Skip to main content

Blog number 1301.192A ಕಾಯ್ದೆಯಿಂದ ಮಲೆನಾಡು ವ್ಯಾಪ್ತಿ ಕೈಬಿಡಲು ಶಾಸಕ ಹರತಾಳು ಹಾಲಪ್ಪ ವಿಧಾನಸಭೆಯಲ್ಲಿ ಮಾಡಿದ ಪ್ರಸ್ತಾವನೆ

#ಹರತಾಳುಹಾಲಪ್ಪರ ಈ ಕೆಲಸ ಸಣ್ಣದಲ್ಲ!  ಯಾರೂ ಏನೇ ಟೇಕೆ ಟಿಪ್ಪಣಿ ಮಾಡಲಿ ಇಡೀ ರಾಜ್ಯದ ಗ್ರಾಮೀಣ ಪ್ರದೇಶದ ರೈತರ ಪರವಾಗಿ ಈ ಇಬ್ಬರು ಶಾಸಕರನ್ನ ಅಭಿನಂದಸಲೇ ಬೇಕು ಸಾಗರದ ಮೊದಲ ಶಾಸಕರಾದ ಶಾಂತವೇರಿ ಗೋಪಾಲಗೌಡರು ಹೇಳಿದಂತೆ ಶಾಸಕರು ಶಾಸನ ಮಾಡುವಂತಾಗ ಬೇಕು ಅಂದದ್ದು ಇವರು ಸಾಬೀತು ಮಾಡಿದ್ದಾರೆ. #

*192ಎ ಕಾಯ್ದೆಯ ವ್ಯಾಪ್ತಿಯಿಂದ ಮಲೆನಾಡು ಪ್ರದೇಶ ಕೈಬಿಡುವಂತೆ ಹರತಾಳು ಹಾಲಪ್ಪ ಆಗ್ರಹ:-*

 ರಾಜ್ಯದಲ್ಲಿ ಕರ್ನಾಟಕ  ಭೂ ಕಂದಾಯ ಅಧಿನಿಯಮ 192ಎ ಕಾಯ್ದೆಯ ವ್ಯಾಪ್ತಿಯಿಂದ *ಮಲೆನಾಡು ಪ್ರದೇಶ ಸೇರಿದಂತೆ ಗ್ರಾಮೀಣ ಪ್ರದೇಶವನ್ನು ಹೊರಗಿಡುವಂತೆ ಸಾಗರ-ಹೊಸನಗರ ಶಾಸಕ ಹರತಾಳು ಹಾಲಪ್ಪ* ವಿಧಾನ ಸಭೆಯಲ್ಲಿಂದು ಆಗ್ರಹಿಸಿದ್ದಾರೆ.
ನಿಯಮ 69ರಡಿ ಈ ವಿಷಯ ಪ್ರಸ್ತಾಪಿಸಿದ ಹಾಲಪ್ಪ, *ಭೂ ಕಬಳಿಕೆ ನಿಷೇಧ ಕಾನೂನು ಅಡಿಯಲ್ಲಿ ಪಟ್ಟಣ, ನಗರದ ಸುತ್ತಮುತ್ತ ಪ್ರದೇಶ, ಗ್ರಾಮೀಣ ಪ್ರದೇಶವನ್ನು ಒಳಪಡಿಸಿರುವುದರಿಂದ ಮಲೆನಾಡು ರೈತರು ವಿಶೇಷವಾಗಿ ಗ್ರಾಮೀಣ ಪ್ರದೇಶದ ನೂರಾರು ರೈತರು ಬೆಂಗಳೂರಿನಲ್ಲಿರುವ ನ್ಯಾಯಾಲಯಕ್ಕೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.* ಅರಣ್ಯ ಇಲಾಖೆಯವರು ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ದಿನ ಕಳೆದಂತೆ ರೈತರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದರು.

*ಮಲೆನಾಡು ಪ್ರದೇಶವಾದ ಬಾರಂಗಿ ಸೇರಿದಂತೆ ಸುತ್ತ ಮುತ್ತಲ ಪ್ರದೇಶಗಳಲ್ಲಿ ನೂರಾರು ವರ್ಷಗಳಿಂದ ಉಳುಮೆ ಮಾಡಿಕೊಂಡು ಜೀವನ ಸಾಗಿಸುತ್ತಿರುವ ರೈತರ ಮೇಲೆ 192ಎ ಕಾಯ್ದೆಯ ಅಡಿ ಪ್ರಕರಣ ದಾಖಲಿಸಲಾಗಿದೆ.  ಒಂದು ವಿದ್ಯುತ್ ಕಂಬವನ್ನು ಹಾಕುವುದು ಕಷ್ಟ ಸಾಧ್ಯವಾಗಿದೆ.  ಈ ಹಿನ್ನೆಲೆಯಲ್ಲಿ ಮಲೆನಾಡು ಪ್ರದೇಶವನ್ನು ಈ ಕಾಯ್ದೆಯ ವ್ಯಾಪ್ತಿಯಿಂದ ಹೊರಗಿಟ್ಟು 30 ರಿಂದ 40 ವರ್ಷಗಳ ಕಾಲ ಉಳುಮೆ ಮಾಡಿಕೊಂಡು ಬಂದಿರುವ ರೈತರಿಗೆ ಜೀವನ ನಡೆಸಲು ಅವಕಾಶ ನೀಡಬೇಕೆಂದು ಹೇಳಿದರು.* 
ಇದಕ್ಕೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಮಲೆನಾಡು ಪ್ರದೇಶದಲ್ಲಿ ಬಗರ್ ಹಕ್ಕುಂ ಸಾಗುವಳಿದಾರರು ಅನೇಕ ವರ್ಷಗಳಿಂದ ಒಂದೆಡೆ ಉಳುಮೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ.  ಆದರೆ ಈ ಕಾಯ್ದೆಯ ನೆಪದಲ್ಲಿ ಅರಣ್ಯ ಅಧಿಕಾರಿಗಳು ತೊಂದರೆ ನೀಡುತ್ತಿದ್ದಾರೆ ಈ ಹಿನ್ನೆಲೆಯಲ್ಲಿ ಈ ಕಾನೂನಿನ ವ್ಯಾಪ್ತಿಯಿಂದ ಮಲೆನಾಡು ಮತ್ತು ಗ್ರಾಮೀಣ ಪ್ರದೇಶದ ಜನರನ್ನು ಹೊರಗಿಡಬೇಕೆಂದು ಹೇಳಿದರು.

ಇದಕ್ಕೆ ಉತ್ತರಿಸಿದ *ಕಂದಾಯ ಸಚಿವ ಆರ್. ಅಶೋಕ್ ಮಲೆನಾಡು ಪ್ರದೇಶದಲ್ಲಿ 12 ರಿಂದ 15 ವರ್ಷಗಳ ಕಾಲ ವಾಸಮಾಡಿಕೊಂಡು ಬಂದಿರುವ ರೈತರ ಜಮೀನುಗಳನ್ನು ಸಕ್ರಮಗೊಳಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಡಲಾಗುವುದು.  ಅವಕಾಶ ಸಿಕ್ಕರೆ ಈ ಕಾಯ್ದೆಯಿಂದ ಗ್ರಾಮೀಣ ಪ್ರದೇಶವನ್ನು ಹೊರಗಿಡುವ ಕುರಿತು ತಿದ್ದುಪಡಿ ವಿದೇಯಕವನ್ನು ಈ ಅಧಿವೇಶನದಲ್ಲಿಯೇ ಮಂಡಿಸಲಾಗುವುದು ಎಂದು ತಿಳಿಸಿದರು.*

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...