Skip to main content

Blog number 1246. ಪ್ರತಿ ಮಹಾಶಿವರಾತ್ರಿ ದಿನ ನಾನು ಮರೆಯಲಾರದ ಸದಾ ನೆನಪಿನ ದಿನವಾಗಿದೆ ಕಾರಣ 2019ರ ಶಿವರಾತ್ರಿಯಂದೇ ನಾನು ನನ್ನ ರಾತ್ರಿ ಊಟ ತ್ಯಜಿಸದ ದಿನ

#ಮಹಾ_ಶಿವರಾತ್ರಿ_ಜೀವಮಾನ_ಪೂರ್ತಿ_ನೆನಪಿನಲ್ಲಿ

#ಶಿವ_ಲಿ೦ಗರೂಪಿ_ಆದ_ದಿನ

#ನಾನು_ರಾತ್ರಿ_ಊಟ_ತ್ಯಜಿಸಿದ_ದಿನ.

#ಇವತ್ತಿನ_ಮಹಾಶಿವರಾತ್ರಿಗೆ_ಮೂರು_ವರ್ಷ

#ತಾಳಗುಪ್ಪ_ಸಮೀಪದ_ಬೆಳ್ಳೆಣ್ಣೆಯ_ಶಂಭೂಲಿಂಗೇಶ್ವರ_ಪುರಾಣ_ಪ್ರಸಿದ್ದ_ಪುಣ್ಯ_ಕ್ಷೇತ್ರ

  ಸಾಮಾನ್ಯವಾಗಿ ಪ್ರತಿ ವರ್ಷ ಪೆಬ್ರುವರಿ ಅಥವ ಮಾರ್ಚ್ ತಿಂಗಳಲ್ಲಿ ಮಹಾ ಶಿವರಾತ್ರಿ ಬರುತ್ತದೆ,ಹಿಂದೂ ಪಂಚಾಂಗ ಮಾಘ ಮಾಸದ ಬಹುಳ ಚತುರ್ದಶಿಯಂದು ಈಶ್ವರ ಲಿಂಗರೂಪ ತಾಳಿದ್ದರಿಂದ ಮಹಾ ಶಿವರಾತ್ರಿ ಆಚರಿಸಲಾಗುತ್ತದೆ ಎಂಬ ಪ್ರತೀತಿ ಇದೆ.
    ನನಗೆ ಮಹಾ ಶಿವರಾತ್ರಿ ನನ್ನ ಜೀವಮಾನದಲ್ಲಿ ಮರೆಯಲಾರದ ಜೀವಮಾನ ಪೂರ್ತಿ ನೆನಪಿನಲ್ಲಿರುವ ದಿನವಾಗಿದೆ.
   2019 ರ ಶಿವರಾತ್ರಿಯ ದಿನವೇ ನಾನು ರಾತ್ರಿ ಊಟ ತ್ಯಜಿಸುವ ತೀರ್ಮಾನವನ್ನು ಆಚರಣೆಗೆ ತಂದಿದ್ದು.
   ಇದರಿಂದ ನನಗೆ ಆದ ಆರೋಗ್ಯ ಸಂಬಂದಿ ಅನುಕೂಲಗಳು ನೂರಾರು, ತೂಕ ಇಳಿದಿದ್ದು - ಡಯಾಬಿಟೀಸ್ ನಿಯಂತ್ರಣ - ಬಿಪಿ ನಾರ್ಮಲ್ ಇತ್ಯಾದಿ ಜೊತೆಗೆ ನೆಮ್ಮದಿ.
   ಇವತ್ತಿಗೆ ರಾತ್ರಿ ಊಟ ತ್ಯಜಿಸಿ ಮೂರು ವರ್ಷ ಆಯಿತು ಮತ್ತು ಇವತ್ತು ಮಹಾ ಶಿವರಾತ್ರಿ.
  ಶಿವರಾತ್ರಿಯಂದು ಶಿವಭಕ್ತರು ಸಂದರ್ಶಿಸಬಹುದಾದ ಶ೦ಭೂಲಿಂಗೇಶ್ವರ ಉದ್ಭವ ಬೃಹತ್ ಶಿವಲಿಂಗ ಸಾಗರ ತಾಲ್ಲುಕಿನ ಬೆಳ್ಳೆಣ್ಣೆಯಲ್ಲಿದೆ.
   ಸಾಗರ ತಾಲ್ಲೂಕಿನ ಲಿಂಗನಮಕ್ಕಿ ಡ್ಯಾಂ ನಿಂದ ಮುಳುಗಡೆ ಆಗಿರುವ ಬೆಳ್ಳೆಣ್ಣೆ ತಾಳಗುಪ್ಪ ಪೋಲಿಸ್ ಠಾಣೆಯ ಪಕ್ಕದ ರಸ್ತೆಯಲ್ಲಿ 8 km ದೂರದಲ್ಲಿದೆ ಅಲ್ಲಿ ಪುರಾತನವಾದ ಬೇಡರು ಪ್ರತಿಷ್ಟಾಪಿಸಿ ಪೂಜಿಸುತ್ತಿದ್ದರೆಂಬ ಸ್ಥಳ ಪುರಾಣದ ಶಂಭೂಲಿಂಗೇಶ್ವರ ದೇವರ ಬೃಹತ್ ಉದ್ಭವ ಲಿಂಗವಿದೆ ಈ ದೇವಾಲಯದ ಹಿಂಬಾಗದ ಗುಹೆಯಲ್ಲಿಯೇ ಖೇಚರಿ ವಿದ್ಯಾ ಪಾರಂಗಿತ ಕಲಸೆ ಸ್ವಾಮಿಗಳು ಅನೇಕ ವರ್ಷ ಒಬ್ಬರೇ ತಪಸ್ಸು ಮಾಡಿದ ಪುಣ್ಯ ಭೂಮಿ ಇದು.
  ಆದ್ದರಿಂದ ಮಹಾ ಶಿವರಾತ್ರಿಯ ಇವತ್ತು ಬೆಳ್ಳೆಣ್ಣೆಯ ಶಂಭೂಲಿಂಗೇಶ್ವರ ದೇವರ ಚಿತ್ರದೊಂದಿಗೆ ಆಪ್ತರಿಗೆಲ್ಲ ಶುಭಾಷಯ ಕಳಿಸಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...