Skip to main content

Blog number 1362. ಶಿವಮೊಗ್ಗದ ವಿದ್ಯಾವಂತ ದಂಪತಿಗಳ ಆಹಾರ ಉದ್ಯಮದ ಸಾಹಸ ಸೋದರಿ ಪುಡ್ ಪ್ರಾಡಕ್ಟ್ಸ್ ಶುಚಿ-ರುಚಿ - ಮತ್ತು ಅತ್ಯುತ್ತಮ ಪ್ಯಾಕಿಂಗ್ ಗ್ರಾಹಕ ಪ್ರೇಮಿ ಉತ್ಪನ್ನಗಳು.



https://youtu.be/LlXSdDsJVeA

#ಇವತ್ತಿನ_ನನ್ನ_ವಿಶೇಷ_ಅತಿಥಿಗಳು

#ಡಾಕ್ಟರ್_ರೋಹಿಣಿ_ಮತ್ತು_ಶ್ರೀನಾಥ್_ದ೦ಪತಿಗಳು

#ಶ್ರೀಮತಿರೋಹಿಣಿ_ಶಿವಮೊಗ್ಗ_ನ್ಯಾಷನಲ್_ಕಾನೂನು_ಕಾಲೇಜ್_ಪ್ರೋಪೆಸರ್_ಆಗಿದ್ದವರು

#ಶ್ರೀನಾಥ್_ಕಾರ್ಪೋರೇಷನ್_ಬ್ಯಾಂಕ್_ವ್ಯವಸ್ಥಾಪಕರಾಗಿದ್ದವರು.

#ಇಬ್ಬರೂ_ಸ್ವಯ೦_ನಿವೃತ್ತಿ_ಪಡೆದು_ಹೊಸ_ಉದ್ಯಮ_ಪ್ರಾರಂಬಿಸಿದ್ದಾರೆ

#ಸೋದರಿ_ಪುಡ್_ಪ್ರಾಡಕ್ಟ್ಸ_ಬ್ರಾಂಡಿನ_ಉದ್ಯಮ

#ಶುಚಿ_ರುಚಿ_ಮತ್ತು_ಉತ್ಕೃಷ್ಟ_ಪ್ಯಾಕಿಂಗ್.

   ಶ್ರೀಮತಿ ರೋಹಿಣಿ ಶ್ರೀನಾಥ್, ಡಾಕ್ಟರ್ ರೋಹಿಣಿ ಶಿವಮೊಗ್ಗದ ನ್ಯಾಷನಲ್ ಕಾನೂನು ಕಾಲೇಜಿನ ಪ್ರೋಪೆಸರ್ ಆಗಿದ್ದವರು ಈಗ ಸ್ವಯಂ ನಿವೃತ್ತಿ ಹೊ೦ದಿದ್ದಾರೆ.
  ಇವರ ನೂರಾರು ವಿದ್ಯಾರ್ಥಿಗಳು ರಾಜ್ಯ - ದೇಶ-ವಿದೇಶಗಳಲ್ಲಿದ್ದಾರೆ ಇವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಬಸವಾನಿಯ ಸ್ವಾತಂತ್ಯ ಹೋರಾಟಗಾರರು, ತೀರ್ಥಹಳ್ಳಿಯ ಆ ಕಾಲದ ಬಟ್ಟೆ ವ್ಯಾಪಾರಿ ಬಸವಾನಿ ಮಂಜಪ್ಪರ ಮೊಮ್ಮಗಳು.
  ಇವರ ಪತಿ ಶ್ರೀನಾಥರು ಕಾರ್ಪೋರೇಷನ್ ಬ್ಯಾಂಕ್ ವ್ಯವಸ್ಥಾಪಕರಾಗಿ ಸಾಗರದ ಎಪಿಎಂಸಿ ಬ್ರಾ೦ಚ್ ನಲ್ಲಿದ್ದವರು ದೆಹಲಿ - ಗೋವಾದಲ್ಲಿ ಕೆಲಸ ನಿರ್ವಹಿಸಿದವರು.
   ಇಬ್ಬರೂ ತಮ್ಮ ತಮ್ಮ ಉದ್ಯೋಗದಲ್ಲಿ ಸ್ವಯಂ ನಿವೃತ್ತಿ ಪಡೆದು ಈಗ ಸ್ವ೦ತ ಉದ್ಯಮ ಪ್ರಾರಂಬಿಸಿದ್ದಾರೆ.
  ಇವರ ಉದ್ಯಮದ ಬ್ರಾಂಡ್ ನೇಮ್ #ಸೋದರಿ_ಪುಡ್_ಪ್ರಾಡಕ್ಟ್ ಇದು ಅತ್ಯುತ್ತಮ ಆಕರ್ಷಕ ಪ್ಯಾಕಿಂಗ್ ನಲ್ಲಿ ಶುಚಿ-ರುಚಿಯ ಆಹಾರಗಳು ಆಗಿದೆ.
  ವಿಶೇಷ ಸಂದರ್ಭಗಳಿಗಾಗಿ ಆಕರ್ಷಕ ಸಿಹಿ ತಿಂಡಿಗಳ ಗಿಫ್ಟ್ ಪ್ಯಾಕ್ ಕೂಡ ಇವರಲ್ಲಿ ಲಭ್ಯವಿದೆ ಮುಂದಿನ ದಿನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೊಸ ಪ್ರಾಡಕ್ಟ್ ಗಳು ಇವರ ಉತ್ಪನ್ನಗಳ ಪಟ್ಟಿಯಲ್ಲಿ ಸೇರಲಿದೆ.
  ಇನ್ನೂ ಆಕರ್ಷಕ ಮತ್ತು ಎಕೋ ಪ್ರೆಂಡ್ಲಿ ಪ್ಯಾಕ್ ಗಳಲ್ಲಿ ಇವರ ಉತ್ಪನ್ನಗಳು ಗ್ರಾಹಕರಿಗೆ ತಲುಪಿಸಲು ಈ ದಂಪತಿಗಳು ಮುಂದಾಗಿದ್ದಾರೆ.
   ನನ್ನ ಕನಸಿನ #Explore_the_western_ghats ಪ್ರಾಜೆಕ್ಟ್ಸ್ ಪೈಲಟ್ ಪ್ರಾಜೆಕ್ಟ್ ಮುಂದಿನ ತಿಂಗಳು ಲಾ೦ಚ್ ಆಗಲಿದೆ ಅದರ ಪ್ರತಿ ಔಟ್ ಲೆಟ್ ನಲ್ಲಿ #Golden_Basket ಎಂಬ ನನ್ನದೇ ಬ್ರಾಂಡ್ ನ ಡಿಸ್ಪ್ಲೇ ಶೋಕೇಸ್ ನಲ್ಲಿ ಇವರ ಪ್ರಾಡಕ್ಟ್ ಗಳಿಗೆ ಜಾಗ ನಿಗದಿ ಆಗಿದೆ ಈ ಬಗ್ಗೆ ಅಂತಿಮ ಮಾತುಕತೆಗೆ ಬಂದಾಗ ಈ ಸಂದಶ೯ನದ ವಿಡಿಯೋ ಇಲ್ಲಿದೆ.
   ಶಿವಮೊಗ್ಗದಲ್ಲಿ ಇವರ ಉತ್ಪಾದನಾ ಮತ್ತು ಮಾರಾಟ ಕೇಂದ್ರದ ಸಂಪರ್ಕ ಸಂಖ್ಯೆ 9980346751

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...