Skip to main content

Blog number 1339.ಶ್ರೀಧರ ಹುಲ್ತಿಕೊಪ್ಪ ಮುಖ್ಯಮಂತ್ರಿ ಬಂಗಾರಪ್ಪರ ಕಾಲದಲ್ಲಿ ಕಂಪ್ಯೂಟರ್ ನಂತಹ ನೆನಪಿನ ಶಕ್ತಿಯ ಅತ್ಯಂತ ಬುದ್ದಿವಂತ ಪಿ.ಎ. ಆಗಿದ್ದವರು.

#ಶ್ರೀಧರ್_ಹುಲ್ತಿಕೊಪ್ಪ

#ಅಧ್ಯಕ್ಷರು

#ಶಿವಮೊಗ_ಜಿಲ್ಲಾ_ಆರ್ಯ_ಈಡಿಗರ_ಸಂಘ

#ಬ೦ಗಾರಪ್ಪನವರು_ಮುಖ್ಯಮಂತ್ರಿ_ಆಗಿದ್ದಾಗ_ಅವರ_PA_ಆಗಿದ್ದವರು.

#ಅಪಾರ_ನೆನಪಿನ_ಶಕ್ತಿಯ_ನಡೆದಾಡುವ_ಕಂಪ್ಯೂಟರ್

#ಪುತ್ರಿಯ_ವಿವಾಹ_ಆಮಂತ್ರಣ_ನೀಡಲು_ಇವತ್ತು_ಬಂದಿದ್ದರು.

   ಬಂಗಾರಪ್ಪನವರು ಮುಖ್ಯಮಂತ್ರಿ ಆಗಿದ್ದಾಗ ಅವರ ಆಪ್ತ ಬಳಗದಲ್ಲಿ ಶ್ರೀಧರ್ ಅತ್ಯಂತ ಕಿರಿಯ ವಯಸ್ಸಿನ ಯುವಕ ಆದರೆ ಮುಖ್ಯಮಂತ್ರಿ ಬಂಗಾರಪ್ಪನವರು ತಮ್ಮ ಆಡಳಿತದಲ್ಲಿ, ರಾಜ್ಯದಾದ್ಯಂತ ಪಕ್ಷ ಸಂಘಟನೆಯಲ್ಲಿ, ಕ್ಯಾಬಿನೆಟ್ ಮಂತ್ರಿಗಳ ಕೋಆರ್ಡಿನೇಟ್ ಮಾಡುವಲ್ಲಿ, ತಮ್ಮ ಸ್ವಕ್ಷೇತ್ರ ಸೊರಬದ ನಿತ್ಯ ಆಗು ಹೋಗುಗಳಲ್ಲಿ ಮತ್ತು ಅವರ ದೈನಂದಿನ ಪ್ರವಾಸ - ಸಭೆ - ಸಮಾರಂಭಗಳಿಗೆ ಯುವಕ ಶ್ರೀಧರ್ ಗೆ ಹೆಚ್ಚು ಅವಲಂಬಿಸಿದ್ದರು.
  ಈಗೆಲ್ಲಾ ಕಂಪ್ಯೂಟರ್ ಗಳಿದೆ, ಮೊಬೈಲ್ ಪೋನ್ ಗಳು ಬಂದಿದೆ ಆದರೆ 1990 ರ ದಶಕದಲ್ಲಿ ಅಧ್ಯಾವುದು ಇಲ್ಲದ ಕಾಲ ಅದರಲ್ಲೂ ಬಂಗಾರಪ್ಪನವರದ್ದು ಆಡಳಿತ- ರಾಜಕಾರಣಗಳಲ್ಲಿ ವಿಪರೀತ ವೇಗದ ಮಲ್ಟಿಟಾಸ್ಕ್ ಇರುವಂತ ಮುಖ್ಯಮಂತ್ರಿ ಆದ್ದರಿಂದ ಅವರ ವೇಗಕ್ಕೆ ಹೊಂದುವ ಸಾಮರ್ಥ್ಯ ಇರುವಂತವರು ವಿರಳಾತಿವಿರಳ ಅದರಲ್ಲಿ ಶ್ರೀಧರ್ ಹುಲ್ತಿಕೊಪ್ಪ ಅವರಲ್ಲಿ ಅಂತಹ ಸಾಮರ್ಥ್ಯ ಇತ್ತು.
    ದೊಡ್ಡ ದೊಡ್ಡ ಹಿರಿಯ ಐಎಸ್ - ಐಪಿಸ್ ಅಧಿಕಾರಿಗಳ, ಮಂತ್ರಿ ಮಹೋದಯರುಗಳ, ವಿರೋದ ಪಕ್ಷದ ಮುಖಂಡರುಗಳ, ಕಾಂಗ್ರೇಸ್ ಪಕ್ಷದ ದುರೀಣರುಗಳ ಪೋನ್ ನಂಬರ್ ಗಳನ್ನು ಮುಖ್ಯಮಂತ್ರಿಗಳು ಕೇಳಿದ ತಕ್ಷಣ ಸಂಪರ್ಕಿಸಬೇಕೆಂದರೆ ಶ್ರೀಧರ್ ನೆನಪಿನ ಶಕ್ತಿ ಐಕ್ಯೂ ಸಾಮರ್ಥ್ಯ ಎಷ್ಟು ಎಂದು ಅಂದಾಜಿಸಬಹುದಾಗಿದೆ.
   ಆಗ ಬಂಗಾರಪ್ಪರ ಮಕ್ಕಳಾದ ಕುಮಾರ್ ಬಂಗಾರಪ್ಪ, ಮದು ಬಂಗಾರಪ್ಪ ವಿದ್ಯಾಬ್ಯಾಸ ಮಾಡುತ್ತಿದ್ದ ಕಾಲ.
  ನಂತರ ಶ್ರೀಧರ್ ಶಿವಮೊಗ್ಗದಲ್ಲಿ ಸಂದೇಶ್ ಮೋಟಾರ್ ಸೈಕಲ್ ಶೋರೂಂ ತೆರೆದರು, ಸೊರಬದ ರಾಜಕಾರಣದಲ್ಲಿ ಬಿಜೆಪಿ ಪಕ್ಷ ಸೇರಿ ಹರತಾಳು ಹಾಲಪ್ಪರ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದರು ಈಗ ಪುನಃ ಕಾಂಗ್ರೇಸ್ ಪಕ್ಷದಲ್ಲಿ ಕ್ರಿಯಾಶೀಲರಾಗಿದ್ದಾರೆ.
   ಶಿವಮೊಗ್ಗದಲ್ಲಿ ಜಿಲ್ಲಾ ಆರ್ಯ ಈಡಿಗ ಸಂಘದ ಸುಸಜ್ಜಿತ ಈಡಿಗರ ಭವನ ಮತ್ತು ಈಡಿಗರ ವಿದ್ಯಾರ್ಥಿನಿಲಯಗಳ ನಿರ್ಮಾಣದಲ್ಲಿ ಶ್ರೀಧರರ ಪಾತ್ರ ದೊಡ್ಡದಿದೆ.
  ಶಿವಮೊಗ್ಗ ಜಿಲ್ಲಾ ರಾಜಕಾರಣದಲ್ಲಿ ಇವರ ಬುದ್ದಿವಂತಿಕೆ ಸರಿಯಾಗಿ ಯಾರೂ ಬಳಸಿಕೊಳ್ಳಲಿಲ್ಲ ಮತ್ತು ಇವರಿಗೆ ಸಿಗಬೇಕಾದ ರಾಜಕೀಯ ಸ್ಥಾನಮಾನಗಳನ್ನು ಉದ್ದೇಶ ಪೂರ್ವಕವಾಗಿ ತಪ್ಪಿಸಲಾಯಿತು.
  ತಮ್ಮ ಮೊದಲ ಪುತ್ರಿಯ ವಿವಾಹ ಆಹ್ವಾನ ನೀಡಲು ಶ್ರೀಧರ್ ಹುಲ್ತಿಕೊಪ್ಪ ಬಂದಿದ್ದರು ಈ ಸಂದರ್ಭದಲ್ಲಿ ಬಂಗಾರಪ್ಪನವರ ಮುಖ್ಯಮಂತ್ರಿ ಅವದಿಯ ಅನೇಕ ಸ್ವಾರಸ್ಯ ಘಟನೆಗಳನ್ನು ಅವರು ನೆನಪಿಸಿಕೊಂಡರು.
   ನೂತನ ವದು ವರರಿಗೆ ಶುಭ ಹಾರೈಸುತ್ತಾ ಶ್ರೀಧರ್ ಅವರ ಮುಂದಿನ ರಾಜಕಾರಣದ ಜೀವನದಲ್ಲಿ ಸೂಕ್ತ ಸ್ಥಾನ ಮಾನ ದೇವರು ನೀಡಲಿ ಎಂದು ಹಾರೈಸಿ ಬಿಳ್ಕೊಟ್ಟೆ.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ