Skip to main content

Blog number 1405. ಭಾರತೀಯ ರೈತ ನಾಯಕರು ಭಾಗ-3. ಮೊದಲ ಚುನಾವಣೆಯಲ್ಲಿ ಶಾಂತವೇರಿ ಗೋಪಾಲಗೌಡರು .

#ಕಾಗೋಡು_ಹೋರಾಟದ_ರೂವಾರಿ_ಹೆಚ್_ಗಣಪತಿಯಪ್ಪ
#ಭಾರತೀಯ_ರೈತ_ನಾಯಕರು_3

#ಸ್ವಾತಂತ್ರ_ಭಾರತದ_ಮೊದಲ_ಚುನಾವಣೆ_1952
#ಸಾಗರ_ಹೊಸನಗರ_ತೀಥ೯ಹಳ್ಳಿ_ತಾಲ್ಲೂಕ್_ಸೇರಿ_ಒಂದು_ವಿಧಾನಸಭಾ_ಕ್ಷೇತ್ರ.

  1952 ರ ಪ್ರಥಮ ಚುನಾವಣೆ ಅಧಿಕೃತ ಘೋಷಣೆಯಿಂದ ಸೋಷಿಲಿಸ್ಟ್ ಪಕ್ಷ ಚುನಾವಣೆಗೆ ಹೆಚ್ಚಿನ ಗಮನ ಹರಿಸಿತು, ರಾಜ್ಯ ಸಮಾಜವಾದಿ ಪಕ್ಷದ ಕಾಯ೯ದಶಿ೯ ಜಿ.ಸದಾಶಿವ ರಾಯರು ಜೈಲಿನಲ್ಲಿದ್ದ ಕಾಗೋಡು ಹೋರಾಟದ ರೂವಾರಿ ಗಣಪತಿಯಪ್ಪರನ್ನು ಬೇಟಿ ಮಾಡಿ ಚುನಾವಣೆ ಬಂದಿರುವುದರಿಂದ ಇನ್ನು ಜೈಲಲ್ಲಿ ಇರುವ ಅಗತ್ಯ ಇಲ್ಲ, ಮುಚ್ಚಳಿಕೆ ಬರೆದು ಕೊಟ್ಟು ಹೊರ ಬರಬೇಕೆಂದು ವಿನಂತಿಸುತ್ತಾರೆ, ಅವರ ಮನವಿ ಮೇರೆಗೆ ಎಲ್ಲಾ ಸತ್ಯಾಗ್ರಹಿಗಳು ಮುಚ್ಚಳಿಕೆ ಬರೆದು ಕೊಟ್ಟು ಜೈಲಿಂದ ಹೊರಬರುತ್ತಾರೆ.
 ಚುನಾವಣೆಯಲ್ಲಿ ಶಾಂತವೇರಿ ಗೋಪಾಲಗೌಡರು ಸಮಾಜವಾದಿ ಪಾಟಿ೯ ಅಭ್ಯಥಿ೯ ಆಗಿ 13722 ಮತ ಪಡೆದು ತಮ್ಮ ಎದುರಾಳಿ ಕಾಂಗ್ರೇಸ್ ಪಕ್ಷದ ಅಭ್ಯಥಿ೯ ಆನಂದಪುರದ A.R. ಬದರಿನಾರಾಯಣರನ್ನು ಸೋಲಿಸುತ್ತಾರೆ, ಬದರಿನಾರಾಯಣರು ಈ ಚುನಾವಣೆಯಲ್ಲಿ ಪಡೆದ ಮತ 11485 .
   ಈ ಚುನಾವಣೆಯಲ್ಲಿ ರೈತ ಸಂಘ ಹಾಗೂ ರೈತ ನೇತಾರ ಗಣಪತಿಯಪ್ಪರ ಸಹಕಾರ ಅಪಾರ.
  ಗೋಪಾಲಗೌಡರು ಜನರ ಅಪಾರ ಪ್ರೀತಿ - ಗೌರವ - ಅಭಿಮಾನವನ್ನು, ನಿಲ್ಲದ ಕಾಗೋಡು ಸತ್ಯಾಗ್ರಹ ಬಗೆಹರಿಯದ ವಿವಾದವನ್ನು ಹೊತ್ತು, ವಿದಾನ ಸಭೆ ಪ್ರವೇಶಿಸಿದರು.
  ವಿದಾನಸಭೆ ಅವರ ಚಿಂತನೆ, ಘಷ೯ಣೆ ಹೋರಾಟದ ರಣರಂಗ ಎನಿಸಿತು. ಅಲ್ಲಿ ಅಭಿಮನ್ಯುವಾಗಿ ತನ್ನ ಶಕ್ತಿ - ಸಾಮಾಥ೯ಯದ ಪ್ರದರ್ಶನ ಮಾಡಿದರು.
  ಸಾಗರ ತಾಲ್ಲೂಕಿನ, ಹೊಸನಗರ ತಾಲ್ಲೂಕಿನ ಮತ್ತು ತೀಥ೯ಗಳ್ಳಿ ತಾಲ್ಲೂಕಿನ ಮೊದಲ ವಿಧಾನಸಭಾ ಶಾಸಕರೆಂಬ ದಾಖಲೆ ಶಾಂತವೇರಿ ಗೋಪಾಲಗೌಡರದ್ದಾಯಿತು.
  ಸ್ವಾತಂತ್ರ ಭಾರತದ ಪ್ರಥಮ ಚುನಾವಣೆಯಲ್ಲಿ ತಮ್ಮ ಭೂ ಹೋರಾಟಕ್ಕೆ ಬೆಂಬಲಿಸಿದ ಸಮಾಜವಾದಿ ಪಾಟಿ೯ಯ ಶಾಂತವೇರಿ ಗೋಪಾಲಗೌಡರನ್ನು ಅವರು ಹೊರಗಿನವರು ತಮ್ಮ ಜಾತಿಯವರಲ್ಲ ಎಂಬೆಲ್ಲ ನಕರಾತ್ಮಕ ಅಭಿಪ್ರಾಯಗಳನ್ನು ಗೌಣವಾಗಿಸಿ ಗೆಲ್ಲಿಸಿದ ಕೀರ್ತಿ ಕಾಗೋಡು ಹೋರಾಟದ ರೂವಾರಿ ಗಣಪತಿಯಪ್ಪರದ್ದಾಯಿತು.
  (ಮುಂದಿನ ಲೇಖನ 1957 ರಲ್ಲಿ ಶಾಂತವೇರಿ ಗೋಪಾಲಗೌಡರನ್ನು ಸೋಲಿಸಿದ ಎ.ಆರ್. ಬದರಿನಾರಾಯಣ್)

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...