Skip to main content

Blog number 1416. ಬಾಳೆ ನಾರಿನ ಸೀರೆ ಉಡುಗೊರೆಯಾಗಿ ಬಂದಿದೆ, organic -Biodegradable, ಹೆಚ್ಚು ಗಾಳಿಯಾಡುವ, UV ಕಿರಣಗಳಿಂದ ತ್ವಚೆ ಸಂರಕ್ಷಿಸುವ ಬಾಳೆ-ಬಿದಿರು-ಕತ್ತಾಳೆ - ಅನಾನಸ್ - ಸೆಣಬಿನ ನಾರಿನ ಲೆನಿನ್ ಬಟ್ಟೆಗಳಿಗೆ ಈಗ ಬೇಡಿಕೆ ಬಂದಿದೆ.


https://youtube.com/shorts/tGfaWP2OKoA?feature=share

#ನಾರಿನಿಂದ_ಬಟ್ಟೆ_ತಯಾರಿಕೆಗೆ_ಕ್ರಿಸ್ತಪೂರ್ವದ_ಇತಿಹಾಸ_ಇದೆ

#ಪುರಾಣದಲ್ಲಿ_ನಾರಿನ_ಮಡಿಯ_ಉಲ್ಲೇಖವಿದೆ

#ಹತ್ತಿ_ರೇಷ್ಮೆ_ಕೃತಕ_ನೂಲುಗಳಿಂದ_ನೈಸರ್ಗಿಕ_ನಾರಿನ_ಉಡುಪು_ಕಡಿಮೆ_ಆಗಿತ್ತು

#ಈಗ_ಮಹಿಳೆಯರು_ಹೆಚ್ಚಾಗಿ_ನಾರಿನ_ಸೀರೆಗೆ_ಆಕರ್ಷಿತರಾಗುತ್ತಿದ್ದಾರೆ.

#ಬಾಳೆ_ಬಿದಿರು_ಕತ್ತಾಳೆ_ಅನಾನಸ್_ಸೆಣಬಿನ_ಸೀರೆಗಳು_ಮಾರುಕಟ್ಟೆಯಲ್ಲಿದೆ.
  
   ಹತ್ತಿ ಮತ್ತು ರೇಷ್ಮೆ ವಸ್ತ್ರಗಳ ಜಾಗದಲ್ಲಿ ಜವಳಿ ಉದ್ಯಮವನ್ನು ಸ೦ಪೂರ್ಣವಾಗಿ ಅಕ್ರಮಿಸಿರುವ ಕೃತಕವಾದ ಪೆಟ್ರೋಲಿಯಂ ಪ್ರಾಡಕ್ಟ್ ಗಳಾದ ಪಾಲಿಯೆಸ್ಟರ್ ಬಟ್ಟೆಗಳು ಬೆಲೆಯಲ್ಲಿ ಮತ್ತು ವಿನ್ಯಾಸದಲ್ಲಿ ಅದನ್ನು ಸರಿಗಟ್ಟಲು ಸಾಧ್ಯವಿಲ್ಲ.
   ಆದರೆ ಬಳಸುವ ಜನರ ಚರ್ಮದ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಲ್ಲ ಎಂಬ ಮಾತು ಕೇಳಿಬರುತ್ತಿದೆ ಆದ್ದರಿಂದ ಪುನಃ ಹತ್ತಿ, ರೇಷ್ಮೆ ವಸ್ತ್ರಗಳ ಬೇಡಿಕೆ ಹೆಚ್ಚುತ್ತಿದೆ.
   ಇದರ ಜೊತೆಯಲ್ಲಿ ಪುರಾತನ ಕಾಲದಿಂದಲೂ ಬಳಕೆಯಲ್ಲಿದ್ದ ನೈಸರ್ಗಿಕ ನಾರಿನ ವಸ್ತ್ರಗಳಿಗೆ ಆದುನಿಕ ತಂತ್ರಜ್ಞಾನದ ಲೇಪನದ ಮೂಲಕ ಮಾರುಕಟ್ಟೆಯಲ್ಲಿ ಮತ್ತೊಂದು ಹೊಸ ಹವಾ ಸೃಷ್ಟಿ ಆಗಿದೆ.
  ಈಜಿಪ್ಟ್ ನ ಮಮ್ಮಿಗಳಿಗೆ ಸುತ್ತಿದ ಬಟ್ಟೆಗಳು ನಾರಿನಿಂದ ಸಿದ್ಧಪಡಿಸಿದ ಲೆನಿನ್ ಬಟ್ಟೆಗಳು ಅಂದರೆ ಅರ್ಥವಾದೀತು ನಾರಿನ ಬಟ್ಟಿಗಳ ಬಳಕೆಯ ಇತಿಹಾಸ.
  ನಾರಿನ ಬಟ್ಟೆಗಳು 0rganic ಮತ್ತು biodegradable ಆದ್ದರಿಂದ ಪರಿಸರ ಸ್ನೇಹಿ ಎಂಬ ಕಾರಣದಿಂದ ಆಧುನಿಕ ಜಗತ್ತಿನಲ್ಲಿ ಬೇಡಿಕೆ ಹೆಚ್ಚಾಗಿದೆ.
   ನಾರಿನ ಪ್ಯಾಬ್ರಿಕ್ ಹೆಚ್ಚು ಗಾಳಿಯಾಡುತ್ತದೆ, UV ಕಿರಣಗಳಿಂದ ರಕ್ಷಿಸುತ್ತದೆ ಮತ್ತು ಚರ್ಮದ ಆರೋಗ್ಯ ಕಾಪಾಡುತ್ತದೆ.
  ಒಂದು ಬಾಳೆ ಮರದ ದಿಂಡಿನಿಂದ 150 ಗ್ರಾಮ್ ಬಾಳೆ ನಾರಿನ ಪೈಬರ್ ಸಿಗುತ್ತದೆ, ಒಂದು ಸೀರೆಗೆ 500 ಗ್ರಾಂ ಪೈಬರ್ ಬೇಕು, ಒಂದು ಬಾಳೆ ನಾರಿನ ಸೀರೆಗೆ ಕನಿಷ್ಟ 1800 ರೂಪಾಯಿ ಇದೆ.
   ನಮ್ಮ ಜಿಲ್ಲೆಯಲ್ಲಿ ಬಾಳೆ ಮತ್ತು ಅನಾನಸ್ ಯಥೇಚ್ಚವಾಗಿ ರೈತರು ಬೆಳೆಯುತ್ತಿದ್ದಾರೆ ಆದ್ದರಿಂದ ಬಾಳೆ ಅನಾನಸ್ ಗಳಿಂದ ನಾರು ತೆಗೆದು ಮಾರಾಟ ಮಾಡುವ ಮೌಲ್ಯವರ್ಧನೆ ಸಾಧ್ಯವಿದೆ ಆಸಕ್ತರು ಮುಂದೆ ಬರಬೇಕು.
   ಕಳೆದ ವಷ೯ ಕಾನಲೆ ಗುರುಪ್ರಸಾದ್ ಅವರ ಮನೆಯಲ್ಲಿ ಅನಾನಸ್ ನಿಂದ ನಾರು ತೆಗೆಯುತ್ತಿರುವ ಚಿತ್ರ ಲೇಖನ ಪೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದರು.
  ಬಾಳೆ, ಬಿದಿರು, ಕತ್ತಾಳೆ, ಅನಾನಸ್ ಮತ್ತು ಸೆಣಬಿನ ಬಟ್ಟೆಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ.
  ಇವತ್ತು ನನ್ನ ಮಗಳು ತಾಯಿಗೆ ಬಾಳೆ ನಾರಿನ ಸೀರೆ ಒಂದನ್ನು ಬೆಂಗಳೂರಿಂದ ಖರೀದಿಸಿ ತಂದಿದ್ದಾಳೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...