Skip to main content

Blog number 1318. ನನ್ನ ಮನಸ್ಸಲ್ಲಿ ಹೆಚ್ಚು ಕಾಡುವ ಈ ಪುಸ್ತಕ ಖ್ಯಾತ ಲೇಖಕ ಅರವಿಂದ ಚೊಕ್ಕಾಡಿ ಅವರು ಅವರ ತಂದೆಯನ್ನು ಕೇಂದ್ರವಾಗಿಸಿ ಬರೆದ "ಇಲ್ಲದ ತೀರದಲ್ಲಿ" ಸಂವೇದನೆಯ ಸಂವಾದ

#ಮತ್ತೆ_ಮತ್ತೆ_ಮನಸ್ಸನ್ನು_ತಲ್ಲಣಿಸುವ_ಪುಸ್ತಕ
#ಅರವಿಂದಚೊಕ್ಕಾಡಿಯವರಇಲ್ಲದತೀರದಲ್ಲಿಕೃತಿ
 ಇವರ ಅಜ್ಜನಿಗೆ ಹುಟ್ಟಿನಿ೦ದ ಬ್ರಾಹ್ಮಣಿಕೆ ಬರುತ್ತೆ ಎಂಬ ನಂಬಿಕೆ,
ಇವರ ತಂದೆಗೆ ಕಮ೯ದಿOದ ಬರುತ್ತೆ ಎಂಬ ನಂಬಿಕೆ, ಇವರಿಗೆ ಒಳ್ಳೆಯ ಮನುಷ್ಯನಾಗಿ ಬದುಕಲು ಜಾತಿ ಆಗತ್ಯವಿಲ್ಲ ಎಂಬ ನಂಬಿಕೆ.
  "ಇಲ್ಲದ ತೀರದಲ್ಲಿ"ಕೃತಿ ಕನಾ೯ಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಪುರಸ್ಕಾರ ಪಡೆದ ಕೃತಿ, ಇವರ ತಂದೆ ಬದುಕಿನೊಂದಿಗಿನ ಸಂವಾದ ಈ ಪುಸ್ತಕ, ಈ ಪುಸ್ತಕ ಖರೀದಿಸಲು ಆಸಕ್ತಿ ಇದೆ ಅಂದಾಗ ಅರವಿ೦ದವರು ನಾಕಾರು ಪ್ರತಿ ತಮ್ಮ ಹತ್ತಿರ ಇದೆ, ಹಣ ಪಡೆಯುವುದಿಲ್ಲ ವಿಳಾಸ ಕಳಿಸಿ ಕಳಿಸುತ್ತೇನೆ ಅಂದಿದ್ದರು.
  ಪೇಸ್ ಬುಕ್ನಲ್ಲಿ ಗೆಳೆಯರಾದ ಅರವಿಂದ ಚೊಕ್ಕಾಡಿಯವರು ಸಾಹಿತಿಗಳು, ವಾಗ್ಮಿಗಳು, ತರಬೇತಿದಾರರು. ಇವರ ತಕ೯ ಬದ್ದ ಚಚೆ೯ಗಳು ನನಗಿಷ್ಟ.
  ಪುಸ್ತಕ ಕಳಿಸುವಾಗ ಈ ಪುಸ್ತಕ ಓದಿ ವಿಮಷೆ೯ ಮಾಡಬೇಕಾಗಿಲ್ಲ, ಓದದೇ ಇದ್ದರೂ ನನಗೆ ಬೇಸರ ಇಲ್ಲ, ಓದಲಿಲ್ಲ ಅಂತ ನಾಚಿಕೆ ಮಾಡಿಕೊಳ್ಳಬೇಕಾಗಿಯೂ ಇಲ್ಲ ಎಂಬ ಅಥ೯ದಲ್ಲಿ ಬರೆದಿದ್ದರು.
 ಇಡೀ ಪುಸ್ತಕ ಪ್ರತಿಯೊಬ್ಬನ ಜೀವನದ ಒಂದಲ್ಲ ಒಂದು ಘಟನೆಯ ತಳುಕಿದೆ ಆದರೆ ಇಡೀ ಜೀವನದ ಘಟನೆಗಳನ್ನ ತಕ೯ ಬದ್ದವಾಗಿ ಇದ್ದದ್ದು ಇದ್ದ೦ತೆ ಕಪ್ಪು ಬಿಳುಪಿನಲ್ಲಿ ಇವರ ರೀತಿ ಬರೆಯುವ ಕ್ರಮ, ದೈಯ೯ ಮತ್ತು ನೇರವ೦ತಿಕೆ ಎಲ್ಲರಲ್ಲೂ ಇರಲು ಸಾಧ್ಯವಿಲ್ಲ.
  "ಅಪ್ಪ ಅಮ್ಮ ನಮಗೆ ಯಾವ ಸಂಪತ್ತನ್ನು ಮಾಡಿ ಕೊಡಬೇಕಾಗಿಲ್ಲ, ನಾವೇ ಅವರು ಮಾಡಿದ ಬಹಳ ದೊಡ್ಡ ಸಂಪತ್ತು ಅದನ್ನ ಉಳಿಸಿಕೊಳ್ಳಬೇಕು" ಎಂಬುದು ನನಗೆ ತುಂಬಾ ಹಿಡಿಸಿತು.
  ಅಂತರ್ ಜಾತಿ ವಿವಾಹ, ಬಡತನ, ಅಪ್ಪ ಅಮ್ಮರ ಬಿನ್ನಾಭಿಪ್ರಾಯ, ಬ್ರಾಹ್ಮಣರು ಇವರನ್ನ ಬ್ರಾಹ್ಮಣೆತರಾಗಿ ನಡೆಸಿಕೊಂಡಿದ್ದು, ತಾಯಿ ಬೆಂಡೋಲೆಯನ್ನ ಅಡವಿರಿಸಿ ಹಣ ಸಾಲ ನೀಡುವ ಮಾವಂದಿರ ಕಠೋರತನಗಳು, ಬದುಕಿಸುವ ಶಕ್ತಿ ವೈದ್ಯರು ತಮಗೇ ಇಲ್ಲ ಎಂದು ಒಪ್ಪಿಕೊಳ್ಳುವ ಎಲ್ಲಾ ವೈಚಾರಿಕ ತಕ೯ದ ಸ್ವ೦ತ ಅನುಭವದ ಈ ಪುಸ್ತಕ ಒಂದು ಅದ್ಬುತ ಅನುಭವ ನೀಡುತ್ತದೆ. 
  136 ಪುಟದ ಈ ಪುಸ್ತಕ ಓದಲು ಹೆಚ್ಚು ಸಮಯ ತೆಗೆದುಕೊಂಡು ಓದಿದೆ, ಕಣ್ಣಾಲಿಗಳು ನೀರಾಗಿ.
 (ಈಗ ಈ ಪುಸ್ತಕ ಪುನರ್ ಮುದ್ರಣವಾಗಿ ಓದುಗರಿಗೆ ಸಿಗುತ್ತಿದೆ,For ಇಲ್ಲದ ತೀರದಲ್ಲಿ Please Pay Rs150 to Canara bank current a/c no  1512201000539__ROOPA  PRAKASHANA----IFSC--CNRB0001512---KUVEMPU NAGARA BRANCH MYSURU & inform to me with address.thanks
 Or Goggle pay 93422 74331)

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ