Skip to main content

Blog number 1538. ನಿಮಗೆ ಬೇಕಾದ ಪ್ಲೋರ್ ಕ್ಲೀನಿಂಗ್ ಪಿನಾಲ್ ನೀವೇ ತಯಾರಿಸಿಕೊಳ್ಳಿ ಕಡಿಮೆ ಧರದಲ್ಲಿ ಅತ್ಯುತ್ತಮ ಗುಣಮಟ್ಟದ ಪಿನಾಲ್ .

https://youtu.be/5QRliK0DK3I

#ನಿಮ್ಮ_ಬಳಕೆಯ_ಪ್ಲೋರ್_ಕ್ಲೀನರ್_ಪಿನಾಲ್_ನೀವೇ_ತಯಾರಿಸಿ.

#ಒಂದು_ಲೀಟರ್_ಆಸಲಿ_ಬೆಲೆ_ಕನಿಷ್ಟ_16_ರಿಂದ_ಗರಿಷ್ಟ_35_ರೂಪಾಯಿ_ಮಾತ್ರ

#ಮಾರುಕಟ್ಟೆಯಲ್ಲಿ_ಲೀಟರ್_120ರ_ತನಕ_ಇದೆ.

#ಅತ್ಯುತ್ತಮ_ಗುಣಮಟ್ಟದ_ಪ್ಲೋರ್_ಕ್ಲೀನಿಂಗ್_ಪಿನಾಲ್_ನಮ್ಮ_ಸಂಸ್ಥೆಗೆ_ನಾವೇ_ತಯಾರಿಸಿ_ಕೊಳ್ಳುತ್ತೇವೆ.
  
  ನಮ್ಮ ಸಂಸ್ಥೆ ಮತ್ತು ನಮ್ಮ ಮನೆಗಳಲ್ಲಿ ಇರುವ ಶೌಚಾಲಯಗಳ ಸಂಖ್ಯೆ 66 ಮುಂದಿನ ದಿನಗಳಲ್ಲಿ ಹೆಚ್ಚುವರಿ 25 ಸೇರಿದರೆ ಹತ್ತಿರ ಹತ್ತಿರ 90 ದಾಟುತ್ತದೆ ಮತ್ತು  ರೂಂ ಗಳು 36, ಕಲ್ಯಾಣ ಮಂಟಪ ರೆಸ್ಟೋರಾಂಟ್ ಹಾಲ್ ಗಳು ಮನೆಯ ರೂಂ ಗಳು  ಇವುಗಳ ಸ್ವಚ್ಚತೆ ನಿರ್ವಹಣೆಗೆ ಪ್ರತಿ ನಿತ್ಯ 5 ಲೀಟರ್ ಪ್ಲೋರ್ ಕ್ಲೀನಿಂಗ್ ಪೆನಾಲ್ ಬೇಕು, ಮದುವೆಗಳಿದ್ದರೆ 10 ರಿಂದ 15 ಲೀಟರ್ ಬೇಕು.
   ಬ್ಲಾಕ್ ಪಿನಾಲ್ ನಿತ್ಯ 1 ಲೀಟರ್ ಬೇಕೇ ಬೇಕು ಇದೆಲ್ಲ 12 ವರ್ಷದಿಂದ ಸರಬರಾಜು ಮಾಡುತ್ತಿದ್ದ ವ್ಯಕ್ತಿ ದುರಾಸೆಯಿಂದ ಕಳಪೆ ಪಿನಾಲ್ ಸರಬರಾಜು ಮಾಡಿ ಮೋಸ ಮಾಡುವ ಜೊತೆ ಜಗಳಗಂಟನಾದರಿಂದ ಅನಿವಾರ್ಯವಾಗಿ ನಾವೇ ನಮಗೆ ಬೇಕಾದ ಪಿನಾಲ್ ತಯಾರಿಸಿ ಕೊಳ್ಳುತ್ತಿದ್ದೇವೆ.
  ಇದರಿಂದ ನಮ್ಮ ಆಯ್ಕೆಯ ಗುಣಮಟ್ಟದ ಪಿನಾಲ್ ತಯಾರಾಗುತ್ತದೆ ಬೆಲೆ ಕೂಡ ಅತ್ಯಂತ ಕಡಿಮೆ.
  ಪ್ಲೋರ್ ಕ್ಲೀನಿಂಗ್ ಪಿನಾಲ್ ತಯಾರಿಸುವುದು ಸುಲಭ ಇದಕ್ಕೆ ಬೇಕಾಗುವ ಕಂಪೌಂಡ್ ( ಕ್ಲೀನಿಂಗ್ ಮತ್ತು ಸುಲಭವಾಗಿ ಹರಡುವ ಕೆಮಿಕಲ್ ) ಒಂದು ಲೀಟರ್ ಗೆ 120 ರೂಪಾಯಿ ಇದೆ ಇದಕ್ಕೆ 60 ರಿಂದ 120 ರೂಪಾಯಿ ಬೆಲೆಯ ನಿಮಗೆ ಬೇಕಾದ ಪ್ಲೇವರ್ ಸೇರಿಸಿ ಅದಕ್ಕೆ 15 ಲೀಟರ್ ನೀರು ಚೆನ್ನಾಗಿ ಬೆರೆಸಿದರೆ ನೀರು 15 ಲೀಟರ್ + ಕಂಪೌಂಡ್ ಒಂದು ಲೀಟರ್ ಸೇರಿ ಒಟ್ಟು 16 ಲೀಟರ್ ಪ್ಲೋರ್ ಕ್ಲೀನಿಂಗ್ ಪಿನಾಲ್ ಅಭ್ಯವಿದೆ.
   ನಿನ್ನೆ ಸುಮಾರು 80 ಲೀಟರ್ ಪ್ಲೋರ್ ಕ್ಲೀನಿಂಗ್ ಪಿನಾಲ್ ನನ್ನ ಮಗ ಮತ್ತು ನನ್ನ ಆಪ್ತ ಸಿಬ್ಬಂದಿ ಕಣ್ಣೂರಿನ ನಾಗರಾಜ್  ಅರ್ಧ ಗಂಟೆಯ ಶ್ರಮದಲ್ಲಿ ತಯಾರಿಸಿದ ವಿಡಿಯೊ ಇಲ್ಲಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...