Skip to main content

Blog number 1547. ಸಾತಾಳ್ ಶರತ್ ನಾಗಪ್ಪ ಆನಂದಪುರಂ ಹೋಬಳಿಯ ಮುಂದಿನ ನಾಯಕತ್ವವಹಿಸುವ ಎಲ್ಲಾ ಅಹ೯ತೆ ಇರುವ ಇವರಿಗೆ ಇವರ ಪಕ್ಷ ಶಕ್ತಿ ನೀಡಬೇಕು.

#ಶರತ್_ನಾಗಪ್ಪ_ಸಾತಾಳ್_ವಿವಾಹ_ಆಹ್ವಾನ_ನೀಡಲು_ಬಂದಿದ್ದರು.

#ಹೊಸೂರು_ಗ್ರಾಮ_ಪಂಚಾಯತ್_ಅಧ್ಯಕ್ಷರು

#ಇವರ_ತಂದೆ_ಸಾತಾಳ್_ನಾಗಪ್ಪ_ನನ್ನ_ಗೆಳೆಯರು

#ನಮ್ಮ_ಆನಂದಪುರಂ_ಹೋಬಳಿಯ_ಮುಂದಿನ_ಭರವಸೆಯ_ನಾಯಕತ್ವದ_ಗುಣ_ಇವರಲ್ಲಿದೆ.


   1985 ರಿಂದ ಇವರ ತಂದೆ ಚೆನ್ನಶೆಟ್ಟಿಕೊಪ್ಪದ ಸಾತಾಳ್ ನಾಗಪ್ಪ ರಾಜಕಾರಣದಲ್ಲಿ ನನ್ನ ಜೊತೆಗಾರರು 1989ರಲ್ಲಿ ನಮ್ಮ ಯಡೇಹಳ್ಳಿ ಮಂಡಲ್ ಪಂಚಾಯತ್ ಆದಾಗ ಇವರ ಈಗಿನ  ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೂರ್ಣ ಪ್ರದೇಶ ಯಡೇಹಳ್ಳಿ ಮಂಡಲ್ ಪಂಚಾಯತ್ ಗೆ ಸೇರಿತ್ತು.
   ಆಗ ಕೋವಿ ನಾರಾಯಣಪ್ಪರನ್ನು ಪ್ರದಾನರ ಹುದ್ದೆಗೆ ಕೂರಿಸಲು ಮತ್ತು ನಂತರ ಈ ಸ್ಥಾನ ಅವರಿಗೆ ಉಳಿಸಲು ನಡೆದ ನಿರಂತರ ಸವಾಲುಗಳ ಸಂದರ್ಭದಲ್ಲಿ ಇವರ ತಂದೆ ಸಾತಾಳ್ ನಾಗಪ್ಪ ಈಗಿನ ಹೊಸೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಖಂಡರುಗಳಾದ ನಾರಿ ನಾರಾಯಣಪ್ಪ, ಹೆಬ್ಸೆನಾರಾಯಣಪ್ಪ,ಹುರುಳಿ ನಾರಾಯಣಪ್ಪ, ಕ೦ಚುಗುಣಿ ನಾರಾಯಣಪ್ಪ, ಹುಲಮಡಕೆ ಕೊಲ್ಲಪ್ಪ,ಐಗಿನ ಬೈಲು ಕೊಠಾರಿ ಬೀಮಪ್ಪ ಅವರ ಜೊತೆ ನನ್ನ ಜೊತೆಗಿದ್ದರು.
   ಆಗ ನನ್ನ ಶ್ರೀ ಕೃಷ್ಣ ರೈಸ್ ಮಿಲ್ ಎಂಬ ಅಕ್ಕಿಗಿರಣಿಗೆ ಈ ಭಾಗದ ರೈತರೆಲ್ಲ ನನ್ನ ಗ್ರಾಹಕರಾದ್ದರಿಂದ ಇವರೆಲ್ಲರ ಪರಿಚಯ ನನ್ನಲ್ಲಿ ಹಸಿರಾಗಿದೆ.
  1995ರಲ್ಲಿ ನಾನು ಜಿಲ್ಲಾ ಪಂಚಾಯತ್ ಸದಸ್ಯನಾದಾಗ ಶರತ್ ಸಣ್ಣ ಮಗು, ನಂತರ ಇವರು ಸಿವಿಲ್ ಇಂಜಿನಿಯರ್ ಡಿಪ್ಲೋಮ ಓದಿ,ಎರೆಡು ವರ್ಷದ ಹಿಂದೆ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ದಿಸಿ ಗೆದ್ದು ಹೊಸೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದಾರೆ.
  ಇವರ ತಂದೆ ಸಾತಾಳ್ ನಾಗಪ್ಪ ಸಾಗರದ ಗಣಪತಿ ಕೆರೆ ತಿರುವಿನಲ್ಲಿ ಬೈಕ್ ಅಪಘಾತದಲ್ಲಿ ಇಹಲೋಕ ತ್ಯಜಿಸಿದ್ದರಿಂದ ಈ ಕುಟುಂಬ ಎಲ್ಲಾ ರೀತಿಯ ಕಷ್ಟಗಳನ್ನು ಎದುರಿಸಿತ್ತು.
    ಶರತ್ ಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಂತರ ಅವರದ್ದೇ ಆದ ಶೈಲಿಯಲ್ಲಿ ಈ ಪಂಚಾಯಿತಿಗೊಂದು ಹೊಸ ರೂಪ ನೀಡುತ್ತಿರುವುದು ನೋಡುತ್ತಿದ್ದೇನೆ. ಅದರಲ್ಲೂ ಸರ್ಕಾರದ ಇವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಇಲಾಖೆ ಅಧಿಕಾರಿಗಳನ್ನು ಗ್ರಾಮ ಪಂಚಾಯತ್ ಕಛೇರಿಯಲ್ಲಿ ಆಹ್ವಾನಿಸಿ ಸಭೆ ನಡೆಸಿ ಸ್ಥಳಿಯ ಜನರ ಸಮಸ್ಯೆ ಬಗೆಹರಿಸುವ ಇವರ ಹೊಸ ಯೋಜನೆ ನನಗೆ ತುಂಬಾ ಇಷ್ಟವಾಯಿತು.
  ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ಈ ವಿಧಾನ ಅಳವಡಿಸಿಕೊಳ್ಳ ಬೇಕು, ಇದರಿಂದ ಗ್ರಾಮಗಳಿಗೆ ಮತ್ತು ಸರ್ಕಾರಕ್ಕೆ ಸಂವಹನ ಸಾಧ್ಯವಾಗಲಿದೆ,
ಇದರ ಮಾಸ್ಟರ್ ಬ್ರೈನ್ ಶರತ್ ರದ್ದು ಇದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ.
   ಬುದ್ದಿವಂತ,ವಿದ್ಯಾವಂತ ಶರತ್ ನಾಗಪ್ಪ ಅವರಿಗೆ ಇಡೀ ಆನಂದಪುರಂ ಹೋಬಳಿಯ ನಾಯಕತ್ವ ವಹಿಸುವ ಅರ್ಹತೆ ಇದೆ ಅದಕ್ಕೆ ಅವಶ್ಯವಿರುವ ಶಕ್ತಿ ಅವರ ಪಕ್ಷ ಅವರಿಗೆ ನೀಡಿದರೆ ಮುಂದಿನ ದಿನಗಳಲ್ಲಿ ಯೋಗ್ಯ ನಾಯಕ ಇವರಾಗಲಿದ್ದಾರೆ.
   ಇವರ ವಿವಾಹ ಆಹ್ವಾನ ಪತ್ರಿಕೆ ಸ್ವೀಕರಿಸಿ ಅವರ ವೈವಾಹಿಕ ಜೀವನಕ್ಕೆ ಶುಭಹಾರೈಸಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...