Skip to main content

Blog number 1222. ಸಾಗರದ ಪ್ರಸಿದ್ದ ಮಾರಿಕಾಂಬಾ ಜಾತ್ರೆಯಲ್ಲಿ ಮಾರಿಕಾಂಬ ದೇವಿ ತವರು ಮನೆಯಿ೦ದ ಗಂಡನ ಮನೆಗೆ ಮೆರವಣಿಗೆ ಹೋಗುವಾಗ ಹರಕೆ ಕೋಳಿ ಹಾರಿ ಬಿಡುವ ಸಂಪ್ರದಾಯವಿದೆ.

#ಸಾಗರದ_ಇತಿಹಾಸ_ಪ್ರಸಿದ್ದ_ಮಾರಿಕಾಂಬಾ_ಜಾತ್ರೆ

#ಇವತ್ತು_ರಾತ್ರಿ_ಮಾರಿಕಾಂಬೆ_ತವರುಮನೆಯಿಂದ_ಗಂಡನ_ಮನೆಗೆ_ತೆರಳುತ್ತಾಳೆ

#ಇವತ್ತು_ರಾತ್ರಿ_ದೇವರ_ಮೆರವಣಿಗೆಯಲ್ಲಿ_ಹರಕೆ_ಕೋಳಿ_ಹಾರಿ_ಬಿಡುವ_ಕ್ರಮ_ಇದೆ

#ಹಾರಿ_ಬರುವ_ಹರಕೆ_ಕೋಳಿ_ಹಿಡಿಯಲು_ಮೆರವಣಿಗೆಯಲ್ಲಿ_ಪೈಪೋಟಿಯೂ_ಇದೆ.

  ಶಿವಮೊಗ್ಗ ಜಿಲ್ಲೆಯ ಸಾಗರದ ಮಾರಿಕಾಂಬಾ ಜಾತ್ರೆ ತುಂಬಾ ಅದ್ದೂರಿಯಾಗಿ ಮೂರು ವರ್ಷಕ್ಕೊಮ್ಮೆ ನಡೆಯುತ್ತದೆ ಜಾತ್ರೆಯಿಂದ ಜಾತ್ರೆಗೆ ವ್ಯವಸ್ಥೆಗಳು ಸುವ್ಯವಸ್ಥೆಯ ಹಾದಿಯಲ್ಲಿ ಸಾಗುತ್ತಿದೆ.
  ಆಚರಣೆಗಳು ಬದಲಾಗಲಾರದು ಆದ್ದರಿಂದ ಜನರ ಪೂಜೆ ಹರಕೆ ಸಂಪ್ರದಾಯದಲ್ಲಿ ಪ್ರತಿ ಜಾತ್ರೆಯೂ ತಪ್ಪುವುದಿಲ್ಲ.
 ಸೋಮವಾರ ಬೆಳಗಿನ ಜಾವ ತವರು ಮನೆಯಲ್ಲಿ ಪ್ರತಿಷ್ಟಾಪಿಸುವ ಬೃಹತ್ ಮಾರಿಕಾಂಬಾ ದೇವಿಗೆ ಮೇಲ್ವರ್ಗದ ಕುಟುಂಬದ ಸ್ತ್ರೀಯರು ಪೂಜೆ ಸಲ್ಲಿಸುವ ಸಂಪ್ರದಾಯವಿದೆ ಮೊದಲೆಲ್ಲ ಸರ್ಕಾರಿ ಆಸ್ಪತ್ರೆಯಿಂದ ಬೆಳಗಿನ ಜಾವದಲ್ಲಿ ಪ್ರಾರಂಭ ಆಗುತ್ತಿದ್ದ ಸರತಿ ಸಾಲು ಪ್ರತಿ ಮೂರು ವರ್ಷದಲ್ಲಿ ಸಾಗರದ ಬಿ.ಹೆಚ್.ರಸ್ತೆಯ ಪೋಲಿಸ್ ಸ್ಟೇಷನ್ ಸರ್ಕಲ್ ನಿಂದ ಈ ವರ್ಷ ಕೆಇಬಿ ಎದುರಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದವರೆಗೆ ಇತ್ತು.
  ಇವತ್ತು ಮಂಗಳವಾರ ರಾತ್ರಿ ತವರು ಮನೆಯಿಂದ ಮೆರವಣಿಗೆಯಲ್ಲಿ ಗಂಡನ ಮನೆಗೆ ಮಾರಿಕಾಂಭಾದೇವಿಯ ಮೆರವಣಿಗೆ ಪ್ರಾರಂಭವಾಗಲಿದೆ ಈ ಸಂದರ್ಭದಲ್ಲಿ ಭಕ್ತರು ಹರಕೆ ಕೋಳಿ ಹಾರಿಬಿಡುವ ಸಂಪ್ರದಾಯವಿದೆ.
 ದೇವಿ ತವರು ಮನೆ ಸೇರಿದ ಬುದವಾರ ಬೆಳಿಗ್ಗೆ ಶೂದ್ರ - ದಲಿತರಿಗೆ ಪೂಜೆ ಅವಕಾಶ, ಕುರಿ ಕೋಳಿ ಬಲಿಯ ಅವಕಾಶ ಸಿಗಲಿದೆ, ಮಂಗಳವಾರ ಸಸ್ಯಹಾರಿಗಳಿಗೆ ಬುಧವಾರದಿಂದ ಮಾಂಸಹಾರಿಗಳಿಗೆ ಪೂಜಾ ಅವಕಾಶದ ಮಾರಿಕಾಂಬಾ ಜಾತ್ರೆ ಇದು.
   ಕಳೆದ ಮೂರು ವರ್ಷದ ಹರಕೆ ಸಮರ್ಪಣೆಗಾಗಿ ಹರಕೆ ಕೋಳಿ ತಂದು ಸಾಗರದ ಸಾಗರ್ ಹೋಟೆಲ್ ಸರ್ಕಲ್ ಗೆ ಮಾರಿಕಾಂಬಾ ದೇವಿ ಮೆರವಣಿಗೆ ಬ೦ದಾಗ ಹರಕೆ ಕೋಳಿ ಹಾರಿಬಿಡುವ ಮೂಲಕ ಹರಕೆ ಸಮಾಪ್ತಿ ಮಾಡುತ್ತಾರೆ.
  ಈ ಹರಕೆ ಕೋಳಿ ಹಿಡಿದು ಚೀಲಕ್ಕೆ ತುಂಬಿಕೊಳ್ಳುವ ದೇವಿಯ ಭಕ್ತರ ಪೈಪೋಟಿಯೂ ಇಲ್ಲಿರುತ್ತದೆ ಇದನ್ನು ನೋಡಲು ಕುತೂಹಲ ಆಸಕ್ತಿ ಇದ್ದವರು ಅಲ್ಲಿ ಇದನ್ನು ನೋಡಬಹುದು.
  ಈ ಬಗ್ಗೆ ನಾನು ಈ ಹಿಂದೆ ಬರೆದ ಬ್ಲಾಗ್ ಕೂಡ ಇಲ್ಲಿ ಕ್ಲಿಕ್ ಮಾಡಿ ಓದಬಹುದು
https://arunprasadhombuja.blogspot.com/2020/02/2020_26.html

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...