Skip to main content

Blog number 1475. ಆನಂದಪುರಂ ಇತಿಹಾಸ ಭಾಗ-5

ಆನಂದಪುರಂ ಇತಿಹಾಸ ಭಾಗ_5.

#ವಿದ್ಯಾಮಂತ್ರಿಗೆ_ವಿದ್ಯೆ_ಕಲಿಸಿದ_ಶಾಲೆ

#ರಾಜ್ಯದ_ಶಿಕ್ಷಣಮಂತ್ರಿ_ಆಗಿದ್ದ_ಬದರಿನಾರಾಯಣ_ಆಯ್ಯಂಗಾರರು_ಓದಿದ್ದ
#ಸಕಾ೯ರಿ_ಕಿರಿಯಪ್ರಾಥಮಿಕ_ಶಾಲೆಗೆ_ಈಗ_122_ವರ್ಷ.
 
#ಆನಂದಪುರದ_ಜಾಮಿಯ_ಮಸೀದಿ_ಎದುರಿನ_ಶಾಲೆ


  ಆನಂದಪುರಂನ ಬದರಿನಾರಾಯಣ ಅಯ್ಯಂಗಾರರು ಶಾಸಕರಾಗಿ, ಮಂತ್ರಿಯಾಗಿ, ಸಂಸದರಾಗಿ ರಾಜ್ಯದ ರಾಜಕಾರಣದಲ್ಲಿ ತಮ್ಮ ಚಾಪು ಮೂಡಿಸಿದವರು ಇವರಿಂದ ಇವರ ಹುಟ್ಟೂರು ಆನಂದಪುರಂ ಕೂಡ ಪ್ರಸಿದ್ದಿ ಪಡೆಯಲು ಕಾರಣರಾದರು.
  ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಆನಂದಪುರದ ಹಾಲಿ ಜಾಮಿಯ ಮಸೀದಿಯ ಎದುರಿನ ಸಕಾ೯ರಿ ಕಿರಿಯ ಪ್ರಾಥಮಿಕ  ಶಾಲೆಯಲ್ಲಿ ಮಾಡಿದ್ದು ಇತಿಹಾಸ.
  ಇದು ಬ್ರಿಟೀಶ್ ಆಡಳಿತ ಕಾಲದಲ್ಲಿ ಯಡೇಹಳ್ಳಿ ಪ್ರವಾಸಿ ಮಂದಿರ ನಿರ್ಮಾಣದ ಸರಿ ಸುಮಾರು ಒಂದೇ ಕಾಲದಲ್ಲಿ ನಿರ್ಮಾಣ ಆಗಿರ ಬಹುದು.
   ಈ ಶಾಲೆಗೆ 1999 ರಲ್ಲಿ ನೂರು ವರ್ಷ ಆಗಿತ್ತು ಆಗ ಈ ಶಾಲೆಯ ಶತಮಾನೋತ್ಸವ ಆಚರಿಸಬೇಕು, ವಿಶೇಷ ಅಂದರೆ ಈ ಶಾಲೆಯಲ್ಲಿ ವಿದ್ಯಾಬ್ಯಾಸ ಮಾಡಿದ ನಮ್ಮ ಊರಿನ ಬದರಿನಾರಾಯಣ ಅಯ್ಯಂಗಾರರು ಈ ರಾಜ್ಯದ ವಿದ್ಯಾ ಮಂತ್ರಿ ಆಗಿದ್ದು ಎಂದು ನಾನು ಆಗ ಜಿಲ್ಲಾ ಪಂಚಾಯತ್  ಸದಸ್ಯನಾಗಿದ್ದಾಗ ಪ್ರಯತ್ನ ಮಾಡಿದಾಗ ಅದನ್ನು ಉದ್ದೇಶಪೂರ್ವಕವಾಗಿ ನಡೆಯದಂತೆ ತಡೆಯುವ ಪ್ರಯತ್ನದಿಂದ ನಾನು ಈ ಮಹತ್ತರ ಕಾಯ೯ಕ್ರಮ ನಡೆಸಲು ಸಾಧ್ಯವಾಗಲಿಲ್ಲ.
  ಈಗ ಈ ಶಾಲೆಗೆ ಬಹುಶಃ 122 ನೇ ವಷಾ೯ಚಾರಣೆ.
  ಈ ಶಾಲೆಯಲ್ಲಿ ಏ.ಕೆ.ಶೇಷಾಚಾರ್ (ಆನಂದಪುರದ ಪ್ರಾಣೇಶ್ ಆಚಾರ್ ತಂದೆ),ಗಾಂಧೀ ವಾದಿ ಕೃಷ್ಣಮೂರ್ತಿ ಮಾಸ್ತರ್ (ಆನಂದಪುರದ ಕನ್ನಡ ಸಂಘದ ಲಕ್ಷ್ಮೀಷ್ ತಂದೆ), ಟೀಕಪ್ಪ ಮಾಸ್ತರ್ (ಪತ್ರಕರ್ತ ಬಿ.ಡಿ. ರವಿ ತಂದೆ) ಬೆಂಗಳೂರಿನ ಲೋಬೋ ಮಾಸ್ತರ್ ಮತ್ತು ಅವರ ಪತ್ನಿ ಲಿಲ್ಲಿ ಬಾಯಿ ಈ ಶಾಲೆಯಲ್ಲಿ ಬೋದಿಸಿದ ಪ್ರಮುಖರು.
   ಶಿವಮೊಗ್ಗ ಸಾಗರ ಮುಖ್ಯ ರಸ್ತೆಗೆ ಮುಖವಾಗಿ ಇದ್ದ ಈ ಶಾಲೆಯ ಗೇಟನ್ನು ಈ ರಸ್ತೆ ರಾಷ್ಟ್ರೀಯ ಹೆದ್ದಾರಿ ಆದ ನಂತರ ಮತ್ತು ವಾಹನ ಸಂಚಾರ ಹೆಚ್ಚು ಆದ್ದರಿಂದ ಹಿಂಭಾಗದಿಂದ ಪ್ರದೇಶ ದ್ವಾರ ಕಲ್ಪಿಸಿದ್ದಾರೆ.
ನಾಳೆ ಭಾಗ-6

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...