Skip to main content

Blog number 1630. ಆನಂದಪುರಂ ಇತಿಹಾಸ ಸಂಖ್ಯೆ 102.ನಿತ್ಯ ಕನ್ನಡ ದಿನ ಪತ್ರಿಕೆ ಪ್ರೇಮಿ ಕೇರಳಿಗ ಕೆ. ಮೊಯಿದ್ದೀನ್ ಕಾಕ

ಕೇರಳಿಗ ಕೆ.ಮೊಹಿದೀನ್ ಕಾಕ ಕನ್ನಡದ ಎಲ್ಲಾ ಪತ್ರಿಕೆ ಪ್ರತಿ ನಿತ್ಯ ಓದಿಯೇ ಮುಂದಿನ ಕೆಲಸ ಮಾಡುವವರಾಗಿದ್ದರು.

  ಆನಂದಪುರಂಗೆ ಮೊದಲು ಬಂದ ಮಲೆಯಾಳದ ವಲಸಿಗರಲ್ಲಿ ಮೊಹಿದೀನ್ ಕಾಕ ಕನ್ನಡ ಕಲಿತು ಎಲ್ಲಾ ಪತ್ರಿಕೆ ಓದಿ ಮುಂದಿನ ಕೆಲಸ ಪ್ರಾರಂಬಿಸುವ ನಿತ್ಯ ಕಾಯಕ ಹೊಂದಿದ್ದರು.
    ಶುಂಠಿ ವ್ಯಾಪಾರಿ ರಾಮಟ್ಟ, ಪ೦ಚಾಯಿತಿ ಸದಸ್ಯರಾದ ಕರುಣಾಕರನ್, ಮಿಲ್ಟ್ರಿ ಹೋಟೆಲ್ ನಾಯರ್, ನಾಟಾ ಕೊಯ್ಯುವ ಲೋಹಿತಾಶ್ವಾ, ಲಾರಿ ಮಾಲಿಕರಾದ ಅಚ್ಚುತಾಚಾರ್, ಗಾರೆ ಕೆಲಸದ ಗೋಪಿ ಮೇಸ್ತ್ರಿ ಇವರೆಲ್ಲ ಅವರ ಬಾಷೆ, ಆಚರಣೆ ಮತ್ತು ಅವರ ಆಹಾರ ಪದ್ಧತಿಯಿಂದ ನಾವು ಚಿಕ್ಕವರಿದ್ದಾಗ ಬಿನ್ನರಾಗಿ ಕಾಣುತ್ತಿದ್ದರು, ಇವರೆಲ್ಲರ ಮಲೆಯಾಳಿ ಎಕ್ಸೆ೦ಟ್ ನ ಕನ್ನಡ ಬೇರೆ ಅಥ೯ ನೀಡಿ ನಗು ಸುರಿಸುತ್ತಿತ್ತು.
  ಮೊಯಿದಿನ್ ಕಾಕ ಆನಂದಪುರಂ ಬಸ್ ಸ್ಟ್ಯಾ೦ಡ್ ಹತ್ತಿರ ಅನೇಕ ವಷ೯ ಎಳನೀರು ಅಂಗಡಿ ನಡೆಸಿದರು ಆಗ ಎದುರಿನ ಸಕಾ೯ರಿ ಕನಕಮ್ಮಳ ಆಸ್ಪತ್ರೆಯಲ್ಲಿ ಒಳ್ಳೆಯ ಸೇವಾ ಮನೋಭಾವದ ವೈದ್ಯರು ಇರುತ್ತಿದ್ದರು ಇಡೀ ಆಸ್ಪತ್ರೆ ರೋಗಿಗಳಿಂದ ತುಂಬಿರುತ್ತಿತ್ತು, ರೋಗಿಗಳನ್ನ ನೋಡಲು ಬರುವ ಅಂದು ಬಂದುಗಳು ಕೈಯಲ್ಲಿ ಎಳನೀರು ಒಯ್ಯುವ ಪದ್ದತಿ ಇತ್ತು ಹಾಗಾಗಿ ಕಾಕನ ಎಳನೀರು ವ್ಯಾಪಾರ ಜೋರಿತ್ತು.
  ಮಕ್ಕಳನ್ನ ಕನ್ನಡ ಮಾಧ್ಯಮದಲ್ಲೇ ಓದಿಸಿದರು ಅವರೂ ಅತ್ಯುತ್ತಮವಾಗಿ ಓದಿದರು, ಮಗ ಮೊಹಮದ್ ನನ್ನ ಕ್ಲಾಸ್ ಮೇಟ್ ಅವರು ಸಾಗರದ ಪ್ರಖ್ಯಾತ ಉದ್ದಿಮೆದಾರ, ರಾಜಕಾರಣಿ ಆಗಿದ್ದ ಕೋಯಾ ಸಾಹೇಬರ ಅಳಿಯ ಈಗ ಕ್ಯಾಲಿಕಟ್ ನಲ್ಲಿದ್ದಾರೆ ಒಳ್ಳೆಯ ಬರಹಗಾರ ಕೂಡ.
   ಇತ್ತೀಚೆಗೆ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ.
  ಮಗಳು ಮರಿಯಮ್ ನನ್ನ ಊರಾದ ಯಡೇಹಳ್ಳಿಯ ಸಕಾ೯ರಿ ಶಾಲೆಯ ಮುಖ್ಯಪಾದ್ಯಾನಿ, ಕಾಕ ಎಲ್ಲಾ ವ್ಯವಹಾರದಿ೦ದ ನಿವೃತ್ತರಾಗಿ ನಿತ್ಯ ನಮಾಜು, ಎಲ್ಲಾ ಪತ್ರಿಕೆಗಳ ಓದು, ಚಹಾ ಸಿಗರೇಟು ಸೇದುತ್ತಾ ಸೈಕಲ್ ನಲ್ಲೆ ತಿರುಗುತ್ತಿದ್ದರು.
   ಕಮ್ಯುನಿಸ್ಟ್ ಸಿದ್ದಾoತ ಒಪ್ಪಿದ್ದ ಕಾಕ ಜಾತ್ಯಾತೀತ ಜನತಾದಳದ ಅಭಿಮಾನಿ ಮತ್ತು ಪ್ರಾಮಾಣಿಕ ಕಾಯ೯ಕತ೯ರಾಗಿದ್ದರು.ಪ್ರತಿ ಚುನಾವಣೆಯಲ್ಲಿ ಪ್ರತಿ ಮನೆಗೆ ಜಾತ್ಯಾತಿತ ಜನತಾದಳದ ಕರ ಪತ್ರ ತಲುಪಿಸುವ ಕೆಲಸ ಇವರದ್ದು ಈ ಸೇವೆಗೆ ಪಕ್ಷದ ಹಣ ಕೊಟ್ಟರೆ ನಯವಾಗಿ ನಿರಾಕರಿಸುತ್ತಿದ್ದರು.
  ಇವರ ಜೀವನದ ಕಥೆ ಒಮ್ಮೆ ಕೇಳಿದ್ದೆ, ಅವರು ಹೇಳಿದ ಪ್ರಕಾರ ಸಣ್ಣ ವಯಸ್ಸಲ್ಲಿ ತಂದೆ ತಾಯಿ ಕಳೆದುಕೊಳ್ಳುತ್ತಾರೆ, ಇವರ ಸಹೋದರ ಮತ್ತು ಸಹೋದರಿ ಕಷ್ಟದ ಜೀವನ ನಡೆಸಿದ್ದಾಗಿ ಹೇಳಿದ್ದರು.
  ಎಲ್ಲ ದಮ೯ದವರೊಂದಿಗೆ ಸಹಜೀವನ ಸಹಬಾಳುವೆ ನಡೆಸಿ ಕನ್ನಡಿಗರೆ ಕನ್ನಡ ಪತ್ರಿಕೆ ಓದದ ಈ ದಿನದಲ್ಲಿ ನಿತ್ಯ ಆನಂದಪುರಂ ಗೆ ಬರುವ ಎಲ್ಲಾ ಪತ್ರಿಕೆ ಓದಿ ವಿಮಶೆ೯ ಮಾಡುತ್ತಿದ್ದ ಕಾಕ ಒಂದು ನೆನಪು ಮಾತ್ರ.
  

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...