Skip to main content

Blog number 1571. ಆನಂದಪುರಂ ಇತಿಹಾಸ ಭಾಗ 28. ಬ್ರಿಟೀಶರ ಬಂಗಲೆಯ ರೂಪಾಂತರ

#ಆನಂದಪುರಂ_ಇತಿಹಾಸ_ಭಾಗ_28

#ಬ್ರಿಟೀಷರ_ಆಡಳಿತದ_ಪಳಿಯುಳಿಕೆಯಂತೆ_ಉಳಿದಿರುವ_ಆನಂದಪುರಂನ_ಪ್ರವಾಸಿ_ಮಂದಿರ.

#ಸುಮಾರು_ಮೂರು_ಶತಮಾನಕ್ಕೂ_ನಂಟು_ಇದೆ.

#ಆನಂದಪುರಂ_ತಾಲ್ಲೂಕ್_ಆಗಿದ್ದಾಗ_ಇದು_ತಾಲ್ಲೂಕ್_ಕಚೇರಿ.

#ಸಾಗರ_ತಾಲ್ಲೂಕಿನ_ಮೊದಲ_ನ್ಯಾಯಾಲಯ_ಕಚೇರಿ_ಇದಾಗಿತ್ತು.

#ಒಂದು_ಕಾಲದ_ಶ್ರೀಮಂತ_ಬ್ರಿಟೀಶ್_ಬಂಗ್ಲೆ

#ಇಲ್ಲಿ_ತಂಗಿದ್ದ_ಮಹನೀಯರು_ಅನೇಕರು.


  ಬ್ರಿಟಿಷರು ಯಡೇಹಳ್ಳಿಯ ದಟ್ಟ ಅರಣ್ಯದ ಮಧ್ಯೆ ಎತ್ತರದ ಪ್ರದೇಶದಲ್ಲಿ ಪೂರ್ವಾಭಿಮುಖವಾಗಿ ಕಟ್ಟಿದ ಈ ಸುಸಜ್ಜಿತವಾದ ಬಂಗ್ಲೆ ಆ ಕಾಲದಲ್ಲಿ A ಗ್ರೇಡಿನದ್ದಂತೆ.
  ಪೂರ್ವದ ಎಡಗಡೆ ತಾವರೆಕೆರೆ ಬಲ ಬಾಗದಲ್ಲಿ ಶಿವಮೊಗ್ಗ ಕೊಲ್ಲೂರು ಹೆದ್ದಾರಿ ಇದೆ, ಕಾಡುಪ್ರಾಣಿಗಳು ನೀರು ಕುಡಿಯಲು ಬಂದಾಗ ಬ್ರಿಟೀಷ್ ದೊರೆಗಳು ಶಿಕಾರಿ ಮಾಡಲು ಅನುಕೂಲ ಇತ್ತು.
  ಸುಮಾರು 5 ಎಕರೆ ಪ್ರದೇಶದ ಮಧ್ಯದಲ್ಲಿ ಅತ್ಯುತ್ತಮ ಎರೆಡು ಬೆಡ್ ರೂಂನ (ಅಟ್ಯಾಚ್ ಟಾಯಲೆಟ್ ಇರುವ) ಸೂರ್ಯೋದಯ ಮತ್ತು ಸೂಯಾ೯ಸ್ಥಗಳ ವೀಕ್ಷಣೆಗೆ ವರಾಂಡಗಳಿರುವ, ಸುಸಜ್ಜಿತ ಅಡುಗೆ ಮನೆ ಮತ್ತು ಹಾವು ಇತ್ಯಾಧಿ ಸರಿಸೃಪಗಳಿಂದ ರಕ್ಷಣೆಗಾಗಿ ಸುಮಾರು 4 ಅಡಿ ಎತ್ತರದ ಅಡಿಪಾಯದ ವಿಷಾಲವಾದ ಮೆಟ್ಟಿಲುಗಳ ಈ ಸುಸಜ್ಜಿತ ಕಟ್ಟಡದ ಉತ್ತರಕ್ಕೆ ತೆರೆದ ಬಾವಿ ಅದರ ಸಮೀಪ ಬಂಗ್ಲೆ ಕಾವಲುಗಾರನ ಮನೆ ನಿರ್ಮಿಸಿದ್ದಾರೆ.
  ಇಲ್ಲಿ ತಂಗಿ ವಿಹರಿಸಲು ಬ್ರಿಟಿಷರಿಗೆ ಇದು ಸೊಗಸಾದ ಸುಸಜ್ಜಿತವಾದ ತಂಗುದಾಣವಾಗಿ ನೂರಾರು ವರ್ಷ ಬಳಕೆ ಆಗಿತ್ತು.
  1970ರವರೆಗೆ ಇದೊಂದು ಪ್ರೇಕ್ಷಣಿಯ ಸ್ಥಳ ಆಗಿತ್ತು. ಸುತ್ತಲೂ ಮಣ್ಣಿನ ಅಂಗಳ, ಕಾವಲುಗಾರರ ಮನೆತನಕ ರಸ್ತೆಯ ಇಕ್ಕೆಲದಲ್ಲಿ ನಾಗಸಂಪಿಕೆ ಮರ, ಬಂಗಲೆ ಎದುರಲ್ಲಿ ಸಣ್ಣ ಗಾಳಿಮರದ ತೋಪು ಅದರ ಮಧ್ಯ ಆನಂದಪುರಂನ ಕೋಟೆ ಒಳಗಿನ ಪಿರಂಗಿ, ವಿಗ್ರಹ ಇತ್ಯಾದಿ ಜೋಡಿಸಿಟ್ಟಿದ್ದರು.
   ಶರಾವತಿ ವಿದ್ಯುತ್ ಉತ್ಪಾದನೆ ಶುರು ಮಾಡುವಾಗ ಮಳೆ ಮಾಪಕ ಯ೦ತ್ರ ಇಲ್ಲಿ ಸ್ಥಾಪಿಸಿದ್ದರು.
  ಇಲ್ಲಿನ ಸುಂದರವಾದ ಉದ್ಯಾನವನ ನಿರ್ವಣೆಯ ಮಾಲಿ ಕೆಲಸ ಇಲ್ಲಿನ ಮೇಟಿಯದ್ದೇ ಆಗಿತ್ತು, ಬಾವಿಯಿಂದ ಗಿಡಗಳಿಗೆ ನೀರುಣಿಸಲು ಇಂಗ್ಲೆಂಡ್ ನಿಂದ ತಂದಿದ್ದ ಒಂಟಿ ಚಕ್ರದ ಕೈಗಾಡಿ ಇತ್ತು.
  ಸಂಜೆಯ ಹೊತ್ತಲ್ಲಿ ಮತ್ತು ಬೆಳಗಿನ ಸೂಯೋ೯ದಯದಲ್ಲಿ ವಾಯುವಿಹಾರಕ್ಕೆ ಹೇಳಿ ಮಾಡಿಸಿದ ಸ್ಥಳ ಇದಾಗಿತ್ತು.
  ನಂತರ ಇಲ್ಲಿ ಇಟ್ಟಿದ್ದ ಪಿರಂಗಿ ಇತ್ಯಾದಿಗಳು ಕಳ್ಳರಿಂದ ರಕ್ಷಿಸಲಿಕ್ಕಾಗಿ ಸಾಂಗ್ಲಿಯಾನರು SP ಆಗಿದ್ದಾಗ  ಶಿವಮೊಗ್ಗದ ಜಿಲ್ಲಾ ಪೋಲಿಸ್ ಕಚೇರಿ ಎದರು ತೆಗೆದುಕೊಂಡು ಸ್ಥಾಪಿಸಿದ್ದಾರೆ.
  ಸಾಗರ ತಾಲ್ಲೂಕ್ ಕೇಂದ್ರವಾಗಿ ಬೆಳೆಯುತ್ತಾ ಇಲ್ಲಿನ ಬ್ರಿಟೀಷರ ಈ ಬಂಗ್ಲೆ ನಿರಾಸಕ್ತಿಗೆ ಒಳಗಾಗಿ ಹಿಂದಿನ ಎಲ್ಲಾ ವಿಜೃಂಬಣೆ ಕಳೆದುಕೊಂಡು ಒಂದು ಕಟ್ಟಡದ ರೀತಿ ಉಳಿದಿದೆ, ಆಗಾಗ್ಗೆ ದುರಸ್ತಿ ಇತ್ಯಾದಿ ನಡೆಯುತ್ತದೆ ಆದರೆ ಬ್ರಿಟೀಷರ ದೂರದೃಷ್ಠಿ ಇಲ್ಲದ ಸ್ವಾತಂತ್ರ ಭಾರತದ ಸರ್ಕಾರಿ ಇಂಜಿನಿಯರ್ ಗಳಿಂದ ಸುಂದರವಾಗಿದ್ದ ಇದರ ಸೌಂದರ್ಯ ಈಗ ಉಳಿದಿಲ್ಲ.
   1890ರಲ್ಲಿ ಆನಂದಪುರಂ ತಾಲ್ಲೂಕ್ ಆಗಿತ್ತು (ಈಗ ಸಾಗರ ತಾಲ್ಲೂಕ್ ಸೇರಿದ ಹೋಬಳಿ) ಆಗ ಈ ಬಂಗ್ಲೆ ತಾಲ್ಲೂಕ್ ಕಚೇರಿ ಆಗಿತ್ತು.
   ನಂತರ ಇದು ಸಾಗರ ತಾಲ್ಲೂಕಿನ ಮೊದಲ ನ್ಯಾಯಾಲಯ ಆಗಿ ಕಾರ್ಯನಿರ್ವಹಿಸಿತ್ತು.
  ಅನಂದಪುರಂನ ಕ್ರಿಸ್ತ ಅನುಯಾಯಿಗಳ ಭಾನುವಾರದ ಪ್ರಾರ್ಥನೆಯ ತಾತ್ಕಾಲಿಕ ಚರ್ಚ್ ಕೂಡ ಇದೇ ಆಗಿತ್ತು (ಚರ್ಚ್ ನಿರ್ಮಾಣದ ತನಕ) .
  ಇದೇ ಕಟ್ಟಡ ಶರಾವತಿ ನದಿ ಮುಳುಗಡೆ ರೈತರ ಪರಿಹಾರದ ವಿಶೇಷ ಕೋಟ್೯ ಆಗಿತ್ತು.
    ಆಗ ರೈತರ ಪರಿಹಾರ ನಿಧಿಗಾಗಿ ಬಂಗಾರಪ್ಪನವರು (ಮಾಜಿ ಮುಖ್ಯಮಂತ್ರಿ) ಕೆಲ  ಕಾಲ ಕೋರ್ಟ್ ಕಲಾಪದಲಿ ವಕೀಲರಾಗಿ ಭಾಗವಹಿಸಿದ್ದರು, ಆಗ ಅವರು ಕಣ್ಣೂರಿನ ಅಡಿಗೆ ಮನೆಯವರಲ್ಲಿ (ಕನ್ನಡ ಸಂಘದ ಮಾಜಿ ಅಧ್ಯಕ್ಷರಾದ ಕೆ.ಟಿ.ತಿಮ್ಮೇಶ್ ರ ಮೂಲ ಮನೆ) ಅತಿಥಿ ಆಗಿ ಉಳಿದಿದ್ದರು ಮತ್ತು ಆಗ ಅವರ ಸವಾರಿ ಹೊಸ ಸೈಕಲ್ ನಲ್ಲಿ ಅಂತ ನೋಡಿದ ಹಿರಿಯರು ನೆನಪಿಸುತ್ತಾರೆ.
   ಇಲ್ಲಿ ಪ್ರಖ್ಯಾತ ನರಭಕ್ಷಕ ಶಿಕಾರಿಗಾರ ಮತ್ತು ಬರಹಗಾರ ಕೆನೆತ್ ಅಂಡರ್ಸನ್, ದೀವಾನರಾಗಿದ್ದ ವಿಶ್ವೇಶ್ವರಯ್ಯ ಆದಿ ಆಗಿ ಅನೇಕ ನಾಡಿನ ಪ್ರಖ್ಯಾತರು ಇಲ್ಲಿ ವಿಶ್ರಮಿಸಿದ್ದ ದಾಖಲೆ ಹೊಂದಿದ ಈ ಬ್ರಿಟೀಷ್ ಬ೦ಗ್ಲೆ ನಂತರ ಅಧಿಕಾರಿಗಳಿಗೆ ಅವರ ಸರ್ಕಾರಿ ಕಾರ್ಯ ನಿಮಿತ್ತದ ಮಧ್ಯೆವಿಶ್ರಾಂತಿ ಪಡೆಯಲು ತಂಗಲು ಇನ್ಸ್‌ಪೆಕ್ಷನ್ ಬಂಗ್ಲೆ ಆಗಿ ನಂತರ PWD ಇಲಾಖೆ ಪ್ರವಾಸಿ ಮಂದಿರ ಆಗಿ ಪರಿವರ್ತಿಸಿದೆ.
  ನಂತರ ಇದರ ಎದುರೆ ಶಿವಮೊಗ್ಗ ತಾಳಗುಪ್ಪ ರೈಲು ಮಾರ್ಗ ಆಯಿತು, ಅದರ ಇನ್ನೊಂದು ಭಾಗದಲ್ಲಿ ಕ್ಯಾಥೋಲಿಕ್ ಚರ್ಚ್ ಆಯಿತು, ಆನಂದಪುರಂ ಹೊಸನಗರ  ರಸ್ತೆ ಡಾಂಬರೀಕರಣ ಆಯಿತು, ಎದುರಿಗೆ ಯಡೇಹಳ್ಳಿ ಗ್ರಾ.ಪಂ. ಕಚೇರಿ ಆಗಿದೆ, ಸುತ್ತಲೂ ಜನ ವಸತಿ ಬೆಳೆದು ಆ ಕಾಲದ ಏಕಾಂತತೆ, ವಾಯು ವಿಹಾರ ತಾಣ, ಉದ್ಯಾನವನ ಯಾವುದು ಈಗ ಇಲ್ಲವಾಗಿದೆ ಆ ಕಾಲದ ರಾಜ ವೈಭೋಗ ನೋಡಿದವರಿಗೆ ಕೇಳಿದವರಿಗೆ ಬ್ರಮನಿರಸನ ಆಗುವಂತ ಒಂದು ಸರ್ಕಾರಿ ಕಟ್ಟಡ ಇರುವ ಪ್ರದೇಶ ಆಗಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...