Skip to main content

Blog number 1275. ಮಾವಿನಗುಂಡಿ ಪಾಲ್ಸ್ ಕಣ್ಣೆದುರಿಗೆ ಇದ್ದರೂ ಅದರ ಎತ್ತರದ ಅಳತೆ ಮಾಡಿಲ್ಲ, ಜಲಪಾತಗಳ ಪಟ್ಟಿಯಲ್ಲೂ ಸೇರಿಸಿಲ್ಲ!!, ಈ ಜಲಪಾತ ವೀಕ್ಷಣೆಗೆ ಸರಿಯಾದ ವೀವ್ ಪಾಯಿಂಟ್ ನಿರ್ಮಿಸಿಲ್ಲ, ಇದು ಎತ್ತರದಲ್ಲಿ ಜೋಗ್ ಫಾಲ್ಸ್ ಗಿಂತ 300 ಅಡಿಗಿಂತ ಹೆಚ್ಚು ಎತ್ತರವಿದೆ..... ಜೋಗ ಜಲಪಾದ ಅಭಿವೃದ್ದಿ ಪ್ರಾಧಿಕಾರ ರಚನೆ ಆಗಿ ಬೆಳ್ಳಿಹಬ್ಬ ಆಚರಿಸುವ ಹಾದಿಯಲ್ಲಿದೆ.

#ಜೋಗ_ಜಲಪಾತದ_ಪಕ್ಕದ_ಮಾವಿನಗುಂಡಿ_ಜಲಪಾತ

#ಮಾವಿನಗುಂಡಿ_ಜಲಪಾತದ_ಎತ್ತರ_ಈವರೆಗೆ_ಅಳತೆ_ಯಾಕೆ_ಆಗಲಿಲ್ಲ?

#ಜೋಗಜಲಪಾತಕ್ಕಿಂತ_300_ಅಡಿಗಿಂತ_ಹೆಚ್ಚು_ಎತ್ತರ_ಇರುವ_ಮಾವಿನಗುಂಡಿ_ಪಾಲ್ಸ್

#ಮಾವಿನಗುಂಡಿ_ಪಾಲ್ಸ್_ಕಣ್ಣೆದುರು_ಇದ್ದರೂ_ದೇಶದ_ಜಲಪಾತದ_ಪಟ್ಟಿಯಲ್ಲಿಲ್ಲ.

#ಜೋಗ್_ಅಭಿವೃದ್ಧಿ_ಪ್ರಾಧಿಕಾರಕ್ಕೂ_ಈ_ಬಗ್ಗೆ_ಮಾಹಿತಿ_ಇರುವುದು_ಅನುಮಾನ.

   ರಾಜ್ಯದ ಸುಂದರವಾದ ಜೋಗ್ ಜಲಪಾತದ ಸೊಬಗನ್ನು ಸವಿಯಲು ಲಕ್ಷಾಂತರ ಪ್ರವಾಸಿಗಳು ಬರುತ್ತಾರೆ ಆದ್ದರಿಂದಲೇ ಜೋಗ್ ಅಭಿವೃದ್ಧಿ ಪ್ರಾಧೀಕಾರವನ್ನು ರಚಿಸಿ 20 ವಷ೯ವಾಯಿತು.
   ಜೋಗ್ ಜಲಪಾತದ ಬಲಬಾಗದಲ್ಲಿ ಮಳೆಗಾಲದ ಜೂನ್ ತಿಂಗಳಿಂದ ನವೆಂಬರ್ ವರೆಗೆ ದುಮ್ಮಿಕ್ಕುವ ಜಲಪಾತದ ಬಗ್ಗೆ ಹೆಚ್ಚಿನ ಮಾಹಿತಿ ಸರ್ಕಾರದ ಪ್ರವಾಸೋದ್ಯಮ ಇಲಾಖೆಯಲ್ಲಿ ದಾಖಲಾಗದಿರುವುದು ವಿಪರ್ಯಾಸ.
   ಮಾವಿನಗುಂಡಿ ಪಾಲ್ಸ್ ಹೆಸರಿನ ಈ ಜಲಪಾತದ ಎತ್ತರ ಈವರೆಗೂ ಯಾರೂ ಅಳತೆ ಮಾಡಿರುವುದಿಲ್ಲ.
  ಇತ್ತೀಚೆಗೆ ಈ ಜಲಪಾತದ ಡ್ರೋನ್ ಚಿತ್ರಕ್ಕಾಗಿ ತಮ್ಮ ಪರಿಚಿತರಿಗೆ  ಸ್ಥಳಿಯ ಪ್ರವಾಸೋದ್ಯಮದ ಸಲಹೆಗಾರರಾದ ಅಶೋಕ್ ಹೆಗ್ಗಡೆ ಮಾವಿನಗುಂಡಿ ವಿನಂತಿಸಿ ತೆಗೆಸಿದ ಪೋಟೋಗಳಲ್ಲಿ ಮಾವಿನಗುಂಡಿ ಪಾಲ್ಸ್ ನ ಶೇಕಡಾ 35% ಭಾಗ ಗೋಚರವಾಗುವುದಿಲ್ಲ ಆ ಲೆಖ್ಖದಲ್ಲಿ ಮಾವಿನಗುಂಡಿ ಪಾಲ್ಸ್ ಎತ್ತರ ಜೋಗ್ ಜಲಪಾತಕ್ಕಿಂತ ಎತ್ತರವಿದೆ.
 ಅಶೋಕ್ ಹೆಗ್ಗಡೆ ಮಾವಿನಗುಂಡಿಯವರು ಅಂದಾಜಿಸಿದಂತೆ 1100 ಅಡಿಗಿಂತ ಹೆಚ್ಚು ಎತ್ತರ ಮಾವಿನಗುಂಡಿ ಪಾಲ್ಸ್ ಇರಬಹುದು.
   ಜೋಗ ಜಲಪಾತ ಅಭಿವೃದ್ಧಿ ಪ್ರಾಧಿಕಾರ ರಾಜ್ಯ ಸರ್ಕಾರದ ಅಂಗಸಂಸ್ಥೆಯಾಗಿ ಮಾವಿನಗುಂಡಿ ಪಾಲ್ಸ್ ಎತ್ತರ ಈವರೆಗೆ ಅಳತೆ ಮಾಡಿಸದಿರುವುದು ಮತ್ತು ಮಾವಿನಗುಂಡಿ ಪಾಲ್ಸ್ ಬಗ್ಗೆ ಹೆಚ್ಚಿನ ಮಾಹಿತಿಯನ್ನು ದಾಖಲಿಸದಿರುವುದು ವಿಷಾದನೀಯ.
   ಮಾವಿನಗುಂಡಿ ಪಾಲ್ಸ್ ವೀಕ್ಷಣೆಗೆ ವೀವ್ ಪಾಯಿಂಟ್ ಗಳು ಕೂಡ ನಿರ್ಮಿಸಿಲ್ಲ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...