Skip to main content

Blog number 1544. ಕೊರಾನಾ ಲಾಕ್ ಡೌನ್ ಡೈರಿ - 2020 ಲೆಟರ್ ನಂಬರ್ 39 (21- ಮೇ 2020)

ಕೊರಾನಾ ಲಾಕ್ ಡೌನ್ ಡೈರಿ -2020
 ಲೆಟರ್ ನಂಬರ್- 39
   ದಿನಾ೦ಕ: 21 -ಮೇ -2020

#ಕೊರಾನಾ_ಲಾಕ್_ಡೌನ್_ಕೊಡುಗೆ
#ಗ್ರಾಮ_ಪ೦ಚಾಯತ್_ಚುನಾವಣೆ_ಮುಂದಕ್ಕೆ.
#ಆಡಳಿತ_ಮOಡಳಿ_ನಾಮಕರಣ_ಸದಸ್ಯರ_ನೇಮಕ.


     ಕೊರಾನ ವೈರಸ್ ಜನರ ಜೀವಕ್ಕೆ ಗಂಡಾ೦ತರ ಉoಟು ಮಾಡಿದ್ದರೂ ಗ್ರಾಮ ಮಟ್ಟದಲ್ಲಿ ಮಾತ್ರ ಗ್ರಾಮ ಪಂಚಾಯಿತಿಗಳಿಗೆ ನಾಮ ನಿಧೇ೯ಶನ ಸದಸ್ಯರ ನೇಮಕ ಮಾಡುವ ವಿಚಾರ ಗರಿಗೆದರಿದೆ.
    ಗ್ರಾಮ ಪಂಚಾಯತ್ ಚುನಾವಣೆಗೆ ಪಕ್ಷ ಇಲ್ಲ ಅನ್ನುವುದು ಕೇವಲ ನಾಮಕಾವಸ್ಥೆ ಆದರೆ ಇಲ್ಲಿ ಸ್ಪದೆ೯ ಮಾಡುವವರು ವಿವಿದ ಪಕ್ಷಕ್ಕೆ ಸೇರಿದ ತಳಮಟ್ಟದ ಕಾಯ೯ಕತ೯ರೆ.
   ಆಯಾ ಪಕ್ಷದ ಬಹುಮತದ ಆದಾರದ ಮೇಲೆ ಅಧ್ಯಕ್ಷರು ಉಪಾಧ್ಯಕ್ಷರು ಆಯ್ಕೆ ಆಗುತ್ತಾರೆ.
   ಪರಿಸ್ಥಿತಿ ಸರಿ ಇದ್ದು ಕೊರಾನಾ ವೈರಸ್ ಬಾದೆ ಇರದಿದ್ದರೆ ಇಷ್ಟರಲ್ಲಿ ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯುತ್ತಿತ್ತು ಆದರೆ ಈ ಎಲ್ಲಾ ಗಂಡಾ೦ತರದಿ೦ದ ಗ್ರಾಮ ಪಂಚಾಯತ್ ಚುನಾವಣೆ ಅನಿವಾಯ೯ವಾಗಿ ಮುಂದೂಡಲೇ ಬೇಕಾಗಿದೆ.
   ಮೇ ತಿಂಗಳ (2020) ಕೊನೆಗೆ ಈ ಹಿಂದಿನ 5 ವಷ೯ ಕಾಲಾವಧಿ ಪೂರೈಸಲಿರುವ ಗ್ರಾಮ ಪಂಚಾಯತ ಆಡಳಿತ ಮOಡಳಿಗೆ ಹೊಸ ಸದಸ್ಯರ ಚುನಾವಣೆ ನಡೆಸಲಾಗದ್ದರಿಂದ ಸಕಾ೯ರ ಆಡಳಿತಾಧಿಕಾರಿ ನೇಮಕ ಮಾಡಬೇಕಾಗಿದೆ.
  ಆದರೆ ರಾಜ್ಯ ಸಕಾ೯ರ ಮುಂದಿನ ಚುನಾವಣೆ ತನಕ ಗ್ರಾಮ ಪಂಚಾಯತ್ ಗಳಿಗೆ ಆಡಳಿತ ಮಂಡಳಿ ರಚಿಸಲು ತೀಮಾ೯ನಿಸಿದೆ.
  ಹಿಂದಿನ ಮೀಸಲಾತಿ ಸಂಖ್ಯೆಗೆ ಅನುಗುಣವಾಗಿ ತಮ್ಮ ಪಕ್ಷದವರನ್ನೆ ನಾಮ ನಿದೇ೯ಶನ ಮಾಡಲಿದೆ.
  ಆಗ ಇಡೀ ರಾಜ್ಯದಲ್ಲಿನ ಗ್ರಾಮ ಪಂಚಾಯತಗಳು ಬಿಜೆಪಿ ಪಕ್ಷದ ಆಡಳಿತ ಮಂಡಳಿಗಳಾಗುತ್ತದೆ ಎಂದು ವಿರೋದ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸುತ್ತಿದೆ.
  ಗ್ರಾಮ ಪಂಚಾಯತ್ ಮಟ್ಟದಲ್ಲಿನ ಕಾಯ೯ಕತ೯ರಿಗೆ ಆಡಳಿತದಲ್ಲಿ ಪಧಾಧಿಕಾರ ನೀಡಿ ಅವರನ್ನ ಮುಂದಿನ ಚುನಾವಣೆಗೆ ತಯಾರಿ ಮಾಡಿ ಪಕ್ಷವನ್ನ ತಳಮಟ್ಟದಲ್ಲಿ ಮಜಬೂತು ಗೊಳಿಸುವ ಅವಕಾಶವನ್ನ ರಾಜ್ಯ ಬಿಜೆಪಿ ಈ ಸಂದಭ೯ದಲ್ಲಿ ಕಳೆದುಕೊಳ್ಳಲಾರದು.
  ಇಲ್ಲಿ ಕಾನೂನು ಬಳಸಿಕೊಂಡು ನೈತಿಕತೆಗೆ ಪರದೆ ಹೊದಿಸಿ ಪಂಚಾಯತ್ ರಾಜ್ ಕಾಯ್ದೆಗೆ ಅಪಮಾನ ಮಾಡಿದಂತೆ ಆಗುವುದಿಲ್ಲವಾ? ಎಂಬ ಪ್ರಶ್ನೆಗೆ ಸದ್ಯದ ಪಕ್ಷಾ೦ತರ /ಆಪರೇಷನ್ ಇತ್ಯಾದಿಗಳಿ೦ದ ರಾಜ್ಯ ಸಕಾ೯ರವೇ ರಾತ್ರೋರಾತ್ರಿ ಬದಲಾಗುವಾಗ ಇದೇನು ದೊಡ್ಡದು ಎಂಬ ಮರು ಪ್ರಶ್ನೆ ಇದೆ.
    ಗ್ರಾಮ ಮಟ್ಟದಲ್ಲಿ ಜನರ ಓಟಿನ ಹಂಗಿಲ್ಲದೆ ಮುಂದಿನ ಚುನಾವಣೆವರೆಗೆ (ಕನಿಷ್ಟ 6 ತಿಂಗಳು) ಹೊಸ ನಾಮಕರಣ ಸದಸ್ಯರ ಆಡಳಿತ ಬರಲಿದೆ.  
    ಕೊರಾನ ಅನಾಹುತದಲ್ಲಿ ಇದು ಒಂದು ಅನುಕೂಲ.
ವಿ.ಸೂ. ಆದರೆ ಸರ್ಕಾರ ಈ ನಾಮಕರಣ ಯೋಚನೆ ಕೈ ಬಿಟ್ಟಿತು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...