Skip to main content

Blog number 1472. ಕೊರಾನಾ ಲಾಕ್ ಡೌನ್ ಡೈರಿ 2020, ಲೆಟರ್ ನಂಬರ್ 26 (30 ಏಪ್ರಿಲ್ -2020)

#ಕೊರಾನಾ_ಲಾಕ್_ಡೌನ್_ಡೈರಿ_2020
#ಲೆಟರ್_ನOಬರ್_26
#ದಿನಾ೦ಕ_30_ಏಪ್ರಿಲ್_2020

    #ಲಾಕ್_ಡೌನ್_ಭಾರತೀಯ_ಶಿಕ್ಷಣ_ವ್ಯವಸ್ಥೆ_ಸುದಾರಣೆಗೊಳಿಸೀತೆ?
  
  ಸ್ವಾತಂತ್ರ ನಂತರ ಬೃಹತ್ ದೇಶದಲ್ಲಿ ಸವ೯ರಿಗೂ ಶಿಕ್ಷಣ ನೀಡುವ ಗುರಿ ಹೊಂದಿ  ನಡೆಸಿದ ಅನೇಕ ಪ್ರಯತ್ನಗಳಿಂದ ಭಾರತ ಶಿಕ್ಷಣದಲ್ಲಿ ಕ್ರಾ೦ತಿ ಆಗಿದೆ.
   ಶಿಕ್ಷಣಕ್ಕಾಗಿ ದೇಶದಲ್ಲಿ ವಿನಿಯೋಗಿಸುವ ಸಂಪನ್ಮೂಲಗಳು ಕಡಿಮೆ ಏನಲ್ಲ, ಒಂದು ಹಂತದ ಪ್ರಾಥಮಿಕ ಶಿಕ್ಷಣ ನೀಡುವುದರಲ್ಲಿ ನಮ್ಮ ಸಕಾ೯ರ ಯಶಸ್ವಿ ಆದರೂ ನಂತರದ ಹಂತದ ಶಿಕ್ಷಣದ ಗುಣಮಟ್ಟ ಕಾಪಡಿ ಕೊಳ್ಳಲು ಸಾಧ್ಯವಾಗಿಲ್ಲ.
  ಇದರ ಮದ್ಯೆ ಖಾಸಾಗಿ ಶಿಕ್ಷಣ ಸಂಸ್ಥೆಗಳ ಪೈಪೋಟಿ, ಬಾಷಾ ಮಾಧ್ಯಮಗಳ ವ್ಯಾಜ್ಯ, ನ್ಯಾಯಾಲಯದ ತೀಪು೯, ಶಿಕ್ಷಣ ಇಲಾಖಾ ನೌಕರರ ಸಂಘಗಳ ಬೇಡಿಕೆ, ಶಿಕ್ಷಣಾ ಇಲಾಖಾ ಬ್ರಷ್ಟಾಚಾರಗಳು ಈ ಇಲಾಖೆಯನ್ನ ಸಸೂತ್ರವಾಗಿ ನಡೆಸಲು ಸಾಧ್ಯವಿಲ್ಲದಂತೆ ಮಾಡಿದೆ.
  ಭಾರತದಲ್ಲಿ ಉನ್ನತ ಶಿಕ್ಷಣ ಪಡೆದು ವಿದೇಶದಲ್ಲಿ ಸೇವೆ ಮಾಡುವವರೆ ಭಾರತೀಯ ಶಿಕ್ಷಣ ಸರಿ ಇಲ್ಲ ಎನ್ನುತ್ತಾರೆ.
  ಪರಿಕ್ಷಾ ಅಕ್ರಮ, ಮೌಲ್ಯಮಾಪನದಲ್ಲಿ ಅಕ್ರಮಗಳು ಶಿಕ್ಷಣಾ ಇಲಾಖೆಗೆ ಸವಾಲಾಗಿತ್ತು.
  ಇಂತಹ ಸಂದಭ೯ದಲ್ಲಿಯೆ ಪರಿಕ್ಷಾ ಪೂವ೯ದಲ್ಲಿ ಕೊರಾನ ವೈರಸ್ ನಿಂದ ಇಡೀ ದೇಶ ಲಾಕ್ ಡೌನ್ ಮಾಡಲೇಬೇಕಾದ್ದರಿಂದ ಶಾಲೆಗಳನ್ನ ಮುಚ್ಚಬೇಕಾಯಿತು ಇದರಿಂದ ಪರೀಕ್ಷೆ ನಡೆಸಲು ಸಾಧ್ಯವಾಗಲಿಲ್ಲ ಹಾಗೆಯೆ ಲಾಕ್ ಡೌನ್ ಮು೦ದುವರಿಸಬೇಕಾದ್ದರಿ೦ದ 1ನೇ ತರಗತಿಯಿ೦ದ 9 ತರಗತಿ ವರೆಗಿನ ವಿದ್ಯಾಥಿ೯ಗಳನ್ನ ಪರೀಕ್ಷೆ ಇಲ್ಲದೆ ತೇಗ೯ಡೆ ಮಾಡಬೇಕಾಯಿತು ಬಹುಶಃ ಇಂತಹ ಕ್ರಮ ಭವಿಷ್ಯದಲ್ಲೂ ಉಹಿಸಲು ಸಾಧ್ಯವಿಲ್ಲ.
  SSLC , ದ್ವಿತಿಯ ಪಿಯುಸಿ, ಪದವಿ ಕಾಲೇಜುಗಳ ಪರೀಕ್ಷೆ ಆಗಿಲ್ಲ ಆ ವಿದ್ಯಾಥಿ೯ಗಳು ಪರೀಕ್ಷೆ ಮುಗಿಸಿ ರಜೆಯ ಮೂಡಿಗೆ ಹೋಗಬೇಕಾದವರು ಇನ್ನೂ ಪರೀಕ್ಷೆ ಮೂಡಿನಲ್ಲಿ ಇದ್ದಾರೆ.
  ಶಾಲೆ ಮತ್ತು ಪರೀಕ್ಷೆ ರದ್ದಾದ ಮಕ್ಕಳಿಗೆ ಇದು ರಜಾ ಮೂಡಿಗೆ ಒಯ್ದಿಲ್ಲ ಯಾಕೆಂದರೆ ಬಯಲಲ್ಲಿ ಆಟಾಟೋಪ, ಸಿನಿಮಾ, ಪ್ರವಾಸದ ಮೋಜು ಮಸ್ತಿ ಅವರಿಗಿಲ್ಲವಾದ್ದರಿಂದ.
  ಕೊರಾನಾ ವೈರಸ್ ನಿಂದ ಭಾರತೀಯ ಶಿಕ್ಷಣದಲ್ಲಿ ಸಮಗ್ರ ಬದಲಾವಣೆಯ ಗಾಳಿ ಬೀಸಿದೆ, ಒಂದು ಹಂತದವರೆಗಿನ ಪರೀಕ್ಷೆ ಮುಕ್ತ ಶಿಕ್ಷಣ, ಶಾಲೆಗೆ ಹೋಗದೆ ಆನ್ಲೈನ್ ಶಿಕ್ಷಣ ವ್ಯವಸ್ಥೆ ಮುಂತಾದನ್ನ ಅಳವಡಿಸುವ ಸಾಧ್ಯತೆಗಳು ಇವೆ.
  ಶಿಕ್ಷಣ ಇಲಾಖೆಯಲ್ಲಿ ಸಣ್ಣ ಉತ್ತಮ ಬದಲಾವಣೆಗೂ ಅಡ್ಡಗಾಲು ಹಾಕುತ್ತಿತ್ತ ಖಾಸಾಗಿ ಶಿಕ್ಷಣ ಸಂಸ್ಥೆಗಳ ಲಾಬಿ ನಿಯ೦ತ್ರಣಕ್ಕೆ ಬರಲಿದೆ.
  ಕೊರಾನ ವೈರಸ್ ದೇಶದ ಶಿಕ್ಷಣ ಇಲಾಖೆಯ ಕೊಳೆ ತೊಳೆಯುವ ಎಲ್ಲಾ ಸಾಧ್ಯತೆ ಇದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...