Skip to main content

Blog number 1570. ಆನಂದಪುರಂನ ಜನಾನುರಾಗಿ ವಕೀಲರಾದ ವಾಸು ಲಾಯರ್

#ಆನಂದಪುರಂನ_ಜನಪರ_ವಾಸು_ವಕೀಲರು.

#ಮಗನ_ವಿವಾಹ_ಆರತಕ್ಷತೆ_ನಮ್ಮ_ಕಲ್ಯಾಣ_ಮ೦ಟಪದಲ್ಲಿ_ನೆರವೇರಿತು.

#ವೃತ್ತಿ_ಜೀವನದಂತೆ_ನಿತ್ಯ_ಜೀವನದಲ್ಲೂ_ಶಿಸ್ತು_ಕಾಪಾಡಿದ್ದಾರೆ.

#ವಿನಯತೆಯಿಂದ_ಎಲ್ಲರ_ಜೊತೆ_ಗೌರವದಿಂದ_ನಡೆದುಕೊಳ್ಳುವ_ವಾಸುಲಾಯರ್_ನನಗೆ_ಇಷ್ಟವಾದರು.


    ಆನಂದಪುರಂನ ವಾಸು ವಕೀಲರು ಅವರ ವೃತ್ತಿ ಜೀವನ ಪ್ರಾರಂಬಿಸಿ 25 ವರ್ಷ ಆಗಿರಬಹುದು ಅವತ್ತಿನಿಂದ ಇವತ್ತಿನವರೆಗೂ ಅವರ ನಡತೆಯಲ್ಲಿ ನಾನು ವ್ಯತ್ಯಾಸ ಕಂಡಿಲ್ಲ.
   ಇವರ ಪತ್ನಿ ಸರ್ಕಾರಿ ಶಾಲಾ ಶಿಕ್ಷಕಿಯಾಗಿ ಇವರು ಸಾಗರದ ನ್ಯಾಯಾಲಯದಲ್ಲಿ ವಕೀಲರಾಗಿದ್ದಾರೆ, ಏಕೈಕ ಪುತ್ರನ ವಿವಾಹ ಕಳೆದ ಭಾನುವಾರ ಸಾಗರದಲ್ಲಿ ನಡೆಯಿತು. ನಿನ್ನೆ ಮ೦ಗಳವಾರ ಮಗನ ವಿವಾಹ ಆರತಕ್ಷತೆ ನಮ್ಮ ಶ್ರೀಕೃಷ್ಣ ಸರಸ ಕನ್ವೆನ್ಷನ್ ಹಾಲ್ ನಲ್ಲಿ ವಿಜೃಂಭಣೆಯಿಂದ ನಡೆಸಿದರು.
   ಒಂದು ತಿಂಗಳ ಹಿಂದೆಯೇ ಕಲ್ಯಾಣ ಮಂಟಪ ನಿಗದಿ ಮಾಡಲು ಕಲಾವಿದ, ವಿಜಯ ಆರ್ಟ್ಸನ ವಿಜಯ ಜೊತೆ ಬಂದಿದ್ದರು.
   ಅವತ್ತು ಅವರ ಆಶಯ ಅವರ ಹುಟ್ಟೂರಿನ ಸಂಬಂದಿಗಳು, ಗೆಳೆಯರು ಮತ್ತು ಅವರ ಕಕ್ಷಿದಾರರೆಲ್ಲರನ್ನು ಕರೆಯಬೇಕು ಅವರಿಗೆ ಔತಣ ಕೂಟ ನೀಡಬೇಕು ಎಂಬುದು.
  ಆರತಕ್ಷತೆ ಹಿಂದಿನ ದಿನ ರಾತ್ರಿ ಅವರ ಜೊತೆ ಮಾತಾಡುವಾಗ ಕೇಳಿದ್ದೆ ಎಷ್ಟು ಜನರ ಕರೆದಿದ್ದೀರಿ ಮತ್ತು ನಿಮ್ಮ ನಿರೀಕ್ಷೆ ಎಷ್ಟು ಜನ ಅಂತ ಆಗ ಅವರು ಹೇಳಿದ್ದು 1200 ಜನ ಆಗಮಿಸುವ ನಿರೀಕ್ಷೆ ತಮ್ಮದು ಸುಮಾರು 1500 ಜನರಿಗಾಗಿ ವಿಶೇಷವಾಗಿ ಕುರಿ ಮತ್ತು ಕೋಳಿ ಮಾಂಸದ ಔತಣದ ವ್ಯವಸ್ಥೆ ಮಾಡಿದ್ದಾಗಿ ತಿಳಿಸಿದ್ದರು.
  ಮಂಗಳವಾರ ಬೆಳಿಗ್ಗೆಯಿಂದ ಮಳೆ ಶುರುವಾದ್ದರಿಂದ ಇವರ ಪರಮಾಪ್ತ ಗೆಳೆಯ ವಿಜಯ ಆರ್ಟ್ಸ್ ವಿಜಯ ಆತಂಕದಲ್ಲಿದ್ದರು ಆದರೆ ವಾಸು ಲಾಯರ್ ಆಹ್ವಾನಿಸಿದವರೆಲ್ಲ ಬಂದಿದ್ದರು.
   1000 ಜನರ ಊಟ ಆಗುವವರೆಗೆ ನಾನು ಸಿಸಿ ಟಿವಿಯಲ್ಲಿ ವೀಕ್ಷಿಸುತ್ತಿದ್ದೆ, ಸಂಜೆ ಹಣಕಾಸಿನ ವ್ಯವಹಾರದ ಪಾವತಿಗೆ ವಾಸು ಲಾಯರ್ ಮತ್ತು ಗೆಳೆಯ ವಿಜಯ ಬಂದಾಗ ಗೊತ್ತಾಗಿದ್ದು 1350 ಕ್ಕೂ ಹೆಚ್ಚು ಜನ ಇವರ ಅತಿಥ್ಯ ಸ್ವೀಕರಿಸಿದರು ಅಂತ.
   ವಾಸು ಲಾಯರ್ ಅವರು ಆನಂದಪುರಂನಲ್ಲಿ ಅವರದ್ದೇ ಆದ ಗೆಳೆಯರ ತಂಡದೊಂದಿಗೆ ಸಾಮಾಜಿಕ ದಾರ್ಮಿಕ ಸೇವೆ ಮಾಡುತ್ತಾ ಬಂದಿದ್ದಾರೆ, ಎಲ್ಲರನ್ನೂ ಗೌರವಿಸುವ ದೊಡ್ಡ ಗುಣ ಇವರ ತಂಡದ್ದು, ಬಡತನ - ಶೋಷಣೆಗೆ ಒಳಗಾದವರ ಬಗ್ಗೆ ವಿಶೇಷ ಕಾಳಜಿ ವಹಿಸುತ್ತಾರೆ ಯಾವುದೇ ಕಕ್ಷಿದಾರರಿಗೆ ತೊಂದರೆ ಆಗದಂತೆ ನೋಡುತ್ತಾರೆ, ಹಣದ ಹಪಾಹಪಿ ಇಲ್ಲ ಅಂತ ನಿನ್ನೆಯ ಅವರ ಕಾರ್ಯಕ್ರಮಕ್ಕೆ ಬಂದವರು ಹೇಳುತ್ತಿದ್ದರು.
  ಅವರು ಫೋನಿನಲ್ಲಿ ಕಾರ್ಯಕ್ರಮದಲ್ಲಿ ಯಾರ್ಯಾರಿಗೆ ಹಣ ನೀಡಬೇಕು ಅವರಿಗೆಲ್ಲ ಇವತ್ತೇ ಪೂರ್ಣ ಪಾವತಿ ಮಾಡಬೇಕು ಅಂತ ಅವರ ಗೆಳೆಯರಿಗೆ ನಿರ್ದೇಶನ ನೀಡುತ್ತಿದ್ದರು ಈ ರೀತಿಯ ಶಿಸ್ತು ಈಗಿನ ಕಾಲದಲ್ಲಿ ಅಪರೂಪ.
  ವಾಸು ವಕೀಲರ ಈ ಎಲ್ಲಾ ಗುಣ ನನಗೆ ತುಂಬಾ ಇಷ್ಟವಾಯಿತು ಹಣ ಗಳಿಸುವುದಕ್ಕಿಂತ ಜನರ ಪ್ರೀತಿ ವಿಶ್ವಾಸ ಗಳಿಸುವುದು ಕಷ್ಟ ಆದರೆ ವಾಸು ಲಾಯರ್ ಎರಡನ್ನೂ ಗಳಿಸಿದ ನಮ್ಮ ಊರಿನ ಸಹೃದಯಿ ವ್ಯಕ್ತಿ ಆಗಿದ್ದಾರೆ ಇಂತವರು ಅಪರೂಪದಲ್ಲಿ ಅಪರೂಪ.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ