Skip to main content

Blog number 1631. ಕೊರಾನಾ ಲಾಕ್ ಡೌನ್ ಡೈರಿ 2020, ಲೆಟರ್ ನಂಬರ್- 49.(30- ಜೂನ್-2020)

ಕೊರಾನಾ ಲಾಕ್ ಡೌನ್ ಡೈರಿ -2020
 ಲೆಟರ್ ನಂಬರ್- 49.
   ದಿನಾ೦ಕ: 30-ಜೂನ್ -2020.

#ನಿಯ೦ತ್ರಣ_ಸಾಧ್ಯವಾಗದೆ_ಕೈಚೆಲ್ಲಿದ_ದೇಶ


    ಪ್ರಾರ೦ಭದಲ್ಲಿ ಭಾರತ ದೇಶವಾಸಿಗಳಿಗೆ ಇದ್ದ ಕೊರಾನಾ ವೈರಸ್ ಆತಂಕ 100 ದಿನದಲ್ಲಿ ಇಲ್ಲವಾಗಿದೆ.
    ಮಾಸ್ಕ್ ಇಲ್ಲ, ಸ್ಯಾನಿಟೈಸರ್ ಬೇಡ, ಸಾವ೯ಜನಿಕ ಅಂತರವೂ ಇಲ್ಲ ಇದರ ಜೊತೆ ಸಕಾ೯ರಗಳು ಲಾಕ್ ಡೌನ್ ಹಂತ ಹಂತವಾಗಿ ತೆರವು ಮಾಡುತ್ತಾ ಬಂದದ್ದೂ ಸೇರಿ ಭಾರತದಲ್ಲಿ ಕೊರಾನಾ ವಿಪರೀತವಾಗಿ ಹರಡಿದೆ.
   ಪ್ರಾರಂಭದಲ್ಲಿ 108 ದಿನ ಬೇಕಾಗಿತ್ತು 1 ಲಕ್ಷ ಜನರಿಗೆ ಹರಡಲು ಈಗ ಕೇವಲ 7 ದಿನಕ್ಕೆ ಲಕ್ಷ ದಾಟುತ್ತಿದೆ ಮುಂದಿನ ದಿನದಲ್ಲಿ 3 - 4 ದಿನಕ್ಕೆ ಲಕ್ಷ ಜನರಿಗೆ ತಲುಪುವ ಸಾಧ್ಯತೆ ಇದೆ.
    ಈಗಾಗಲೇ ಭಾರತ ಕೊರಾನಾ ನಾಗಾಲೋಟದಲ್ಲಿ ವಿಶ್ವದಲ್ಲಿ 4ನೇ ಸ್ಥಾನ ಪಡೆದಿದೆ.
    ನೂರಾರು ಆದೇಶ ಸಕಾ೯ರ ಮಾಡುವುದು ಬದಲಿಸುವುದು ಮಾಡುತ್ತಲೇ ಇದೆ ಆದರೆ ಸಾವ೯ಜನಿಕರಲ್ಲಿ ಈ ಕಾಯಿಲೆ ಬಗ್ಗೆ ಜನ ಜಾಗೃತಿ ಮೂಡಿಸಲು ವಿಫಲವಾಗಿದೆ.
  ಮಾಸ್ಕ್ ಕಡ್ಡಾಯ ಅಂದರೂ ಸಕಾ೯ರದ ಮಂತ್ರಿ ಮಹೋದಯರೇ ಉಲ್ಲ೦ಘಿಸಿದ ಮೇಲೆ ಸಾವ೯ಜನಿಕರು ಇನ್ನೇನು.
  ಸಾವ೯ಜನಿಕವಾಗಿ ಅಂತರ ಗಿಂತರ ಪಾಲಿಸಲಿಲ್ಲ, ಗುಟ್ಕಾ ಕಂಡ ಕಂಡಲ್ಲಿ ಉಗಿದರೆ ದಂಡ ಎಂಬ ಕಾನೂನು ಮೀರಿ ಉಗಿಯುವವರೂ ಹೆಚ್ಚಾದರು.
   ಇದೆಲ್ಲ ಒಂದು ತರ ಹೆಲ್ಮೆಟ್ ಇಲ್ಲದೆ ಬೈಕ್ ಓಡಿಸುವವರಿಗೆ ದಂಡ ಎಂಬಂತೆ.
  SSLC ಪರೀಕ್ಷೆ 8.5 ಲಕ್ಷ ವಿದ್ಯಾಥಿ೯ಗಳಿಗೆ ನಡೆಸುವ ಸಕಾ೯ರದ ತೀಮಾ೯ನ ಕೂಡ ಅನಾಹುತಕಾರಿ ಆಗಿತ್ತು.
   ಈಗ ಕೊರಾನಾ ವಿಜೃಂಬಿಸುತ್ತಿದೆ, ಸಕಾ೯ರದ ಹತ್ತಿರ ಚಿಕಿತ್ಸೆ ವ್ಯವಸ್ಥೆ ಸಾಧ್ಯವಾಗುತ್ತಿಲ್ಲ, ನಮ್ಮಲ್ಲಿನ ವ್ಯವಸ್ಥೆಗೆ ಸವಾಲು ಹಾಕುವಂತೆ ರೋಗ ಹರಡುತ್ತಿದೆ.
  ಅದ೯ ವಷ೯ ಆದರೂ ಲಸಿಕೆ ಕಂಡು ಹಿಡಿಯಲು ಸಾಧ್ಯವಾಗಲಿಲ್ಲ, ಸಮುದಾಯಕ್ಕೆ ಈಗಾಗಲೇ ಹರಡಿರುವ ಇದು ಮರಣ ಮೃದಂಗ ಬಾರಿಸುತ್ತಿದೆ.
  ನಿಯಂತ್ರಣಕ್ಕೆ ಸಹಕಾರಿ ಆಗಬೇಕಾದ ಸಕಾ೯ರದ ನೀತಿ ನಿಯಮಗಳು ಸರಿಯಾಗಿ ಅನೂಷ್ಟಾನವಾಗದಿರುವುದು ದುರಂತ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...