Skip to main content

Blog number 1431. ಸಿಸಿ ಕ್ಯಾಮೆರಾಗಳ ಅತ್ಯುತ್ತಮ ನಿರ್ವಹಣೆ ಮಾಡುವ ಆನಂದಪುರಂನ ಕೈರಾ ಗ್ರಾಮದ ಸಜ್ಜನ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದ ಸಣ್ಣೀರಪ್ಪನವರ ಮೊಮ್ಮಗ ಮಣಿಕಂಠ

#ಆನಂದಪುರಂನಲ್ಲಿ_ಸಿಸಿ_ಕ್ಯಾಮೆರಾ_ಸೇವಾ_ಸಂಸ್ಥೆ_ಪ್ರಾರಂಬಿಸಿರುವ

#ಕೈರಾದ_ಮಣಿಕಂಠ_ಸಾಗರದ_SMP_ಡಿಪ್ಲೋಮ_ಪದವೀದರ

#ಇವರ_ಅಜ್ಜ_ಕೈರಾದ_ಸಣ್ಣೀರಪ್ಪ_ಆಚಾಪುರ_ಗ್ರಾಮಪಂಚಾಯತ್_ಅಧ್ಯಕ್ಷರಾಗಿದ್ದರು.

#ಕನಿಷ್ಟ_ಹತ್ತು_ಸಾವಿರ_ರೂಪಾಯಿ೦ದ_ನಿಮ್ಮ_ಮನೆಗೆ_ಅಂಗಡಿಗೆ_ಇವರು_ಸಿಸಿ_ಕ್ಯಾಮೆರಾ_ಅಳವಡಿಸಿ_ಕೊಡುತ್ತಾರೆ

#ನಮ್ಮ_ಹೊಂಬುಜಲಾಡ್ಜ್_ಮಲ್ಲಿಕಾವೆಜ್_ಕೃಷ್ಣಸರಸ_ಕನ್ವೆನ್ಷನ್_ಹಾಲ್_ಚಂಪಕಾಪ್ಯಾರಡೈಸ್_ವಿಕ್ಟೋರಿಯಾ_ಕಾಟೀಜ್
#ಸಿಸಿ_ಕ್ಯಾಮೆರಾ_ದುರಸ್ತಿ_ಮತ್ತು_ಸರ್ವಿಸ್_ಇವರ_MJ_Secure_Solutions_ಸಂಸ್ಥೆಗೆ_ನೀಡಿದ್ದೇನೆ.

https://youtu.be/Pv9OgxnjFRU

 ಸುಮಾರು ಹತ್ತು ವರ್ಷದ ಹಿಂದೆ ನಮ್ಮ ಸಂಸ್ಧೆಯ ಸಿಸಿ ಕ್ಯಾಮೆರಾ ಅಳವಡಿಸಿದ್ದೇನೆ, 16 ಕ್ಯಾಮೆರಾಗಳಿದೆ ಆದರೆ ಈ ಹಿಂದಿನ ಎಲ್ಲಾ ಸಿಸಿ ಕ್ಯಾಮೆರಾ ಸರ್ವಿಸ್ ಮಾಡುವ ಸಂಸ್ಥೆಗಳು ಸೇವೆಗಿಂತ ನಮ್ಮಿಂದ ಹಣ ಪೀಕುವ ಕೆಲಸ ಮಾತ್ರ ನಿರಂತರವಾಗಿ ಮಾಡಿದ್ದಾರೆ.
   ಕೆಲವು ಲಕ್ಷ ವಿನಿಯೋಗಿಸಿ ಸಿಸಿ ಕ್ಯಾಮೆರಾ ಅಳವಡಿಸಿದ ನಂತರ ಕನಿಷ್ಟ ಮೂರು ತಿಂಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿರಲಿಲ್ಲ, ಪದೇ ಪದೇ ರಿಪೇರಿಗೆ ಬರಲು ಅವರಿಗೆ ದಂಬಾಲು ಬೀಳುವುದು ಅವರ ದುಭಾರಿ ಶುಲ್ಕ, ಅವರು ಹಾಕುವ ಕಳಪೆ ಉಪಕಾರಣ ಅದಕ್ಕೆ ಬ್ರಾಂಡೆಡ್ ಕಂಪನಿಗಿಂತ ಹೆಚ್ಚಿನ ಬಿಲ್ ಗಳಿಂದ ಕಳೆದ ಹತ್ತು ವರ್ಷದಲ್ಲಿ 5 ಲಕ್ಷಕ್ಕೂ ಹೆಚ್ಚಿನ ಹಣ ಕಳೆದುಕೊಂಡಿದ್ದೆ ಆದ್ದರಿಂದ ಒಂದು ವರ್ಷದಿಂದ ನಮ್ಮ ಸ೦ಸ್ಥೆ ಸಿಸಿ ಕ್ಯಾಮೆರಾ ಸರಿ ಪಡಿಸಲು ಆಸಕ್ತಿ ವಹಿಸಿರಲಿಲ್ಲ.
   ಆಗಲೇ ನನ್ನ ಬೇಟಿ ಆದ ಈ ಹಸನ್ಮುಖಿ ಯುವಕ ಮಣಿಕಂಠ ತನ್ನ M J ಸೆಕ್ಯುರ್ ಸಲ್ಯೂಷನ್ ಎಂಬ ಸಂಸ್ಥೆ ಸಿಸಿ ಕ್ಯಾಮೆರಾ ಅಳವಡಿಸುವ ನಿರಂತರ ಸೇವೆ ಒದಗಿಸುವ ಕರಪತ್ರ ನೀಡಿ ಹೊರಟಾಗ ವಾಪಾಸ್ಸು ಕರೆದು ವಿಚಾರಿಸಿದಾಗ ತಿಳಿದಿದ್ದು ಇವರು ಆಚಾಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದ (1993-98) ನನ್ನ ಆತ್ಮೀಯ ಮಿತ್ರರಾದ ಸಜ್ಜನ ಸಣ್ಣೀರಪ್ಪನವರ ಮೊದಲ ಪುತ್ರ ಜನಾರ್ದನರ ಏಕೈಕ ಪುತ್ರ ಅಂತ.
  ಸಾಗರದ ಸಂಜಯ ಮೆಮೋರಿಯಲ್ ಪಾಲಿಟೆಕ್ನಿಕ್ ನಲ್ಲಿ ಡಿಪ್ಲೋಮ ವ್ಯಾಸಂಗ ಮಾಡಿ ಬೆಂಗಳೂರಲ್ಲಿ ಕಂಪ್ಯೂಟರ್ ಕಂಪನಿಗಳಲ್ಲಿ ಕೆಲಸ ಮಾಡಿ ಕೊರಾನಾ ಲಾಕ್ ಡೌನ್ ನಲ್ಲಿ ಊರು ಸೇರಿ ಇಲ್ಲಿ ಸ್ವಂತದ್ದಾದ ಇವರದ್ದೇ ಅಗರಬತ್ತಿ ಉತ್ಪಾದನೆ - ಮಾರಾಟದ ಜೊತೆಗೆ ಎಲೆಕ್ಟ್ರೀಷಿಯನ್ ವೃತ್ತಿ ಜೊತೆಗೆ  ಸಿಸಿ ಕ್ಯಾಮೆರಾ ಅಳವಡಿಸುವ ಮತ್ತು ಸರ್ವಿಸ್ ಮಾಡುವುದು ತಿಳಿದು ನಮ್ಮ ಸಂಸ್ಥೆಯ ಎಲ್ಲಾ 16 ಸಿಸಿ ಕ್ಯಾಮೆರಾ ಸರಿಪಡಿಸುವ ಕೆಲಸ ಇವರಿಗೆ ವಹಿಸಿದೆ.
   3-4 ದಿನ ಸುಮ್ಮನೆ ಇವರ ಕೆಲಸದ ವೈಕರಿ ಗಮನಿಸುತ್ತಿದ್ದೆ ಇವತ್ತು ಸಂಜೆಗೆ ಸಂಪೂರ್ಣವಾಗಿ ಸಿಸಿ ಕ್ಯಾಮೆರಾಗಳ ಸವಿ೯ಸ್ ಮಾಡಿ ಎಲ್ಲಾ 16 ಕ್ಯಾಮೆರಾಗಳನ್ನು ಚಾಲನೆ ಮಾಡಿದ್ದಾರೆ.
   ಇವರ ಕೆಲಸ ಹಿಂದಿನ ಹತ್ತು ವರ್ಷದಲ್ಲಿ ನಿರ್ವಹಿಸಿದ ಎಲ್ಲರಿಗಿಂತ The Best ಅಂತ ದೃಡೀಕರಿಸುತ್ತೇನೆ.
  ಸಿಸಿ ಕ್ಯಾಮೆರಾ ಅಳವಡಿಸಿಕೊಳ್ಳುವವರು ಅಥವ ಅಳವಡಿಸಿದ ಸಿಸಿ ಕ್ಯಾಮೆರಾ ದುರಸ್ತಿ ಮಾಡಿಸಿಕೊಳ್ಳಬೇಕಾದವರು ಇವರನ್ನು ಸಂಪರ್ಕಿಸಬಹುದಾಗಿದೆ ಇವರ ಸಂಪರ್ಕ ಸಂಖ್ಯೆ 808839 3140.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ