Skip to main content

Blog number 1605. ಮಲೆನಾಡಿನ ಭತ್ತದ ಗದ್ದೆಗಳು ಬೀಳು ಬಿಡುವುದರ ಅಸಲಿ ಕಾರಣ ಏನು? ಇದನ್ನು ಪುನಶ್ಚೇತನ ಮಾಡಲು ಸಾಧ್ಯವೇ? 1999ರಲ್ಲೇ ರೈತ ನಾಯಕ ಪ್ರೋಪೆಸರ್ ನಂಜುಂಡಸ್ವಾಮಿ ಎಚ್ಚರಿಸಿದ್ದರು.

#ಕೃಷಿ_ತಜ್ಞರಾದ_ನಾಗೇಂದ್ರಸಾಗರ್_ಮಳೆಆಶ್ರಿತ_ಬೀಳು_ಜಮೀನಿನ_ಪುನಶ್ಚೇತನದ_ಪೋಸ್ಟ್

#ಇಂತಹ_ಪರಿಸ್ಥಿತಿ_ಬಗ್ಗೆ_1999ರಲ್ಲಿ_ಪ್ರೋಪೆಪರ್_ನಂಜು೦ಡಸ್ವಾಮಿ_ಉಹಿಸಿದ್ದರು

#ಮಲೆನಾಡಿನ_ಭತ್ತದ_ಗದ್ದೆ_ಪುನಶ್ಚೇತನ_ಸಾಧ್ಯವಾ?

#ವಿಶ್ವಸಂಸ್ಥೆ_2017ರಿಂದ_ಆಹಾರ_ಬೆಳೆಯುವ_ಕೋಟ್ಯಾದೀಶ_ಆಗುತ್ತಾನೆ_ಎಂಬ_ಭವಿಷ್ಯ_ನಿಜವಾದೀತಾ?

  ಕಷ್ಟಸಾಧ್ಯ... ಭತ್ತದ ಕೃಷಿ ವಿಧಾನ ಹೆಚ್ಚು ಮಾನವ ಶಕ್ತಿ ಕೇಳುತ್ತದೆ, ರೈತ ಗೊಬ್ಬರಕ್ಕೆ ಪರಾವಲಂಬಿ, ರಾಸಾಯನಿಕ ಗೊಬ್ಬರದ ಬೆಲೆ ಜಾಸ್ತಿ, ಭತ್ತ ಬೇಸಾಯಕ್ಕೆ ಹೆಚ್ಚು ನೀರು ಬಳಕೆ ಇಷ್ಟೆಲ್ಲ ಭರಿಸಿದರೂ ಇಳುವರಿ ಮತ್ತು ಗುಣಮಟ್ಟ ಗ್ಯಾರಂಟಿ ಇಲ್ಲ, ಕೈಗೆ ಸಿಕ್ಕ ಪಸಲು ಮಾರಿದರೆ ಎಕರೆವಾರು ನಷ್ಟ ಹೊರತು ಲಾಭವಿಲ್ಲ.
   ಇದನ್ನು 1999ರಲ್ಲೇ ರೈತ ನಾಯಕ ಪ್ರೋಪೆಸರ್ ನಂಜುಂಡ ಸ್ವಾಮಿ ಹೇಳಿದ್ದರು " ಈಗ ನಮ್ಮ ರೈತನ ಕುಟುಂಬ ತಾನೇ ಸ್ವತಃ ಹೊಲದಲ್ಲಿ ಕೃಷಿ ಮಾಡುತ್ತಾನೆ ಅವನದ್ದೇ ಎತ್ತು-ಗಾಡಿ - ಗೊಬ್ಬರ ಲಾಭ ನಷ್ಟ ಲೆಕ್ಕ ಮಾಡದೇ ಭೂಮಿ ಹಾಳು ಬಿಡಬಾರದೆಂಬ ವಂಶಪಾರಂಪರ್ಯವಾಗಿ ನಡೆದು ಬಂದ ನಂಬಿಕೆ ..... ಆದರೆ ಮುಂದಿನ ದಿನಗಳಲ್ಲಿ ರೈತನ ಮಗ ಕಂಪ್ಯೂಟರ್ ಬಳಸುತ್ತಾನೆ, ಪ್ರತಿಯೊಂದನ್ನು ಲೆಖ್ಖಾಚಾರ ಇಡುತ್ತಾನೆ ಈಗಲೆ ಒಂದು ಎಕರೆಗೆ ಎರೆಡು ಸಾವಿರದ ಐನೂರು ನಷ್ಟ (1999 ರ ಅವರ ಮಾತು) ಅದ್ದರಿ೦ದ ಭತ್ತದ ಕೃಷಿ ಮಾಡುವುದು ಬಿಡುತ್ತಾನೆ ....

  https://arunprasadhombuja.blogspot.com/2023/04/blog-number-1437-1999.html

    ಈಗಿನ ಪರಿಸ್ಥಿತಿ ಅವರ 1999 ರ ಹೇಳಿಕೆಯ ಕನ್ನಡಿ ಆಗಿದೆ.
  ಮುಂದಿನ ದಿನಗಳಲ್ಲಿ ಭತ್ತಕ್ಕೆ ಹೆಚ್ಚು ಬೆಲೆ ಬಂದರೆ ಮತ್ತೆ ಭತ್ತದ ಕೃಷಿ ಪ್ರಾರಂಭ ಆಗಬಹುದು ಒಂದು ಕ್ವಿಂಟಾಲ್ ಬೆಲೆ 2500 ಇದೆ ಅಕ್ಕಿ ಬೆಲೆ 40 ರಿಂದ ಪ್ರಾರಂಭ ಇದು ಭತ್ತದ ಬೆಲೆ 6000 ಆದರೆ ಭತ್ತದ ಕೃಷಿಕನಿಗೆ ಲಾಭ ಎಂದು ಎಣಿಸಿದರೆ ಆಗ ಅಕ್ಕಿ ಕನಿಷ್ಟ 100 ರೂಪಾಯಿ ಆಗಬೇಕು ಅದಕ್ಕೆ ಜನ ಸಾಮಾನ್ಯರು ಹೊಂದಿಕೆ ಸಾಧ್ಯವಾ ಎಂಬುದು ಕೂಡ ಯೋಚಿಸುವಂತಾದ್ದೆ.
  ವಿಶ್ವ ಸಂಸ್ಥೆ ಸಮೀಕ್ಷೆ ಪ್ರಕಾರ ಪ್ರಪ೦ಚದಾದ್ಯಂತ ಆಹಾರ ಧಾನ್ಯ ಬೆಳೆಯುವವನು 2017 ರಿಂದ ಕೋಟ್ಯಾದೀಶ ಆಗುತ್ತಾನೆ (ವಾಣಿಜ್ಯ ಬೆಳೆಗಾರನಂತೆ) ಎಂದಿದೆ ಬಹುಶಃ ಮುಂದಿನ 10 ವರ್ಷದಲ್ಲಿ ಭತ್ತ ಬೆಳೆಯುವ ರೈತನಿಗೆ ಬಂಪರ್ ಬಹುಮಾನ ಬರಬಹುದು, ಇದರಲ್ಲಿ ಸರ್ಕಾರಗಳಿಂದ ಯಾವ ನಿರೀಕ್ಷೆಯೂ ಭತ್ತ ಬೆಳೆಯುವ ರೈತನಿಗೆ ಪುನಶ್ಚೇತನ ನೀಡಲಾರದು.
  ಭತ್ತದ ಬೆಳೆಗೆ ಗರಿಷ್ಟ ದರ ಮಾರುಕಟ್ಟೆಯಲ್ಲಿ ಸಿಗುವಂತಹ ಕಾಲ ಬಂದಾಗ ಸಿನೋರಿಯ ಬದಲಾದೀತು.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ