Skip to main content

Blog number 1296. ಹಿಮಪಾತದಲ್ಲಿ ಹಿಮಾಲಯದ ಬದರಿಯಲ್ಲಿ ಒಂದು ತಿಂಗಳು ತಂಗಿದ್ದ ಶೀ ಪ್ರಮುಖ ಮುನಿ ಸಾಗರರ ಸತ್ಸಂಗದ ಭಾಗ್ಯ 10- ಮಾರ್ಚ್ - 2019 ರಲ್ಲಿ ಅವರು ನಮ್ಮ ಶ್ರೀ ಕೃಷ್ಣ ಸರಸ ಕಲ್ಯಾಣ ಮಂಟಪದಲ್ಲಿ ನನಗೆ ದೊರೆಯಿತು

https://youtu.be/9SCAFSNNqoA
#ಹಿಮಾಲಯದಲ್ಲಿ_ಶ್ರೀಪ್ರಮುಖಮುನಿ_ಸಾಗರರು_ಒಂದು_ತಿಂಗಳು_ತಂಗಿದ್ದರು

#ಹಿಮಾಲಯದ_ಹಿಮಪಾತದಲ್ಲಿ_ದಿಗಂಬರರಾಗಿ_ಇರುವುದು_ಸಾಧ್ಯವೆಂದು_ತೋರಿಸಿದ್ದಾರೆ.

#ನಮ್ಮ_ಕಲ್ಯಾಣಮಂಟಪದಲ್ಲಿ_ತಂಗಿದ್ದರು

#ಅವರ_ದರ್ಶನದ_ಸತ್ಯಂಗದ_ಭಾಗ್ಯ_ನನ್ನದು

#ಕಲಿಯುಗದಲ್ಲಿ_ನಿಜ_ಸಂನ್ಯಾಸಿಗಳು_ಜೈನ_ಮುನಿಗಳು_ಮಾತ್ರ

#ಬಾರತೀಯ_ಸಮಾಜದ_ಸನ್ಯಾಸ_ದೀಕ್ಷೆ_ಕಟ್ಟುನಿಟ್ಟಾಗಿ_ಪಾಲಸುವವರು.

#ನನ್ನ_ಲಾಡ್ಜ್_ನಾಮಕಾರಣಕ್ಕೆ_ಕಾರಣರಾದ_ಹಿಂದಿನ_ಹೊಂಬುಜ_ಜೈನ_ಮಠಾದೀಶರು

 ನನ್ನ ತಂದೆ ಕಾಲದಿಂದ ನಮ್ಮ ಸ್ಥಳ ಜೈನ ದಿಗಂಬರರಿಗೆ, ಮಾತಾಜಿಯವರಿಗೆ ಒಂದು ತ೦ಗುದಾಣ, ಈವರೆಗೆ 2006ರಿಂದ 20I9ರವರೆಗೆ ಎರಡು ಬಾರಿ ಶ್ರವಣಬೆಳಗೋಳದ ಗೊಮ್ಮಟೇಶ್ವರನಿಗೆ ಮಹಾಮಜ್ಜನ ನಡೆದಿದೆ (12 ವಷ೯ಕೊಮ್ಮೆ) ಇಲ್ಲಿವರೆಗೆ ನಮ್ಮಲ್ಲಿ ತಂಗಿದ ಜೈನ ಮುನಿ ಮತ್ತು ಮಾತೆಯರ ಸಂಖ್ಯೆ 1000ಕ್ಕೂ ಹೆಚ್ಚು.
  ಜೈನ ಮುನಿ ಮಹಾರಾಜರ ಮತ್ತು ಮಾತೆಯರ ಸೇವೆ ಮಾಡಲು ಜೈನ ಸಮಾಜದ ಅನೇಕರು ಕಾತುರರಾಗಿರುತ್ತಾರೆ ಆದರೆ ಅವರು ಬರುವುದಿಲ್ಲ.
 ಅದೇನೋ ಗೊತ್ತಿಲ್ಲ ನನ್ನ ತಂದೆ ತಾಯಿ ಹೆಸರಲ್ಲಿ ಕಟ್ಟಿದ ಕಲ್ಯಾಣ ಮಂಟಪ (ಶ್ರೀ ಕೃಷ್ಣ ಸರಸ ಕನ್ವೆಷನ್ ಹಾಲ್, ತಂದೆ ಕೃಷ್ಣಪ್ಪ ಮತ್ತು ತಾಯಿ ಸರಸಮ್ಮ)ದಲ್ಲಿ ಇವರುಗಳು ತಂಗುತ್ತಾರೆ ಮತ್ತು ನಮ್ಮನ್ನ ಆಶ್ರೀವದಿಸುತ್ತಾರೆ.
  ಹುOಚದ ಹಿಂದಿನ ಸ್ವಾಮಿಗಳು ಸೂಚಿಸಿದ ಹೆಸರು ನನ್ನ ಲಾಡ್ಜ್ ಗೆ ಇಟ್ಟಿದ್ದೇನೆ ಅದು ಹೊಂಬುಜ ರೆಸಿಡೆನ್ಸಿ ಅಂತ ಅದಕೊಂದು ಹಿನ್ನೆಲೆ ಇದೆ ಕೇಳಿ, ದೂರದ ಗುಜರಾತಿನ ವಜ್ರ ವ್ಯಾಪಾರಿ ನಿಮ೯ಲ್ ಕುಮಾರ್ ಒಮ್ಮೆ ಹುಂಚದ ಹಿಂದಿನ ಸ್ವಾಮಿಗಳ ಬೇಟಿಗೆ ಬಂದವರು ನನ್ನ ಜೊತೆಯಲ್ಲಿ ಕರೆದೊಯ್ದಿದ್ದರು.
 ಅಲ್ಲಿ ಸ್ವಾಮಿಗಳ ಬೇಟಿ ಆಯಿತು, ಹಿಂದಿನ ದಿನವಷ್ಟೆ ಅವರು ಅಮೇರಿಕಾ ದೇಶದ ಪ್ರವಚನ ಪ್ರವಾಸ ಮುಗಿಸಿ ಬಂದಿದ್ದರು, ನನ್ನ ಅವರ ಬೇಟಿ ಅದು ಮೊಟ್ಟ ಮೊದಲಿನದು, ನನ್ನ ಪರಿಚಯ ನಿಮ೯ಲ್ಕುಮಾರರು ಮಾಡಿದಾಗ ಅವರು ಕೇಳಿದ ಮೊದಲ ಪ್ರಶ್ನೆ ನಿಮ್ಮ ಕಲ್ಯಾಣ ಮಂಟಪದ ಮೇಲೆ ಏನು ಕಟ್ಟುತ್ತಿದೀರಿ? ಅಂತ, ಲಾಡ್ಜ್ ಅಂತ ಹೇಳಿದೆ, ನಂತರ ಗೊತ್ತಾಯಿತು ಅವರಿಗೆ ನಮ್ಮ ತಂದೆ ಕೃಷ್ಣಪ್ಪ ಪರಿಚಯ ಅಂತ.
  ಮುಂದೆ ಲಾಡ್ಜ್ ಗೆ ಏನು ಹೆಸರಿಡುತ್ತೀರಿ ಅಂದಾಗ ಇನ್ನು ನಿದಾ೯ರ ಮಾಡಿಲ್ಲ ನೀವು ಸಲಹೆ ಕೊಡಿ ಅಂದಾಗ ಅವರು ಹೊಂಬುಜ ಅಂತ ಯಾಕೆ ಇಡಬಾರದೆಂದರು, ಹೊಂಬುಜದ ಅಥ೯ ಕೇಳಿದೆ, ಅವರೆಂದರು ಸಾವಿರ ವಷ೯ದ ಹಿಂದೆ ಈ ಎಲ್ಲಾ ಪ್ರದೇಶ ಆಳಿದ ರಾಜನ ಹೆಸರು, ಸಂಸ್ಕೃತ ದಲ್ಲಿ ಉದಯಿಸುತ್ತಿರುವ ಸೂಯ೯ನ ಸುವಣ೯ ಬುಜಗಳು ಅಂದರು.
  ನೀವು ಬ೦ದು ಉದ್ಘಾಟಿಸುವುದಾದರೆ ಆ ಹೆಸರೇ ಇಡುತ್ತೇನೆ ಅಂದೆ, ಅದಾದ ನಂತರ ಮೂರು ತಿಂಗಳಲ್ಲಿ ಸ್ವಾಮೀಜಿ ಇಹಲೋಕ ತ್ಯಜಿಸಿದರು, ಅವರು ಪ್ರವಚನಗಳಿಂದಲೇ ಭಕ್ತರಿ೦ದ ಸ್ಟೀಕರಿಸಿದ ಹಣ 600 ಕೋಟಿಗೂ ಹೆಚ್ಚು!
 ಈ ಘಟನೆ ನಡೆದ 2 ವಷ೯ದ ನಂತರ ನನ್ನ ಲಾಡ್ಜ್ ಪ್ರಾರಂಬಿಸ ಬೇಕಾದಾಗ ಹೆಸರಿಗಾಗಿ ಹುಡುಕಾಟ ಪ್ರಾರ೦ಬಿಸಿದಾಗ ನೆನಪಾಯಿತು, ಹಾಗಾಗಿ ಹೊಂಬುಜ ರೆಸಿಡೆನ್ಸಿ ಅಂತಲೇ ನಾಮಕರಣ ಮಾಡಿದೆ.
 ಮೊನ್ನೆ ಬಂದು ತಂಗಿದ ಜೈನ ಮಹಾಮುನಿಗಳು ಶ್ರೀ ಪ್ರಮುಖ ಸಾಗರರರು, ಶ್ರವಣಬೆಳಗೋಳ ಮತ್ತು ದಮ೯ಸ್ಥಳದ ಬಾಹುಬಲಿ ಮಹಾ ಮಸ್ತಾಬಿಷೇಕ ಮುಗಿಸಿ ಹೊಂಬುಜ ಕ್ಷೇತ್ರ ಸಂದಶಿ೯ಸಿ ಗೋವಾ ಸಾಗುವಾಗ ನಮ್ಮ ಕಲ್ಯಾಣ ಮಂದಿರದಲ್ಲಿ ತಂಗಿದ್ದರು  (10 ಮಾರ್ಚ್ 2019) ಆ ದಿನ ಸಾಗರದ ಜೈನ ಮುಖಂಡರಾದ ರಾಜಕುಮಾರ್ ಮತ್ತು ವೀರರಾಜ್‌ ಜೈನ್ ಜೊತೆಯಲ್ಲಿದ್ದರು.
 ಇವರು ಹಿಮಾಲಯ ತಪ್ಪಲಿನ ಬದರಿಯಲ್ಲಿ ಹಿಮಪಾತವಾಗುವಾಗ ದಿಗOಬರರಾಗಿ ಒಂದು ತಿಂಗಳು ತಂಗಿದ್ದರು ಅಲ್ಲಿ ಪ್ರವಚನ ನೀಡಿದ್ದರು, ಈ ಬಗ್ಗೆ ನನ್ನ ಪ್ರಶ್ನೆಗೆ ವಿಡಿಯೋದಲ್ಲಿ ಉತ್ತರಿಸಿದ್ದಾರೆ.
  ಈ ಲಿಂಕ್ ಕ್ಲಿಕ್ ಮಾಡಿ youtube ನಲ್ಲಿ ನೋಡಬಹುದು
https://youtu.be/9SCAFSNNqoA
 ಸಾದು ಸ೦ತರು ತಂಗುವ ಅವರನ್ನ ಸತ್ಕರಿಸುವ ಭಾಗ್ಯ ದೇವರೇ ನನ್ನ ಗುರು ಹಿರಿಯರ ಆಶ್ರೀವಾದದಿಂದ ಅನುಗ್ರಹಿಸಿದ್ದಾರೆ ಎಂದೇ ಬಾವಿಸಿದ್ದೇನೆ.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ