Skip to main content

Blog number 1231. ಸಾಗರದ ರವೀಂದ್ರ ಪುಸ್ತಕಾಲಯ ಪ್ರಕಾಶನದ ಯಲ್ಲಣ್ಣ ಅಪ್ಪಾರಾವ್ ದಂತಿ ಅವರ 85ನೇ ಹುಟ್ಟು ಹಬ್ಬ ಮತ್ತು 50 ನೇ ವಿವಾಹ ವಾರ್ಷಿಕೋತ್ಸವದ ಆಚರಣೆ ಸಂದರ್ಭದಲ್ಲಿ ಅವರ ಆತ್ಮೀಯ ವಲಯದವರು ಪ್ರಕಟಿಸಿರುವ ಅಭಿನಂದನಾ ಗ್ರಂಥ ಬುಕ್ ಬ್ರಹ್ಮ

#ಸಾಗರದ_ಯಲ್ಲಣ್ಣ_ಅಪ್ಪಾರಾವ್_ದ೦ತಿ_ಅಭಿನಂದನಾ_ಗ್ರಂಥ

#ಬುಕ್_ಬ್ರಹ್ಮ_ಇದು_ದಂತಕಥೆಯಲ್ಲ_ದಂತಿ_ಕಥೆ

#ಮಾವೆಂಸ_ಪ್ರಸಾದ್_ಡಾ_ಕೆ_ಪ್ರಭಾಕರ್_ಸಂಪಾದಕತ್ವದಲ್ಲಿ 

#ನನಗೆ_ಪ್ರೀತಿಯಿಂದ_ಅಂಚೆಯಲ್ಲಿ_ಕಳಿಸಿದ್ದಾರೆ_ದಂತಿ.

   ಸಾಗರದ ರವೀಂದ್ರ ಪುಸ್ತಕಾಲಯದ ಸಂಸ್ಥಾಕರಾದ ಯಲ್ಲಣ್ಣ ಅಪ್ಪಾ ರಾವ್ ದಂತಿ ಕನ್ನಡದ ಪ್ರಖ್ಯಾತ ಸಾಹಿತಿಗಳ ಕಾದಂಬರಿಗಳ ಪ್ರಕಟಿಸಿದವರು.
  ಇವರು ಪ್ರಕಟಿಸಿದ ದ್ವೀಪಾ, ಹುಲಿಯ ಹಾಲಿನ ಮೇವು, ಎಡಕಲ್ಲು ಗುಡ್ಡದ ಮೇಲೆ, ಕಾಡಿನ ಬೆಂಕಿ,ಗಿರಿ ಕನ್ಯೆ, ಬಯಲು ದಾರಿ ಸಿನಿಮಾ ಆಗಿ ಸೂಪರ್ ಹಿಟ್ ಆಗಿರುವುದು ಒಂದು ದಂತಕಥೆಯೇ ಆಗಿದೆ.
  ನಾನು ಜಿಲ್ಲಾ ಪಂಚಾಯಿತಿ ಸದಸ್ಯನಾಗಿದ್ದಾಗ ಸಾಗರದ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾಯ೯ಪಾಲಕ ಇಂಜಿನಿಯರ್ ಕಛೇರಿಗೆ ಕಾರ್ಯ ನಿಮಿತ್ತ ಹೋದಾಗೆಲ್ಲ ಆ ಕಛೇರಿಯಲ್ಲಿ ಉದ್ಯೋಗಿಗಳಾಗಿದ್ದ ಅಕ್ಕ ಪಕ್ಕದ ಟೇಬಲ್ ಗಳಲ್ಲಿ ನಾ.ಡಿಸೋಜ ಮತ್ತು ದಂತಿ ಕುಳಿತಿರುತ್ತಿದ್ದರು.
  ಸಾಗರದ ಸಾಹಿತಿ ವಿಲಿಯಂ ಬರೆದ ಬದುಕು - ಭರವಸೆ ಎಂಬ ವ್ಯಕ್ತಿ ಚಿತ್ರಗಳು ಎಂಬ ಪುಸ್ತಕದಲ್ಲಿ #ಗ್ರ೦ಥ_ಗೆಳೆಯ_ದಂತಿ ಎಂಬ ಅಧ್ಯಾಯ ದಂತಿಯವರ ಪರಿಚಯ ಸಾದನೆಯನ್ನು 2007ರಲ್ಲಿ ಪ್ರಕಟಿಸಿದ್ದಾರೆ.
  85ನೇ ಹುಟ್ಟುಹಬ್ಬ ಮತ್ತು 50 ನೆ ವಿವಾಹವಾಷಿ೯ಕೋತ್ಸವದ ಸಂದರ್ಭದಲ್ಲಿ ಅವರ ಆತ್ಮೀಯ ಬಳಗದವರು ಸೇರಿ 248 ಪುಟಗಳ 400 ರೂಪಾಯಿಗಳ ಮುಖ ಬೆಲೆಯ ಸುಂದರವಾಗಿ ಮುದ್ರಿಸಿದ ಅಭಿನಂದನಾ ಗ್ರಂಥ  #ಬುಕ್_ಬ್ರಹ್ಮ ಸಾಗರದ ಚಾಮರಾಜಪೇಟೆಯ ಅನಿತಾ ಪ್ರಕಾಶನದಿಂದ ಪ್ರಕಟಿಸಿದ್ದಾರೆ.
  ಅಂಚೆಯ ಮೂಲಕ ದಂತಿಯವರು ಕಳಿಸಿದ ಪುಸ್ತಕ ತಲುಪಿತು ನಂತರ ಅವರಿಗೆ ಪೋನು ಮಾಡಿ ಅಭಿನಂದಿಸಿ ಪ್ರತಿ ಬಾರಿ ಅವರು ಪುಸ್ತಕ ಕಳಿಸಿದಾಗಲೆಲ್ಲ ಕೇಳುವಂತೆ ಈ ಪುಸ್ತಕದ ಹಣ ಎಷ್ಟು ಯಾವ ಖಾತೆಗೆ ಜಮಾ ಮಾಡಲಿ ಅಂದಾಗ ದಂತಿಯವರು "ಹಣ ಬೇಡ, ಪ್ರೀತಿಯಿಂದ ಕಳಿಸಿದ್ದೇನೆ ಓದಿ ಪ್ರತಿಕ್ರಿಯಿಸಿ" ಅಂದರು.
  ಅವರು ಪ್ರೀತಿಯಿಂದ ಕಳಿಸಿದ ಈ ಪುಸ್ತಕ ನನ್ನ ಟೇಬಲ್ ಮೇಲೆ ಇದೆ, ಒಂದೊಂದೆ ಪುಟ ಓದುತ್ತಾ ಇದ್ದೀನಿ.
    ದಂತಿಯವರ ಬಗ್ಗೆ ನಾನು ಬರೆದ ಲೇಖನದ ಲಿಂಕ್ ಇಲ್ಲಿ ಕ್ಲಿಕ್ ಮಾಡಿ ಓದಬಹುದು https://arunprasadhombuja.blogspot.com/2021/09/blog-post_20.html

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...