Skip to main content

Blog number 1351. ಪ್ರತಿ ಚುನಾವಣೆ ಸಂದರ್ಭದಲ್ಲಿ ಆತ್ಮ ರಕ್ಷಣೆಗಾಗಿ - ಪಸಲು ರಕ್ಷಣೆಗಾಗಿ ಪಡೆದ ಲೈಸೆನ್ಸ್ ರಿವಾಲ್ವಾರ್ / ಬಂದೂಕು ಪೋಲಿಸ್ ಠಾಣೆಯಲ್ಲಿ ತಂದಿಡುವ ಅವೈಜ್ಞಾನಿಕ ಓಬಿರಾಯನ ಕಾಲದ ಪದ್ದತಿ ಬದಲಿಸಬಾರದೇಕೆ ?

#ರಾಜ್ಯ_ವಿಧಾನಸಭಾ_ಚುನಾವಣೆ_ಘೋಷಣೆ_ಆಗಿದೆ.

#ಆತ್ಮರಕ್ಷಣೆ_ಪಸಲುರಕ್ಷಣೆ_ರಿವಾಲ್ವಾರ್_ಬಂದೂಕುಗಳು_ಪೋಲಿಸ್_ಠಾಣೆಯಲ್ಲಿ_ಸರೆಂಡರ್_ಮಾಡಬೇಕು.

#ಚುನಾವಣೆ_ಬಂದಾಗ_ದರೋಡೆಕೊರರು_ಪಸಲು_ತಿನ್ನುವ_ಪ್ರಾಣಿಗಳು_ಸುಮ್ಮನಿರುತ್ತದ?

#ಈ_ಅನಾಗರೀಕ_ಅವೈಜ್ಞಾನಿಕ_ಪದ್ಧತಿ_ರಾಜ್ಯದಲ್ಲಿ_ಈ_ಚುನಾವಣೆಯಲ್ಲಿಯೂ_ಜಾರಿ_ಇದೆ

#ಕೇರಳಾ_ರಾಜ್ಯದ_ಉಚ್ಚ_ನ್ಯಾಯಾಲಯ_ಈ_ಪದ್ದತಿಗೆ_ತಡೆ_ಆಜ್ಞೆ_ನೀಡಿದೆ.

#ಕರ್ನಾಟಕ_ರಾಜ್ಯದಲ್ಲಿ_ಯಾರೋಬ್ಬರೂ_ಈ_ಬಗ್ಗೆ_ಉಚ್ಚ_ನ್ಯಾಯಾಲಯದಲ್ಲಿ_ಈ_ಪದ್ದತಿ_ರದ್ದತಿಗೆ_ರಿಟ್_ಹಾಕಿಲ್ಲ.

   ಆತ್ಮ ರಕ್ಷಣೆ ಮತ್ತು ಪಸಲು ರಕ್ಷಣೆಗಾಗಿ ರಿವಾಲ್ವಾರ್ ಅಥವ ಬಂದೂಕು ಲೈಸೆನ್ಸ್ ಪಡೆದವರಿಗೆ ಪ್ರತಿ ಚುನಾವಣೆಯ ಸಂದರ್ಭದಲ್ಲಿ ತಮ್ಮ ತಮ್ಮ ರಿವಾಲ್ವಾರ್ / ಬಂದೂಕುಗಳನ್ನು ಅವರ ವ್ಯಾಪ್ತಿಯ ಪೋಲಿಸ್ ಠಾಣೆಗೆ ತಂದು ಸರೆಂಡರ್ ಮಾಡಬೇಕೆಂಬ ಜ್ಞಾಪನಾ ಪತ್ರ ಪೋಲಿಸರು ನೀಡುತ್ತಾರೆ.
  ಅದರಂತೆ ಆ ವ್ಯಾಪ್ತಿಯ ಜನರು ಪೋಲಿಸರ ಆದೇಶ ಪಾಲಿಸುತ್ತಾರೆ ಆದರೆ ಈ ಪದ್ಧತಿ ಸರಿಯಾ? ದರೋಡೆಕೋರರು - ಕಳ್ಳರು ತಮ್ಮ ವೃತ್ತಿಯನ್ನು ಚುನಾವಣೆಯಲ್ಲಿ ಬಿಡುತ್ತಾರಾ? ಚುನಾವಣಾ ಸಂದರ್ಭದಲ್ಲಿ ಬಂದೂಕು ಪೋಲಿಸ್ ಠಾಣೆಯಲ್ಲಿ ಡಿಪೋಸಿಟ್ ಮಾಡಿರುತ್ತಾರೆಂಬ ಮಾಹಿತಿ ಅವರಿಗೆ ಹೆಚ್ಚಿನ ದೈರ್ಯ ನೀಡದೇ ಇರುತ್ತದಾ?.
   ಈ ಅವೈಜ್ಞಾನಿಕ ಪದ್ದತಿಯನ್ನು ಕೇರಳ ರಾಜ್ಯದ ಉಚ್ಚ ನ್ಯಾಯಾಲಯದ ಆದೇಶದಲ್ಲಿ ತಡೆ ಹಿಡಿದಿರುವುದರಿಂದ ಅಲ್ಲಿ ಈ ಪದ್ಧತಿ ಜಾರಿ ಇಲ್ಲ ಆದರೆ ಪಕ್ಕದ ನಮ್ಮ ಕರ್ನಾಟಕ ರಾಜ್ಯದಲ್ಲಿ ಜಾರಿ ಇದೆ.
   ನಮ್ಮ ಜಿಲ್ಲೆಯವರೆ ಆದ ಕರ್ನಾಟಕ ರಾಜ್ಯದ ಗೃಹ ಮಂತ್ರಿ #ಆರಗ_ಜ್ಞಾನೇಂದ್ರರಿಗೆ ಮನವಿ ಮಾಡಿದ್ದೆ ಆದರೆ ಈ ಬಗ್ಗೆ ಅವರು ಪೋಲಿಸ್ ಇಲಾಖೆಯಲ್ಲಿ ಯಾವುದೇ ಇಂತಹ ಆಚರಣೆಗೆ ಮಾರ್ಪಾಡು ಈವರೆಗೆ ಮಾಡಿಲ್ಲ.
   ಹಾಗಂತ ನಮ್ಮ ರಾಜ್ಯದ ಯಾರೊಬ್ಬರೂ ರಾಜ್ಯದ ಉಚ್ಚ ನ್ಯಾಯಾಲಯದಲ್ಲಿ ಇದಕ್ಕೆ ಈ ವರೆಗೆ ತಡೆ ಆಜ್ಞೆ ತಂದೂ ಇಲ್ಲ ಆದರೆ ಪಕ್ಕದ ಕೇರಳದಲ್ಲಿನ ಉಚ್ಚ ನ್ಯಾಯಾಲಯದಲ್ಲಿ ರಿಟ್ ಸಲ್ಲಿಸಿ ತಡೆ ಆಜ್ಞೆ ತಂದ ಮಾಹಿತಿ ಇವತ್ತು ಪುತ್ತೂರಿನ ಖ್ಯಾತ ಛಾಯಾಚಿತ್ರ ಗ್ರಾಹಕ #ಕಿರಣಮನ್ನಾಜೆ ತಮ್ಮ ಪೇಸ್ ಬುಕ್ ನಲ್ಲಿ ಈ ಅವೈಜ್ಞಾನಿಕ ಓಬಿರಾಯನ ಕಾಲದ ಪದ್ದತಿ ಬಗ್ಗೆ ಪೋಸ್ಟ್ ಲ್ಲಿ ಬರೆದಾಗ ಕೇರಳದ #ಪ್ರದೀಪರಾವ್ ಎನಾ೯ಕುಲಂ ಉಚ್ಚ ನ್ಯಾಯಾಲಯದಲ್ಲಿ ಕಾಸರಗೋಡು ಜಿಲ್ಲಾಧಿಕಾರಿಯನ್ನು ಎದರು ಪಾರ್ಟಿ ಮಾಡಿ ಸಲ್ಲಿಸಿದ ರಿಟ್ ನಲ್ಲಿ ಚುನಾವಣೆ ಸಂದರ್ಭದಲ್ಲಿ ಬಂದೂಕು ಸರೆಂಡರ್ ಮಾಡಲು ನೀಡುವ ನೋಟೀಸ್ ಗೆ ತಡೆ ಆಜ್ಞೆ ತಂದಿದ್ದಾರೆ.
  ಇಲ್ಲಿ ಕ್ಲಿಕ್ ಮಾಡಿ ಸದರಿ ಅದೇಶ ಓದಬಹುದು.
https://www.newindianexpress.com/states/kerala/2021/feb/21/hc-cops-cant-direct-people-to-surrender-licensed-arms-2266809.html

https://indiankanoon.org/doc/127267817/

   ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ಚುನಾವಣೆ ಘೋಷಣೆ ಆಗಿದೆ ಇಲ್ಲಿಯೂ ಈಗ ಬಂದೂಕು ಸರೆಂಡರ್ ಮಾಡಲು ಜಿಲ್ಲಾಧಿಕಾರಿಗಳು ಆಯಾ ಜಿಲ್ಲೆಯಲ್ಲಿ ಪೋಲಿಸರ ಮುಖಾಂತರ ಆದೇಶ ಜಾರಿ ಮಾಡುತ್ತಾರೆ.
  ರಾಜ್ಯದ ಜನಪರ ವಕೀಲರುಗಳು ಇದನ್ನು ಜನರ ಪರವಾಗಿ ಜಿಲ್ಲಾಧಿಕಾರಿಗಳಿಗೆ ಆಕ್ಷೇಪಣೆ ಸಲ್ಲಿಸಿ ಕೇರಳ ರಾಜ್ಯದ ಉಚ್ಚ ನ್ಯಾಯಾಲಯದ ಆದೇಶ ಹಾಜರು ಪಡಿಸಿ ನಮ್ಮ ರಾಜ್ಯದಲ್ಲಿ ಈ ಬಾರಿಯಿಂದ ಈ ಅವೈಜ್ಞಾನಿಕ ಪದ್ಧತಿ ಮುಂದುವರಿಸದಂತೆ ಮನವಿ ನೀಡಬಾರದೇಕೆ?
   ಅಥವ ಪ್ರತ್ಯೇಕ ರಿಟ್ ಉಚ್ಛ ನ್ಯಾಯಾಲಯದಲ್ಲಿ ಸಲ್ಲಿಸಿ ತಕ್ಷಣ ತಡೆ ಆಜ್ಞೆ ತರಲಿ ಅಂತ ವಿನಂತಿಸುತ್ತೇನೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...