Skip to main content

Blog number 1228. ಸಜ್ಜನ ಮಿತ್ರ ಧರ್ಮ ಕುಮಾರ್ ತೀರ್ಥಹಳ್ಳಿ

ದಮ೯ರಾಯನಂತ ಗುಣದ ಹಾದಿಗಲ್ಲು (ತೀಥ೯ಳ್ಳಿ) ದಮ೯ ಕುಮಾರ್
  
  ಇವರು ನಿನ್ನೆ ತಡ ರಾತ್ರಿ ನಮ್ಮ ಊರಿನ ವರಸಿದ್ಧಿವಿನಾಯಕ ಸ್ವಾಮಿ ಜಾತ್ರೆ ಮುಗಿಸಿ ಮನೆಗೆ ಬಂದು ಕುಳಿತಿದ್ದಾಗ ಬಂದರು, ಸುಮಾರು 19 ವಷ೯ ಆಗಿತ್ತು ನನ್ನ ಇವರ ಬೇಟಿ ಆಗದೆ.
  
   ನಾನು ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದಾಗ ನನ್ನ ಭಾಗದಲ್ಲಿನ ಉತ್ಸಾಹಿ ಮತ್ತು ಪ್ರಾಮಾಣಿಕ ಕೃಷಿ ಸೇವಕರಾಗಿ ಜನಾನುರಾಗಿಗಳಾಗಿದ್ದರು, ರೈತ ಸ್ನೇಹಿ ಆಗಿದ್ದ ಇವರಂತವರನ್ನ ನಾನು ಈ ವರೆಗೆ ನೋಡಿಲ್ಲ, ಈಗೆಲ್ಲ ಕೃಷಿ ಸೇವಕರು ಯಾರೂ ಅಂತಲೇ ನನಗೆ ಗೊತ್ತಿಲ್ಲ.
  
 ಆನಂದಪುರಂ ನ ಆ ದಿನಗಳಲ್ಲಿ ನಾವೆಲ್ಲ ಯುವಕರು ಹಮ್ಮಿಕೊಳ್ಳುತ್ತಿದ್ದ ಯುವಜನ ಮೇಳ, ರಾಜ್ಯ ಮಟ್ಟದ ಹಾಸ್ಯ ನಾಟಕ ಸ್ಪದೆ೯, ಮೋದಿ ಡಾಕ್ಟರ್ರ ಕಣ್ಣು ಚಿಕಿತ್ಸಾ ಶಿಭಿರಗಳ ಯಶಸ್ವಿಗೊಳಿಸುವಲ್ಲಿ ತೆರೆ ಮರೆಯಲ್ಲಿ ಈ ದಮ೯ ಕುಮಾರರ ಶ್ರಮ ಇರುತ್ತಿತ್ತು.
 
   ನನಗೆ ಇವರ ತಮ್ಮ ಶಿವಮೊಗ್ಗದ ವಕೀಲರಾದ ಜಿ.ನಾಗೇಶನ್ ಹಳೆ ಗೆಳೆಯರು ನಂತರ ಇವರ ಗೆಳೆತನ.

  ಈಗ ತೀಥ೯ಳ್ಳಿಯಲ್ಲಿ ನೌಕರಿ, ಮನೆ ಮತ್ತು ಅಡಿಕೆ ತೋಟ ಮಾಡಿಕೊಂಡಿರುವುದಾಗಿ ಹೇಳಿದರು, ಇವರ ಅಣ್ಣ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಮಂಜುನಾಥ ಗೌಡರು ಜಿಲ್ಲಾ ಜೆಡಿಎಸ್ ಅಧ್ಯಕ್ಷರು, ತೀಥ೯ಹಳ್ಳಿಯ ರಾಜಕಾರಣದಲ್ಲಿ ಮಂಜುನಾಥ ಗೌಡರು, ಕಿಮ್ಮನೆ ಮತ್ತು ಆರಗ ಜ್ಞಾನೇಂದ್ರ ಪರಸ್ಪರ ರಾಜಕೀಯ ಕೆಸರೆರಾಚಾಟ ನಡೆದಿದ್ದರು ಎಲ್ಲರ ಜೊತೆ ದಮ೯ ಕುಮಾರರದ್ದು ಪ್ರೀತಿ ವಿಶ್ವಾಸದ ದಮ೯ಕಾರಣ.
   
     ಮೊನ್ನೆ ಇವರ ಮಗಳ ನಿಶ್ಚಿತಾಥ೯ಕ್ಕೆ ಮೂರು ಮುಖಂಡರು ಹಾಜರಿದ್ದರಂತೆ.
   
     ಸಹೋದರ ಮಂಜುನಾಥ ಗೌಡರಿಗೆ ಹೇಳಿ ದಿವ೦ಗತ ಶಾಂತವೇರಿ ಗೋಪಾಲಗೌಡರ 4 ಕಂಚಿನ ಪ್ರತಿಮೆ ಮಾಡಿಸಿ ಗೋಪಾಲಗೌಡರನ್ನ ಮೊದಲ ಚುನಾವಣೆಯಲ್ಲಿ ಸಾಗರ ವಿದಾನ ಸಭಾ ಕ್ಷೇತ್ರದಿಂದ ಸಾಗರದಿಂದ ಆಯ್ಕೆ ಆಗಿದ್ದಕ್ಕೆ ಸಾಗರದಲ್ಲಿ, ಮುಂದೆ ಶಾಸಕರಾಗಿ ಆಯ್ಕೆ ಆದ ತೀಥ೯ಹಳ್ಳಿ ಮತ್ತು ಅವರ ಪ್ರಭಾವ ಕಾಯ೯ ಕ್ಷೇತ್ರಗಳಾಗಿದ್ದ ಸೊರಬ ಮತ್ತು ಹೊಸ ನಗರದಲ್ಲಿ ನಿಮಿ೯ಸಲು ಹೇಳಿ ಅಂದೆ.
   
  ಗೋಪಾಲಗೌಡರ ಮೊದಲ ಆತ್ಮಚರಿತ್ರೆ "ಜೀವಂತ ಜ್ವಾಲೆ" ಬರೆದದ್ದು ಸಮಾಜವಾದಿ ಸಾಹಿತಿ ಕೋಣಂದೂರು ವೆಂಕಪ್ಪ ಗೌಡರ ಅದರ ಬಿಡುಗಡೆಯ ಜವಾಬ್ದಾರಿ ವಹಿಸಿದ್ದು ಆಗಿನ ಯುವ ಮುಖಂಡ ಕಿಮ್ಮನೆ ರತ್ನಾಕರ್, ಆನೆ ಮೇಲೆ ಪ್ರಸ್ತಕ ಮೆರವಣಿಗೆ ಮಾಡಿಸಿದ್ದರು ಅಂತ ವೆಂಕಪ್ಪ ಗೌಡರು ನೆನಪಿಸಿ ಕೊಳ್ಳುತ್ತಿದ್ದನ್ನ ನೆನಪಿಸಿದೆ.

    ಸಕಾ೯ರಿ ಸೇವೆಯಲ್ಲಿ ಇರುವುದರಿಂದ ಮಿತ್ರ ದಮ೯ ಕುಮಾರ್ ಏನೂ ಪ್ರತಿಕ್ರಿಯಿಸಲಿಲ್ಲ ತೀಥ೯ಳ್ಳಿಯಲ್ಲಿ ಇವರಿಗೆ ರಾಜಕಾರಣ ದಮ೯ ಸಂಕಟ ಕೂಡ.
  
  ಬಹಳ ವಷ೯ದ ನಂತರ ಆತ್ಮೀಯ ಗೆಳೆಯರ ಬೇಟಿ ಮೂರು ದಿನದ ಜಾತ್ರೆ ಆಯಾಸವನ್ನೆ ಮರೆಸಿಬಿಟ್ಟಿತು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...