Skip to main content

Blog number 1587. ಕುಪ್ಪಳ್ಳಿ ಕುವೆಂಪು ಮನೆಯಿಂದ ಇಂಗ್ಲೇಂಡಿನ ಶೇಕ್ಸ್ಪಿಯರ್ ಮನೆವರೆಗೆ ಕೊಳಚಗಾರು ಮನೆಯ ಪತ್ರಕರ್ತ ಡಿ.ಪಿ. ಸತೀಶ್ ಪಯಣದ ಹಿಂದಿದೆ ಅವರ ಶ್ರಮ .

#ಕುಪ್ಪಳ್ಳಿ_ಕುವೆಂಪು_ಮನೆಯಿಂದ

#ಲಂಡನ್_ಶೇಕ್ಸಪಿಯರ್_ಮನೆಗೆ

#ಸಾಗರ_ತಾಲ್ಲೂಕಿನ_ತಲವಾಟ_ಗ್ರಾಮಪಂಚಾಯತನ_ಕೊಳಚಗಾರು_ಮನೆಯ_ಡಿಪಿ_ಸತೀಶ್.


  ನಿನ್ನೆ ಡಿ.ಪಿ. ಸತೀಶ್ ಲಂಡನ್ ನಿಂದ 84 ಮೈಲು ದೂರದ ಸ್ವಾರ್ಟ್ ಪೋರ್ಡ್ - ಅಪಾನ್-ಅವೋನ್ ಇಂಗ್ಲೆಂಡ್ ನಲ್ಲಿರುವ ಹ್ಯಾಮ್ಲೆಟ್ ನಾಟಕ ಪ್ರಸಿದ್ದಿಯ ಶೇಕ್ಸ್ ಪಿಯರ್ ಹುಟ್ಟಿದ ಮನೆಗೆ ಹೋಗಿದ್ದರು, ಈ ಮನೆಯನ್ನು ಸಂರಕ್ಷಿಸಿರುವ ಟ್ರಸ್ಟಿಗಳು ಇವರ ಗೆಳೆಯರು ಅಲ್ಲಿ ಇವರ ಭಾಷಣ ಕೂಡ ಅವರು ವ್ಯವಸ್ಥೆ ಮಾಡಿದ್ದರು, ಇವರ ಟಾಕ್ ಅಲ್ಲಿನ ಸ್ಥಳಿಯ ಶೇಕ್ಸ್ ಪಿಯರ್ ಅಭಿಮಾನಿಗಳಿಗೆ ಟ್ರಸ್ಟಿಗಳಿಗೆ ತುಂಬಾ ಇಷ್ಟವಾಯಿತು ಅಂತ ಅವರು ತಿಳಿಸಿದಾಗ ನನಗೂ ಸಂತೋಷವಾಯಿತು.
  ಡಿ.ಪಿ. ಸತೀಶರ ಅಗಾದ ಓದು ಮತ್ತು ನೆನಪಿನ ಶಕ್ತಿ ಅವರನ್ನು ಜಾಗತಿಕ ಮಟ್ಟದಲ್ಲಿ ಒಯ್ಯುತ್ತಿದೆ.
  ಅನೇಕರು ಯುರೋಪು ಪ್ರವಾಸದಲ್ಲಿ ಲಂಡನ್ ನಲ್ಲಿ ತಂಗುತ್ತಾರೆ ಆದರೆ ಮಹಾನ್ ನಾಟಕಗಳ ಕತೃ ಶೇಕ್ಸ್ ಪಿಯರ್ ಮರೆಯುತ್ತಾರೆ.
  ಕಳೆದ ವರ್ಷ ಮೈಸೂರು - ಬೆಂಗಳೂರು - ತಾಳಗುಪ್ಪ ಎಕ್ಸಪ್ರೆಸ್ ರೈಲಿಗೆ ಕುವೆಂಪು ಎಕ್ಸಪ್ರೆಸ್ ನಾಮಕರಣಕ್ಕೆ ನಮ್ಮ ತಾಲೂಕಿನವರೇ ಆದ ಪತ್ರಕರ್ತ TV - 18 ದಕ್ಷಿಣ ಭಾರತ, ಶ್ರೀಲಂಕಾ ಮತ್ತು ಮಾರಿಷಸ್‌ ಉಸ್ತುವಾರಿ ಡಿ.ಪಿ.ಸತೀಶ್ ಕಾರಣಕರ್ತರು ಈ ಕಾರಣದಿಂದ ಅವರಿಗೆ ಇಷ್ಟ ಇಲ್ಲದಿದ್ದರೂ ಶಿವಮೊಗ್ಗ ಜಿಲ್ಲೆಯ ಕುವೆಂಪು ಅಭಿಮಾನಿಗಳ ಪರವಾಗಿ ನಾನು ಸನ್ಮಾನಿಸಿದ್ದೆ.
  ಈಗ ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ಕೂಡ ಕುವೆಂಪು ಹೆಸರು ಇಡಲಾಗಿದೆ.
  ಸಾಗರ ತಾಲ್ಲೂಕಿನ ತಲವಾಟ ಗ್ರಾಮ ಪಂಚಾಯಿತಿಯ ಇಡುವಾಣಿ ಸಮೀಪದ (ಜೋಗ ಜಲಪಾತ ಸಮೀಪದ) ಶರಾವತಿ ನದಿಯ ದಂಡೆಯ ಕೊಳಚಗಾರಿನ ಮನೆಯ ಡಿ.ಪಿ ಸತೀಶ್ ಸ್ಥಳಿಯ ಸರ್ಕಾರಿ ಕನ್ನಡ ಮಾದ್ಯಮ ಪ್ರಾಥಮಿಕ ಶಾಲೆ ನಂತರ ತಾಳಗುಪ್ಪದ ನಲಂದಾ ಪ್ರೌಡ ಶಾಲೆ, ಸಾಗರದ ಎಲ್ ಬಿ ಕಾಲೇಜಿನಲ್ಲಿ ಪದವಿ ಪಡೆದು ನಂತರ ಚೆನೈನಲ್ಲಿ ಪತ್ರಿಕೋದ್ಯಮದಲ್ಲಿ ಬಂಗಾರದ ಪದಕ ಪಡೆದ ಪ್ರತಿಭಾವಂತರು.
  ಆದ್ದರಿಂದ ಶರಾವತಿ ದಂಡೆಯ ಕೊಳಚಗಾರು ಮನೆಯ ಡಿ.ಪಿ. ಸತೀಶ್ ಕುಪ್ಪಳ್ಳಿ ಕುವೆಂಪು ಮನೆಯಿಂದ ಲಂಡನ್ ಶೇಕ್ಸ್ ಪಿಯರ್ ಮನೆವರೆಗಿನ ಅವರ ಜರ್ನಿ ಒಂದು ಸಾಹಸವೇ ಆಗಿದೆ ಈ ಸಾಹಸಿ ನಮ್ಮ ತಾಲ್ಲೂಕಿನ ನನ್ನ ಗೆಳೆಯರೆಂಬುದೇ ನನಗೆ ಹೆಮ್ಮೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...