Skip to main content

Blog number 1608. ಚಿಪ್ಪಳಿ ಗೋಪಾಲ ಕೃಷ್ಣರಾಯರ ಸ್ಮರಣೆ

ಶ್ರದ್ದಾ೦ಜಲಿಗಳು

#ಸಜ್ಜನ_ಸಂಪನ್ನ_ಮರೆಯಲಾರದ_ವ್ಯಕ್ತಿತ್ವದ_ಚಿಪ್ಪಳಿ_ಗೋಪಾಲಕೃಷ್ಣರಾವ್

 
   1991ರಲ್ಲಿ ಆನಂದಪುರಂ ಕನ್ನಡ ಯುವಕ ಸಂಘ ಡಾಕ್ಟರ್ ಮೋದಿಯವರ ಉಚಿತ ಕಣ್ಣಿನ ಚಿಕಿತ್ಸಾ ಶಿಭಿರ ಹಮ್ಮಿಕೊಂಡಿತ್ತು ಅದಕ್ಕಾಗಿ ಪೂರ್ವ ತಯಾರಿ ಸಭೆಯಲ್ಲಿ ಮುಂಬಾಳಿನ ಗೋಕುಲ್ ಪಾರಂನ ಪಾದರ್ ಜೋಸ್ ಅಧ್ಯಕ್ಷರನ್ನಾಗಿ ನನ್ನನ್ನ ಉಪಾಧ್ಯಕ್ಷ ನಾಗಿ ಆಯ್ಕೆ ಮಾಡಿ ಶಿಬಿರದ ಯಶಸ್ವಿಗೆ ಬೇಕಾದ ಸಂಪನ್ಮೂಲ ಕ್ರೂಡಿಕರಿಸುವ ಜವಾಬ್ದಾರಿ ಕೊಟ್ಟಿದ್ದರು.
   ಆಗೆಲ್ಲ ಕಣ್ಣಿನ ಪೊರೆ ಬಂದು ಹತ್ತು ಇಪ್ಪತ್ತು ವರ್ಷ ಆದವರು ಇರುತ್ತಿದ್ದರು ಅವರು ಅವರ ಜೊತೆ ಇಬ್ಬರು ಬರುತ್ತಿದ್ದರು ಅವರಿಗೆ ಊಟ ವಸತಿ ವ್ಯವಸ್ಥೆ ಸುಮಾರು 7 ದಿನ ಮಾಡಬೇಕಾಗಿತ್ತು ಮತ್ತು ಮೋದಿಯವರ ಕಣ್ಣಿನ ಆಪರೇಷನ್ ಅಂದರೆ ತಮ್ಮ ಕಣ್ಣು ಸೇಪ್ ಎನ್ನುವಷ್ಟು ನಂಬಿಕೆ ಆದ್ದರಿಂದ ಶಿಬಿರಕ್ಕೆ ಪರೀಕ್ಷಿಸಿಕೊಳ್ಳಲು ಬರುವವರು ಎರೆಡು ಸಾವಿರದ ಹತ್ತಿರ ಇರುತ್ತಿದ್ದರು. 
  ಇವರಲ್ಲಿ ಪೊರೆ ತೆಗೆಯಬಹುದಾದ ಸುಮಾರು 300 ರಿಂದ 400 ಜನರಿಗೆ ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡುತ್ತಿದ್ದರು ಸುಮಾರು ಸಾವಿರ ಜನರಿಗೆ ಉಟೋಪಚಾರ ಅನಿವಾಯ೯.
  ಈ ನೇತ್ರ ಚಿಕಿತ್ಸೆಗಾಗಿ ದಾನಿಗಳನ್ನ ಸಂಪಕಿ೯ಸುವ ಸಂದಭ೯ದಲ್ಲಿ ಪಾದರ್ ಜೋಸ್ ನನ್ನನ್ನ ಅನೇಕ ಶ್ರೀಮಂತರ ಹತ್ತಿರ ಕರೆದೊಯ್ದಿದ್ದರು ನಾನು ರಾಜಕೀಯ ಕ್ಷೇತ್ರಕ್ಕೆ ಬಂದಿರಲಿಲ್ಲ ಹಾಗಾಗಿ ನನಗೆ ಹೆಚ್ಚಿನವರ ಪರಿಚಯ ಇರಲಿಲ್ಲ.
   ಅದೇ ಮೊದಲ ಸಾರಿ ನಾನು ಚಿಪ್ಪಳಿ ಗೋಪಾಲಕೃಷ್ಣ ರಾಯರ ನೋಡಿದ್ದು, ಎಪಿಎಂಸಿಯ ಅವರ ಸಿದ್ಧಿ ವಿನಾಯಕ ಅಡಿಕೆ ಮಂಡಿಯಲ್ಲಿ ಅವರ ವ್ಯವಹಾರದ ಗಡಿಬಿಡಿಯಲ್ಲಿಯೂ ಪಾದರ್ ಜೋಸ್ ರನ್ನ ಮತ್ತು ಅವರ ಜೊತೆ ಇದ್ದ ನಮ್ಮನ್ನೆಲ್ಲ ಕೂರಿಸಿ ವಿಚಾರಿಸಿ ಇದು ಒಳ್ಳೆಯ ಕೆಲಸ ಅಂತ ಹೇಳಿ 500 ರೂಪಾಯಿ ದೇಣಿಗೆ ನೀಡಿದ್ದರು! ಆ ನೇತ್ರ ಶಿಬಿರಕ್ಕೆ ಅವತ್ತಿನ ಕಾಲಕ್ಕೆ ಇದು ಅತಿ ದೊಡ್ಡ ದೇಣಿಗೆ.
  ಅವತ್ತಿನಿಂದ ಅವರನ್ನ ಗಮನಿಸುತ್ತಿದ್ದೆ ಅವರು ಯಾವತ್ತೂ ತಮ್ಮ ಸಜ್ಜನಿಕೆಗೆ ಚ್ಯುತಿ ಬರದಂತೆ ನಡೆದರು, ಅವರ ರೀತಿ ನೀತಿ,ನಡತೆ, ಮಾತು ಮತ್ತು ಅವರ ವೇಷ ಭೂಷಣ ಕೂಡ ಒಂದು ಚೂರು ಕಪ್ಪು ಚುಕ್ಕೆ ಇಲ್ಲದ ಸಂತೃಪ್ತ ಜೀವನ ನಡೆಸಿದರು.
  ಇವತ್ತು ಅವರಿಗೆ ಶ್ರದ್ದಾ೦ಜಲಿ ಅಪಿ೯ಸುವ ಸಂಭ೯ದಲ್ಲಿ ಅವರ ನನ್ನ ಮೊದಲ ಬೇಟಿ ನೆನಪಾಯಿತು.
  ದೇವರು ಅವರ ಆತ್ಮಕ್ಕೆ ಸದ್ಗತಿ ಸ್ವಗ೯ ಪ್ರಾಪ್ತಿ ನೀಡಲಿ ಎಂದು ದೇವರಲ್ಲಿ ಪ್ರಾಥಿ೯ಸುತ್ತಾ ಶ್ರದ್ಧಾ೦ಜಲಿ ಅಪಿ೯ಸುತ್ತೇನೆ.
ಕೆ. ಅರುಣ್ ಪ್ರಸಾದ್
ಮಾಜಿ ಜಿ.ಪಂ.ಸದಸ್ಯ
ಆನಂದಪುರಂ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...