Skip to main content

Blog number 1426. ನಿವೃತ್ತ AEE ನಂದ್ಯಾಳಕೊಪ್ಪ ಬೊಮ್ಮಯ್ಯ ಪ್ರಸಿದ್ಧ ಭೂದಾನ ಚಳವಳಿಯ ಸರ್ದಾರ್ ಎಣ್ಣೆಕೊಪ್ಪದ ಮಲ್ಲಿಕಾರ್ಜುನಗೌಡರ ಮೊಮ್ಮಗಳ ಪತಿ 25 ವರ್ಷದ ನಂತರ ಇವತ್ತು ಬೇಟಿ

#ಇಪ್ಪತೈದು_ವರ್ಷದ_ನಂತರದ_ಬೇಟಿ

#ಹೊಸನಗರದ_ನಂದ್ಯಾಳಕೊಪ್ಪದ_ಬೊಮ್ಮಯ್ಯ

#ನಿವೃತ್ತ_ಅಸಿಸ್ಟೆಂಟ್_ಎಕ್ಸಿಕ್ಯುಟೀವ್_ಇಂಜಿನಿಯರ್

#ಶರಾವತಿ_ಮುಳುಗಡೆ_ಸಂತ್ರಸ್ಥರು.

#ಸರ್ದಾರ್_ಎಣ್ಣೆಕೊಪ್ಪದ_ಮಲ್ಲಿಕಾರ್ಜುನ_ಗೌಡರ_ಮೊಮ್ಮಗಳ_ವಿವಾಹ_ಆಗಿದ್ದಾರೆ.

   N. ಬೊಮ್ಮಯ್ಯ ಸಾಹೇಬರು 1995ರಲ್ಲಿ ನಾನು ಆನಂದಪುರಂ ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದಾಗ ಸಾಗರ ತಾಲ್ಲೂಕ್ ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗದ ಅಸಿಸ್ಟೆಂಟ್ ಎಕ್ಸಿಕ್ಯೂಟೀವ್ ಇಂಜಿನಿಯರ್ ಆಗಿದ್ದವರು.
   ಇವರು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಂದ್ಯಾಳಕೊಪ್ಪದ ಶರಾವತಿ ಸಂತ್ರಸ್ತರ ಕುಟುಂಬದವರು, ಇವರ ತಂದೆ ನಂದ್ಯಾಳಕೊಪ್ಪ ವೀರಪ್ಪ ಗೌಡರಿಗೆ ಆಗಿನ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರು ಹೊಸನಗರದಲ್ಲಿ ನಡೆದ ಸಮಾರಂಭದಲ್ಲಿ ಖಾದಿ ಗಾಂಧಿ ಟೋಪಿ ತೊಡಿಸಿದ್ದರು ಆಗ ವೆಂಕಟರಮಣ ಉಡುಪರು, ರಂಗನಾಥರು ಪುರ ಪ್ರಮುಖರು.
  ಹೊಸನಗರದಲ್ಲೇ ಪ್ರೌಡ ಶಿಕ್ಷಣ ಪಡೆದ ಬೊಮ್ಮಯ್ಯನವರು ಇಂಜಿನಿಯರಿಂಗ್ ಓದಿ ಸರ್ಕಾರಿ ಕೆಲಸಕ್ಕೆ ಸೇರಿ 1972 ರಲ್ಲಿ ನಾಡಿನ ಪ್ರಖ್ಯಾತ ಭೂಧಾನ ಚಳವಳಿಯ ನೇತಾರ ಆಚಾಯ೯ ವಿನೋಭಾ ಭಾವೆಯವರ ಶಿಷ್ಯರಾಗಿ ಇಡೀ ಮೈಸೂರು ರಾಜ್ಯದಲ್ಲಿ ಪಾದಯಾತ್ರೆ ನಡೆಸಿ ಭೂದಾನ ಚಳವಳಿ ಮುಂದುವರಿಸಿದ ಎಣ್ಣೆಕೊಪ್ಪದ ಸರ್ದಾರ್‌ ಮಲ್ಲಿಕಾರ್ಜುನಗೌಡರ ಪುತ್ರಿ ಶ್ರೀಮತಿ ಪಾರ್ವತಮ್ಮ ಮತ್ತು ಹೆಚ್.ಆರ್ ಚನ್ನಯ್ಯ ಸೊರಬ ಇವರ ಪುತ್ರಿ ಗೌರಮ್ಮರ ವಿವಾಹ ಆಗುತ್ತಾರೆ.
  ಇವತ್ತು ನನ್ನ ಕಛೇರಿಗೆ ಬಂದವರು ಸರ್ದಾರ್ ಮಲ್ಲಿಕಾರ್ಜುನಗೌಡರು ತಮ್ಮ ಸ್ವಂತ ಭೂಮಿ 890 ಎಕರೆ ಜಮೀನು ಭೂದಾನ ಮಾಡಿದ ಬಗ್ಗೆ, ಶಿವಮೊಗ್ಗದ NES ಸಂಸ್ಥೆಗೆ ಅವರ ಹೆಸರು ಬಹಿರಂಗ ಮಾಡದ೦ತೆ ಎಲ್ಲರಿಗಿಂತ ದೊಡ್ಡ ಪ್ರಮಾಣದ ಹಣ ದಾನವಾಗಿ ನೀಡಿದ್ದು, ಬೆಂಗಳೂರಿನ ಗಾಂದಿ ಭವನ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ ಬಗ್ಗೆ ಮತ್ತು ಅವರ ಜೊತೆ ಒಡನಾಡುವ ಅವಕಾಶ ದೊರೆತ ಬಗ್ಗೆ ಬೊಮ್ಮಯ್ಯ ನೆನಪಿಸಿಕೊಂಡರು.
   ಇಂತಹ ಕುಟುಂಬದ ಹಿನ್ನೆಲೆಯ ಬೊಮ್ಮಯ್ಯನವರು ಶುದ್ದ ಹಸ್ತರು, ಭ್ರಷ್ಟಾಚಾರದಿಂದ ಮಾರು ದೂರ ಇದ್ದವರು ಈಗಿನ ವ್ಯವಸ್ಥೆಯಲ್ಲಿ ಇಂತವರು ಇರಲೂ ಸಾಧ್ಯವೇ ಇಲ್ಲ.
   80 ರ ವೃದ್ದಾಪ್ಯದಲ್ಲೂ ಆರೋಗ್ಯವಾಗಿರುವ N. ಬೊಮ್ಮಯ್ಯರಿಗೆ ನಾನು ಬರೆದ ಪುಸ್ತಕಗಳು ನೆನಪಿನ ಕಾಣಿಕೆ ಆಗಿ ನೀಡಿದೆ ಆನಂದಪುರಂನಲ್ಲಿರುವ ಕೆಳದಿ ರಾಜ ವೆಂಕಟಪ್ಪ ನಾಯಕ ಮತ್ತು ರಂಗೋಲಿ ಕಲಾವಿದೆ ಚಂಪಕಾಳ ದುರಂತ ಪ್ರೇಮದ ಸ್ಮಾರಕ ಚಂಪಕ ಸರಸ್ಸುವಿಗೆ ನಾನು ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದಾಗ 43 ಸಾವಿರ ರೂಪಾಯಿ ಅನುದಾನದಲ್ಲಿ ರಸ್ತೆ - ಮೋರಿ - ಮತ್ತು ಕೊಳದ ಶಿಥಿಲಗೊಂಡ ಕಲ್ಲುಗಳ ದುರಸ್ತಿ ಮತ್ತು ಕೊಳದ ನೀರೊಳಗಿನ ಬಳ್ಳಿಯಂತ ಸಸ್ಯಗಳನ್ನು ತೆಗೆಸುವ ಕಾಮಗಾರಿ ಮಾಡುವಾಗ N. ಬೊಮ್ಮಯ್ಯ ಸಾಗರದ ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗದ AEE ಆದ್ದರಿಂದ ಅವರಿಗೆ ನಾನು ಬರೆದ ಕಾದಂಬರಿ ತಲುಪಿಸಲೇ ಬೇಕಿತ್ತು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...