Skip to main content

Blog number 1224. ಶಿವಮೊಗ್ಗ ರಾಜಕಾರಣದಲ್ಲಿ ಬೆಂಕಿ ಚೆಂಡಿನಂತಿದ್ದ ಹೋರಾಟಗಾರ ಪೂರ್ಯಾ ನಾಯಕರು ಅವರ ಪತ್ನಿ ಶ್ರೀಮತಿ ಶಾರದಾ ಪೂರ್ಯಾ ನಾಯಕರು ಶಿವಮೊಗ್ಗ ಗ್ರಾಮಾಂತರದ ಮಾಜಿ ಶಾಸಕರು ಎರೆಡು ವರ್ಷದ ಹಿಂದೆ ಇದೇ ದಿನ ಮಗನ ಮದುವೆ ಆಹ್ವಾನ ನೀಡಲು ಬಂದಿದ್ದರು.

#ಬೆಂಕಿ_ಚಂಡಿನಂತ_ಗೆಳೆಯ_ದಿವ೦ಗತ_ಪೂರ್ಯನಾಯಕರ_ಪತ್ನಿ_ಶಿವಮೊಗ್ಗ_ಗ್ರಾಮಾಂತರದ_ಮಾಜಿ_ಶಾಸಕಿ
#ಸಹೋದರಿ_ಶ್ರೀಮತಿ_ಶಾರದಾಪೂರ್ಯ_ನಾಯಕರು_ಮಗನ_ವಿವಾಹ_ಆಹ್ವಾನ_ನೀಡಲು_ಬಂದಿದ್ದರು.
(9- ಪೆಬ್ರುವರಿ-2021 ರಂದು)
 
  1995-2000 ದ ಶಿವಮೊಗ್ಗ ಜಿಲ್ಲಾ ಪಂಚಾಯತ್ ನಲ್ಲಿ ನಾವೆಲ್ಲ ಜಿಲ್ಲಾ ಪಂಚಾಯತ್ ಸದಸ್ಯರು ಕೆಲವೊಂದು ಆಡಳಿತಾತ್ಮಕ ವಿಚಾರಗಳನ್ನು ಚಚಿ೯ಸಲು ಪೂಯಾ೯ ನಾಯಕರ ಮನೆಗೆ ಹೋಗುತ್ತಿದ್ದೆವು ಅಲ್ಲಿ ಶ್ರೀಮತಿ ಶಾರದಮ್ಮ ನಮಗೆಲ್ಲ ಕಾಫಿ ಟೀ ತಯಾರಿಸಿ ತಂದು ಕೊಡುತ್ತಿದ್ದರು.
 
 ದೆಹಲಿಯಲ್ಲಿ ಕಾಯ೯ ನಿಮಿತ್ತ ಹೋಗಿದ್ದ ನಾಯಕರು ಇಹಲೋಕ ತ್ಯಜಿಸಿದ್ದು ದೊಡ್ಡ ದುರಂತ, ಅವರ ಕಳೇಬರ ರಾಜ್ಯ ಸಕಾ೯ರ ದೆಹಲಿಯಿಂದ ತರಿಸಿ ಕೊಡುವ ದೊಡ್ಡ ತನ ತೋರಿದವರು ಆಗಿನ ಮುಖ್ಯಮಂತ್ರಿ ಜೆ.ಹೆಚ್.ಪಾಟೀಲರು.
  ಅವತ್ತು ಅಂಜನಾಪುರದಲ್ಲಿ ಪೂಯ೯ ನಾಯಕರ ಅಂತ್ಯ ಸಂಸ್ಕಾರಕ್ಕೆ ಸೇರಿದ್ದ ಜನ ಸ್ತೋಮ 20 ಸಾವಿರಕ್ಕೂ ಹೆಚ್ಚು.
   ಸರಣಿ ಶಾಲೆಗಳು, ಪೆಟ್ರೋಲ್ ಪಂಪ್, ಕ್ರಷರ್ ಮುಂತಾದ ಪತಿಯ ಉದ್ಯಮಗಳನ್ನ ಶಾರದಮ್ಮ ಪತಿಯ ಅನುಪ ಸ್ಥಿತಿಯಲ್ಲಿ ಮುಂದುವರಿಸಿ, ರಾಜಕಾರಣದಲ್ಲಿ ಜಾತ್ಯಾತೀತ ಜನತಾದಳದಲ್ಲಿ ಶಾಸಕಿಯಾಗಿ ಸಾದನೆ ಮಾಡಿದವರು.
  ಇಬ್ಬರು ಗಂಡು ಮಕ್ಕಳು ಅದರಲ್ಲಿ ದೊಡ್ಡ ಮಗನ ಮದುವೆ ಇದೇ ಪೆಬ್ರುವರಿ ತಿಂಗಳ 15 ಸೋಮವಾರ ಶಿವಮೊಗ್ಗದ ಲಗಾನ್ ಕಲ್ಯಾಣ ಮಂಟಪದಲ್ಲಿ ನೆರವೇರಿಸಲಿದ್ದಾರೆ.
 
 
  ಮಗನ ವಿವಾಹ ಆಹ್ವಾನ ಪತ್ರಿಕೆ ಕೊಡಲು ಮನೆಗೆ ಬಂದಿದ್ದರು, ಪೂಯಾ೯ ನಾಯಕರಿದ್ದಾಗ ಅವರ ಮನೆಯಲ್ಲಿ ಕಾಫಿ ಕುಡಿದ ನೆನಪು ಮಾಡಿ ಬಂದವರಿಗೆಲ್ಲ ಕಾಫಿ ನೀಡಿದೆ ಅವರು ನನ್ನ ಮನೆಗೆ ಬಂದ ನೆನಪಿಗಾಗಿ "ರಾಮಕಥಾ ಮಂಜರಿ" ಪುಸ್ತಕ ನೀಡಿದೆ.
 
    ನಾನು ಕಳಿಸಿದ್ದ ನನ್ನ ಕಾದಂಬರಿ ಬೆಸ್ತರ ರಾಣಿ ಚಂಪಕಾ ಓದಿರುವುದಾಗಿ ತಿಳಿಸಿದರು.
#ಮುಂದಿನ_ದಿನದಲ್ಲಿಯೂ_ಜಾತ್ಯಾತೀತ_ಜನತಾ_ದಳದಲ್ಲೇ_ಮುಂದುವರಿಯುವುದಾಗಿ_ತಿಳಿಸಿದರು.
 #ಮುಂದಿನ_ಚುನಾವಣೆಯಲ್ಲಿ_ಆಯ್ಕೆ_ಆಗಿ_ರಾಜ್ಯದ_ಮಂತ್ರಿಗಳಾಗಿ_ಎಂದು_ಹಾರೈಸಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...