Skip to main content

Blog number 1237. ಲೋಕಸಭಾ ಚುನಾವಣೆ 2014ರಲ್ಲಿ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರರ ಜೊತೆ ಯಡೂರಪ್ಪರ ಪರ ಪ್ರಚಾರ ಮಾಡಿದ ನೆನಪುಗಳು


#ನನ್ನ_ರಾಜಕೀಯ ನಿವೃತ್ತಿಯ ಕೊನೆಯ 2014ರ ಲೋಕಸಭಾ ಚುನಾವಣೆ

    ಇಲ್ಲಿ ಈಗ ಪರಸ್ಪ ಕೆಸರರಾಚಾಟ ಸರಿ ಅಲ್ಲ, ಸೈನ್ಯದ ವಿಚಾರವನ್ನ ಚುನಾವಣ ಅಸ್ತ್ರವಾಗಿ ಬಳಸುವುದೂ ಸರಿಯಲ್ಲ, ಇದನ್ನೆಲ್ಲ ಎದುರಿಸಲು ನೈತಿಕ ಬೆಂಬಲ ಬೇಕಾಗಿದೆ, ಭಕ್ತರು V/S ಗುಲಾಮರು ಅಂತ ಪರಸ್ಪರ ಹೆಸರುತ್ತಾ ಸೋಷಿಯಲ್ ಮೀಡಿಯಾದ ವಚು೯ಯಲ್ ವಾರ್ ನ ಪೌರುಷಕ್ಕೆ ಯಾವುದೇ ಬೆಲೆ ಇಲ್ಲ.
 ಇದನ್ನ ಇಲ್ಲಿ ಉಲ್ಲೇಖಿಸಲು ಕಾರಣ ಇದೆ, 2013 ರ ವಿದಾನಸಭಾ ಚುನಾವಣೆಯಲ್ಲಿ ನಾನು ಸಾಗರ ತಾಲ್ಲೂಕಿನ JDS ಪಾಟಿ೯ ಅಧ್ಯಕ್ಷ, ನಮ್ಮ ಅಭ್ಯಥಿ೯ 2 ಬಾರಿ ಬಿಜೆಪಿ ಶಾಸಕರಾಗಿದ್ದ ಗೋಪಾಲಕೃಷ್ಣ ಬೇಳೂರು, ಈ ಚುನಾವಣೆಯಲ್ಲಿ ಅವರು23 ಸಾವಿರ ಮತ ಪಡೆದರು, ಕಾಂಗ್ರೇಸಿನಿಂದ ಗೆದ್ದವರು ಇವರ ತಾಯಿಯ ಅಣ್ಣ ಕಾಗೋಡು ತಿಮ್ಮಪ್ಪನವರು.
   ಆದರ ಮರು ವರ್ಷವೇ  ಬಂದ ಲೋಕಸಭಾ ಚುನಾವಣೆಗೆ ಬೇಳೂರು ಗೋಪಾಲಕೃಷ್ಣರು ಬಿಜೆಪಿ ಸೇರಿ ಯಡೂರಪ್ಪನವರನ್ನ ಲೋಕಸಭಾ ಸದಸ್ಯರನ್ನಾಗಿಸುವ ತೀರ್ಮಾನಕ್ಕೆ ಬ೦ದರು.
   ನಾವೆಲ್ಲರೂ ಬೇಳೂರು ಗೋಪಾಲಕೃಷ್ಣರ ಜೊತೆ ಯಡೂರಪ್ಪರ ಪರ ಚುನಾವಣೆಗಾಗಿ ಬಿಜೆಪಿಗೆ ಸೇರಿದೆವು (ಅದು ನನ್ನ ರಾಜಕಾರಣದ ನಿವೃತ್ತಿ ಕೂಡ).    ಆಗ ಸಾಗರ ತಾಲ್ಲೂಕಿನ ಮತ್ತು ಹೊಸ ನಗರ ತಾಲ್ಲೂಕಿನ ಪ್ರಚಾರ ಸಭೆಯಲ್ಲಿ ಆಗಿನ ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿದ್ದ ಮಾಜಿ ಸಂಸದ ಅಯನೂರು ಮಂಜುನಾಥ್ ರು ಮಾಡುತ್ತಿದ್ದ ಬಾಷಣ ನೆರೆದಿದ್ದವರನ್ನ ರೋಮಾಂಚನ ಮಾಡುತ್ತಿತ್ತು ಯಾವತ್ತೂ ಅವರು ಅತ್ಯುತ್ತಮ ವಾಗ್ಮಿ.
   UPA ಸಕಾ೯ರದ ಅವಧಿಯಲ್ಲಿ ಪಾಕಿಸ್ತಾನ ಗಡಿ ರೇಖೆ ಎಷ್ಟು ಸಾರಿ ಉಲ್ಲಂಘನೆ ಮಾಡಿದೆ, ನಮ್ಮ ದೇಶದ ಸೈನಿಕರ ಕತ್ತು ಕೊಯ್ದ ಘಟನೆ ಇತ್ಯಾದಿ ವಿವರಿಸುವಾಗ ಸಭೆ ನಿಶ್ಯಬ್ದವಾಗಿ ಆಲಿಸುತ್ತಿತ್ತು ಇದು ಕೂಡ ಯಡೂರಪ್ಪರಿಗೆ ಮತಗಳಾಗಿ ಪರಿವತ೯ನೆ ಆಗಿತ್ತು.
   UPA ಸಕಾ೯ರ ಹೋಗಿ BJP ಸಕಾ೯ರ ಬಂದಿತು ಆದರೆ ಭಯೋತ್ಪಾದಕರು ಯಾವುದೇ ಸಕಾ೯ರ ಬಂದರೂ ನಿಯಂತ್ರಿಸುವ ಕೆಲಸ ಸುಲಭವಲ್ಲ ಎಂಬುದು ಸಾಭೀತಾಗಿದೆ.
  ಹಾಗಾಗಿ ನಾವು ಇವುಗಳ ಪರಿಹಾರದ ಬಗ್ಗೆ ಬೇರೆ ದೃಷ್ಠಿಕೋನದಿಂದ ನೋಡ ಬೇಕು, ಚುನಾವಣೆಯ ಮತಗಳಿಕೆಗೆ ಸೈನ್ಯದ ವಿಚಾರ ಬಳಸಬಾರದೆಂದು ನನ್ನ ಅನಿಸಿಕೆ.
(ಚಿತ್ರದಲ್ಲಿ ನಾನು, ಗೋಪಾಲಕೃಷ್ಣ ಬೇಳೂರು, ಬಿ.ಆರ್.ಜಯ೦ತ್ ಈಶ್ವರಪ್ಪ ಮತ್ತು ಆಯನೂರು ಮಂಜುನಾಥ ಜೊತೆ)

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...