೆ ಮಂಜಣ್ಣರದ್ದೆ ಆಗಿತ್ತು.
  ಅಡುಗೆ ಕಂಟ್ರಾಕ್ಟರ್ ನಿಧಿಗೆ ಮ೦ಜಣ್ಣರ ಸಂಪರ್ಕ ಸಂಖ್ಯೆ  99723 77295,ಕಡಿಮೆ ಬಜೆಟ್ ನಲ್ಲಿ ಅತ್ಯಂತ ರುಚಿಕಟ್ಟಾದ ಅಡುಗೆಗೆ ಇವರನ್ನು ಸಂಪರ್ಕಿಸಬಹುದು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...