Skip to main content

Blog number 1457. ಕನ್ನಡದ ಮೊದಲ ಐಎಎಸ್ ಚಿತ್ರ ನಟ ಕೆ.ಶಿವರಾಂ ನನ್ನ ಅತಿಥಿ (24 ಏಪ್ರಿಲ್ 2019 )

#ಪ್ರಸಕ್ತ ರಾಜಕಾರಣದ ಒಳಗುಟ್ಟು#
ಲೋಕ ಸಭಾ ಚುನಾವಣಾ ಅಂಕಣ
ಭಾಗ-14.
(ಕೆ.ಅರುಣ್ ಪ್ರಸಾದ್)
 
 ಚಾಮರಾಜ ನಗರ ಲೋಕಸಭಾ ಕ್ಷೇತ್ರದಿಂದ ಶ್ರೀನಿವಾಸ್ ಪ್ರಸಾದ್ ಸ್ಪದಿ೯ಸಬಾರದಿತ್ತು.

 
 ಶ್ರೀನಿವಾಸ್ ಪ್ರಸಾದರ ಮೈಸೂರಿನಿ೦ದ ದೆಹಲಿ ತನಕದ ರಾಜಕಾರಣವೇ ರೋಚಕ, ಅವರು ಶಿವಮೊಗ್ಗ ತಾಳಗುಪ್ಪ ಬ್ರಾಡ್ ಗೇಜ್ ಗಾಗಿ ನಡೆದ ಕಾಗೋಡು ಹೋರಾಟದ ನೇತಾರ ಗಣಪತಿಯಪ್ಪಾರ ನೇತೃತ್ವದ ಹೋರಾಟಕ್ಕೆ ಬೆಂಬಲಿಸಿದವರು, ಆಗಿನ ಉಪ ಪ್ರಧಾನಿ ಲಾಲ್ ಕೃಷ್ಣ ಅಧ್ವಾನಿಯವರಿಗೆ ಸಾಗರ ರೈಲು ನಿಲ್ದಾಣದ ಹೆಸರನ್ನ ರಾಮ ಮನೋಹರ ಲೋಹಿಯ ರೈಲು ನಿಲ್ದಾಣ ಎಂದು ಪುನರ್ ನಾಮಕರಣಕ್ಕೆ ಕಾರಣರಾದವರು (ಅಂತಿಮ ಆಗಿದ್ದರು ಜಾರಿ ಆಗಿಲ್ಲ) ಈ ಬಾರಿ ರಾಜಕಾರಣದಿಂದ ನಿವೃತ್ತರಾದವರನ್ನ ಪುನಃ ಲೋಕಸಭೆಗೆ ಅಭ್ಯಥಿ೯ ಆಗಿ ಸ್ಪದಿ೯ಸಿದ್ದಾರೆ.
  ಈ ಕ್ಷೇತ್ರದ ಹಾಲಿ ಸಂಸದ ದೃವ ನಾರಾಯಣ್ ಇವರ ಶಿಷ್ಯ ಇವರ ವಿರುದ್ಧ ಬಿಜೆಪಿಯಿಂದ ಸ್ಪದಿ೯ಸಲು ನಿವೃತ್ತಾ ಕನ್ನಡದಲ್ಲಿ ಐಎಎಸ್ ಮಾಡಿದ್ದ ಚಲನ ಚಿತ್ರ ನಟ ಕೆ.ಶಿವರಾಂಗೆ ಯಡೂರಪ್ಪ ತಯಾರಿ ಮಾಡಿದ್ದರು, 6 ತಿಂಗಳಲ್ಲಿ ಶಿವರಾಂ ಹವಾ ಹೆಚ್ಚಾಗಿ ದೃವ ನಾರಾಯಣ್ ಕಂಗಾಲಾಗಿದ್ದರು.
 ಆಗಲೇ ದೃವನಾರಾಯಣರ ಆಪ್ತರು ಮತ್ತು ಶ್ರೀನಿವಾಸ ಪ್ರಸಾದರ ಆಪ್ತರು ದೃವ ನಾರಾಯಣ್ ಗೆಲ್ಲಬೇಕು ಮತ್ತು ಕೆ.ಶಿವರಾಂ ಸ್ಪದಿ೯ಸ ಬಾರದೆಂದು ನಾಟಕ ಒಂದನ್ನ ನಡೆಸಿದರು, ಶ್ರೀನಿವಾಸ ಪ್ರಸಾದರು ಸ್ಪದಿ೯ಸಿದರೆ ಸಲೀಸಾಗಿ ಗೆಲ್ಲುತ್ತಾರೆ ಮತ್ತು ಒಂದು ಕಾಲದಲ್ಲಿ ಶ್ರೀನಿವಾಸ್ ಪ್ರಸಾದರಿಂದ ಸಂಸದರಾದ ದೃವ ನಾರಾಯಣರನ್ನ ಸೋಲಿಸಿ ಸೇಡು ತೀರುಸಿ ಕೊಳ್ಳಬಹುದೆಂಬ ಹುಸಿ ಯೋಜನೆ ಮುಂದು ಮಾಡಿದರು.
 6 ತಿಂಗಳಿಂದ ಕ್ಷೇತ್ರದಲ್ಲಿ ಗೆಲುವಿಗಾಗಿ ಶ್ರಮಿಸಿದ್ದ ಶಿವರಾಂರನ್ನ ಸ್ಪದಿ೯ಸದ೦ತೆ ಮಾಡುವ ಯೋಜನೆ ಇದಾಗಿದ್ದರು ಹಿರಿಯರಾದ ಶ್ರೀನಿವಾಸ್ ಪ್ರಸಾದರ ಸ್ಪದೆ೯ಗಾಗಿ ಶಿವರಾಂ ಹಿಂದೆ ಸರಿದರು.
  ಶ್ರೀನಿವಾಸ್ ಪ್ರಸಾದ್ರನ್ನ ಬೆಂಬಲಿಸಿ ನಿಲ್ಲಿಸಿದವರೆ ಇವರಿಗೆ ವಯಸ್ಸಾಯಿತು, ಕಣ್ಣು ಕಾಣುವುದಿಲ್ಲ, ಕಿವಿ ಕೇಳುವುದಿಲ್ಲ ಅಂತೆಲ್ಲ ಅಪ ಪ್ರಚಾರ ಮಾಡಿ ದೃವ ನಾರಾಯಣರನ್ನ ಗೆಲ್ಲಿಸುವ ಪ್ರಯತ್ನ ನಡೆಸಿದ್ದಾರೆ.
  ಕೆಲವು ಬಾರಿ ಅಹ೯ತೆಯೇ ಅನಹ೯ತೆ ಎಂಬOತೆ ಕೆ.ಶಿವರಾಂ ಸಂಸದರಾಗಿ ಸಂಸತ್ ಪ್ರವೇಶ ಮಾಡುವ ಅವಕಾಶದಿಂದ ವ್ಯವಸ್ಥಿತವಾಗಿ ವಂಚಿಸಲಾಯಿತು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...