Skip to main content

Blog number 1520. ಒಂದು ಕಾಲದ ಅಚ್ಯುತ್ ರಾವ್ ಲೇ ಔಟ್ ಕಥೆ

#ಇದು ಶಿವಮೊಗ್ಗದ 1961ರ ರಿಯಲ್ ಎಸ್ಟೇಟ್ ಕಥೆ.


   ಇವರು ಶ್ರೀನಿವಾಸ್ ರಾವ್ ವಯಸ್ಸು 74 ವಷ೯ ಇವರಿಗೆ ಕಣ್ಣಿನ ತೊಂದರೆ ಹುಟ್ಟಿನಿಂದ ಇದೆ, ಇವರ ತಾಯಿ ಇದ್ದಾರೆ 96 ವಷ೯ ಅವರ ಹೆಸರು ಶ್ರೀಮತಿ ಅನ್ನಪೂಣ೯ ಅವರ ಪತಿ ದಿವ೦ಗತ ಶ್ರೀ ಅಚ್ಚುತ ರಾವ್ ಬ್ರಿಟಿಷ್ ಭಾರತೀಯ ಸೈನ್ಯದಲ್ಲಿ ವೆಟರ್ನರಿ ಡಾಕ್ಟರ್ ಆಗಿದ್ದರು, ಸೈನ್ಯದ ಕುದುರೆಗಳ ಆರೈಕೆಗೆ ಇವರು ಅನಿವಾಯ೯.1944ರಲ್ಲಿ ಕಿವಿ ಸಮಸ್ಯೆಯಿ೦ದ ನಿವೃತ್ತರಾದರು, ಪಾಕಿಸ್ತಾನದ ಪೇಶಾವರದಲ್ಲಿ ಬಹಳ ಕಾಲ ಇದ್ದರು.
     ಆಚ್ಚುತ್ ರಾವ್ ರವರ ತಂದೆ ಶ್ರೀ ಸೀತಾರಾಮಯ್ಯ ಆಗಿನ ಕಾಲದಲ್ಲಿ ಶಿವಮೊಗ್ಗದ ಖ್ಯಾತ ವಕೀಲರು ಅವರಿಗೆ ಈಗಿನ ನಂಜಪ್ಪ ಆಸ್ಪತ್ರೆ ಎದುರು ಮೂರುವರೆ ಎಕರೆ ವಿಸ್ತಿಣ೯ದ ಮಾವಿನ ತೋಪು ಅದರಲ್ಲಿ ದೊಡ್ಡ ಬಂಗಲೆ ಇತ್ತು.
    1960ರಲ್ಲಿ ಈಜಾಗವನ್ನ ನಿವೇಶನವಾಗಿ ಪರಿವತಿ೯ಸಿ 30 X 90 ಅಡಿ ನಿವೇಶನ ಮಾಡಿದರು ಅದೇ ಇವತ್ತಿನ ಅಚ್ಚುತ ರಾವ್ ಲೇ ಔಟ್ ಆಗ ಮಾರಟ ಮಾಡಿದ ನಿವೇಶನದ ಬೆಲೆ 300 ರೂಪಾಯಿ !.
     ಅಚ್ಚುತ ರಾವ್ ರಿಗೆ ಐದು ಗಂಡು, ನಾಲ್ಕು ಹೆಣ್ಣು ಮಕ್ಕಳು ಮಕ್ಕಳಿಗೆ ಒಂದೇ ಒಂದು ಸೈಟ್ ಕೊಡದೆ ಮಾರಾಟ ಮಾಡಿದ್ದರು, ಹಣ ಬಂಗಾರ ಸೈಟ್ ಗಿಂತ ಉತ್ತಮ ಎಂಬುದು ಆ ಕಾಲದ ನಂಬಿಕೆ ಆಗಿತ್ತು.
    ನಂತರ ಕಾಲಾನಂತರ ಈ ಶ್ರೀನಿವಾಸ ರಾವ್ ಅಡಿಕೆ ಮಂಡಿ ಗುಮಸ್ತರಾಗಿ ಕೆಲಸ ಮಾಡಿದರು ಅವರ ಸಹೋದರರು ಉತ್ತಮ ವ್ಯಾಸಂಗದಿಂದ ದೊಡ್ಡ ಹುದ್ದೆ ಹೊಂದಿದರು, ಶ್ರೀನಿವಾಸ್ ರಾವ್ರರ ಹುಟ್ಟಿನಿಂದ ಬಂದ ಕಣ್ಣಿನ ಸಮಸ್ಯೆಯಿಂದ ಹೆಚ್ಚು ಕಾಲ ಇವರಿಗೆ ಅಡಿಕೆ ಮಂಡಿ ಮಾಲಿಕರು ಕೆಲಸ ಕೊಡಲಿಲ್ಲ ಆಗ ಆಚ್ಚುತರಾವ್ ಶ್ರೀಮತಿಯವರಿಗೆ ಬರುತ್ತಿದ್ದ ಪಿಂಚಣಿ ಅತ್ಯಲ್ಪ ಆದರೂ ಅವರೂ ಶ್ರೀಮ೦ತ ಮಕ್ಕಳ ಜೊತೆ ಬಾಳದೆ ಕಣ್ಣಿನ ಸಮಸ್ಯೆಯ ಬಡ ಶ್ರೀನಿವಾಸ ರಾವ್ ರೊಡನೆ  ಬದುಕಿದ್ದಾರೆ.
    ಈ ಶ್ರೀನಿವಾಸ್ ರಾವ್ರರ ಗೆಳೆತನ ಅಕಸ್ಮಿಕವಾಗಿ 2006ರಿಂದ ನನಗಾಯಿತು ಇವರ ಕಣ್ಣಿನ ಆಪರೇಶನ್ ಬೆಂಗಳೂರಿನ ನಾರಾಯಣ ನೇತ್ರಾಲಯದಲ್ಲಿ ನಡೆದಾಗ ಸ್ವತಃ ನಾನು ಇದ್ದೇ.
     ಇವತ್ತು ಬೆಳಿಗ್ಗೆ ನನ್ನ ಬೇಟಿ ಮಾಡಲು ಬಂದಿದ್ದರು, ನನಗೆ ಇವರ ಆಗಮನ ಅತ್ಯಂತ ಸಂತೋಷ ತಂತು, ಇವರಿಗೆ ನಮ್ಮ ಕುಟುಂಬದಿಂದ ಆತ್ಮಿಯ ಸ್ವಾಗತ ಸನ್ಮಾನ ನೀಡಿ ಇವರಿಂದ ಆಶ್ರೀವಾದ ಪಡೆದೆವು.
     ಇವತ್ತು ಶಿವಮೊಗ್ಗ ಸ್ಮಾಟ್೯ ಸಿಟಿ ಆಗುತ್ತಿದೆ ರಿಯಲ್ ಎಸ್ಟೇಟ್ ದಂದೆ ಬಹುಕೋಟಿಗೆ ಹೋಗಿದೆ ಆದರೆ ಮುಂದಿನ 50 ವಷ೯ದಲ್ಲಿ ಅದರ ಫಲಾನುಭವಿಗಳು ಏನಾಗಬಹುದು? ನಮ್ಮೆದರು ಅಚ್ಚುತ್ರಾವ್ ಉದಾಹರಣೆ ಇದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...