Skip to main content

Blog number 1605. ಮಲೆನಾಡಿನ ಭತ್ತದ ಗದ್ದೆಗಳು ಬೀಳು ಬಿಡುವುದರ ಅಸಲಿ ಕಾರಣ ಏನು? ಇದನ್ನು ಪುನಶ್ಚೇತನ ಮಾಡಲು ಸಾಧ್ಯವೇ? 1999ರಲ್ಲೇ ರೈತ ನಾಯಕ ಪ್ರೋಪೆಸರ್ ನಂಜುಂಡಸ್ವಾಮಿ ಎಚ್ಚರಿಸಿದ್ದರು.

#ಕೃಷಿ_ತಜ್ಞರಾದ_ನಾಗೇಂದ್ರಸಾಗರ್_ಮಳೆಆಶ್ರಿತ_ಬೀಳು_ಜಮೀನಿನ_ಪುನಶ್ಚೇತನದ_ಪೋಸ್ಟ್

#ಇಂತಹ_ಪರಿಸ್ಥಿತಿ_ಬಗ್ಗೆ_1999ರಲ್ಲಿ_ಪ್ರೋಪೆಪರ್_ನಂಜು೦ಡಸ್ವಾಮಿ_ಉಹಿಸಿದ್ದರು

#ಮಲೆನಾಡಿನ_ಭತ್ತದ_ಗದ್ದೆ_ಪುನಶ್ಚೇತನ_ಸಾಧ್ಯವಾ?

#ವಿಶ್ವಸಂಸ್ಥೆ_2017ರಿಂದ_ಆಹಾರ_ಬೆಳೆಯುವ_ಕೋಟ್ಯಾದೀಶ_ಆಗುತ್ತಾನೆ_ಎಂಬ_ಭವಿಷ್ಯ_ನಿಜವಾದೀತಾ?

  ಕಷ್ಟಸಾಧ್ಯ... ಭತ್ತದ ಕೃಷಿ ವಿಧಾನ ಹೆಚ್ಚು ಮಾನವ ಶಕ್ತಿ ಕೇಳುತ್ತದೆ, ರೈತ ಗೊಬ್ಬರಕ್ಕೆ ಪರಾವಲಂಬಿ, ರಾಸಾಯನಿಕ ಗೊಬ್ಬರದ ಬೆಲೆ ಜಾಸ್ತಿ, ಭತ್ತ ಬೇಸಾಯಕ್ಕೆ ಹೆಚ್ಚು ನೀರು ಬಳಕೆ ಇಷ್ಟೆಲ್ಲ ಭರಿಸಿದರೂ ಇಳುವರಿ ಮತ್ತು ಗುಣಮಟ್ಟ ಗ್ಯಾರಂಟಿ ಇಲ್ಲ, ಕೈಗೆ ಸಿಕ್ಕ ಪಸಲು ಮಾರಿದರೆ ಎಕರೆವಾರು ನಷ್ಟ ಹೊರತು ಲಾಭವಿಲ್ಲ.
   ಇದನ್ನು 1999ರಲ್ಲೇ ರೈತ ನಾಯಕ ಪ್ರೋಪೆಸರ್ ನಂಜುಂಡ ಸ್ವಾಮಿ ಹೇಳಿದ್ದರು " ಈಗ ನಮ್ಮ ರೈತನ ಕುಟುಂಬ ತಾನೇ ಸ್ವತಃ ಹೊಲದಲ್ಲಿ ಕೃಷಿ ಮಾಡುತ್ತಾನೆ ಅವನದ್ದೇ ಎತ್ತು-ಗಾಡಿ - ಗೊಬ್ಬರ ಲಾಭ ನಷ್ಟ ಲೆಕ್ಕ ಮಾಡದೇ ಭೂಮಿ ಹಾಳು ಬಿಡಬಾರದೆಂಬ ವಂಶಪಾರಂಪರ್ಯವಾಗಿ ನಡೆದು ಬಂದ ನಂಬಿಕೆ ..... ಆದರೆ ಮುಂದಿನ ದಿನಗಳಲ್ಲಿ ರೈತನ ಮಗ ಕಂಪ್ಯೂಟರ್ ಬಳಸುತ್ತಾನೆ, ಪ್ರತಿಯೊಂದನ್ನು ಲೆಖ್ಖಾಚಾರ ಇಡುತ್ತಾನೆ ಈಗಲೆ ಒಂದು ಎಕರೆಗೆ ಎರೆಡು ಸಾವಿರದ ಐನೂರು ನಷ್ಟ (1999 ರ ಅವರ ಮಾತು) ಅದ್ದರಿ೦ದ ಭತ್ತದ ಕೃಷಿ ಮಾಡುವುದು ಬಿಡುತ್ತಾನೆ ....

  https://arunprasadhombuja.blogspot.com/2023/04/blog-number-1437-1999.html

    ಈಗಿನ ಪರಿಸ್ಥಿತಿ ಅವರ 1999 ರ ಹೇಳಿಕೆಯ ಕನ್ನಡಿ ಆಗಿದೆ.
  ಮುಂದಿನ ದಿನಗಳಲ್ಲಿ ಭತ್ತಕ್ಕೆ ಹೆಚ್ಚು ಬೆಲೆ ಬಂದರೆ ಮತ್ತೆ ಭತ್ತದ ಕೃಷಿ ಪ್ರಾರಂಭ ಆಗಬಹುದು ಒಂದು ಕ್ವಿಂಟಾಲ್ ಬೆಲೆ 2500 ಇದೆ ಅಕ್ಕಿ ಬೆಲೆ 40 ರಿಂದ ಪ್ರಾರಂಭ ಇದು ಭತ್ತದ ಬೆಲೆ 6000 ಆದರೆ ಭತ್ತದ ಕೃಷಿಕನಿಗೆ ಲಾಭ ಎಂದು ಎಣಿಸಿದರೆ ಆಗ ಅಕ್ಕಿ ಕನಿಷ್ಟ 100 ರೂಪಾಯಿ ಆಗಬೇಕು ಅದಕ್ಕೆ ಜನ ಸಾಮಾನ್ಯರು ಹೊಂದಿಕೆ ಸಾಧ್ಯವಾ ಎಂಬುದು ಕೂಡ ಯೋಚಿಸುವಂತಾದ್ದೆ.
  ವಿಶ್ವ ಸಂಸ್ಥೆ ಸಮೀಕ್ಷೆ ಪ್ರಕಾರ ಪ್ರಪ೦ಚದಾದ್ಯಂತ ಆಹಾರ ಧಾನ್ಯ ಬೆಳೆಯುವವನು 2017 ರಿಂದ ಕೋಟ್ಯಾದೀಶ ಆಗುತ್ತಾನೆ (ವಾಣಿಜ್ಯ ಬೆಳೆಗಾರನಂತೆ) ಎಂದಿದೆ ಬಹುಶಃ ಮುಂದಿನ 10 ವರ್ಷದಲ್ಲಿ ಭತ್ತ ಬೆಳೆಯುವ ರೈತನಿಗೆ ಬಂಪರ್ ಬಹುಮಾನ ಬರಬಹುದು, ಇದರಲ್ಲಿ ಸರ್ಕಾರಗಳಿಂದ ಯಾವ ನಿರೀಕ್ಷೆಯೂ ಭತ್ತ ಬೆಳೆಯುವ ರೈತನಿಗೆ ಪುನಶ್ಚೇತನ ನೀಡಲಾರದು.
  ಭತ್ತದ ಬೆಳೆಗೆ ಗರಿಷ್ಟ ದರ ಮಾರುಕಟ್ಟೆಯಲ್ಲಿ ಸಿಗುವಂತಹ ಕಾಲ ಬಂದಾಗ ಸಿನೋರಿಯ ಬದಲಾದೀತು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...