Skip to main content

Blog number 1633. ನಾನು ದಿನ ಪತ್ರಿಕೆ ಓದುವುದು ನಿಲ್ಲಿಸಿ ಒಂದು ವರ್ಷ ಆಯಿತು. 2022 ರ ಕನ್ನಡ ಪತ್ರಿಕಾ ದಿನಾಚರಣೆ ದಿನದಿಂದ ನಿರ್ದಾರ ಮಾಡಿದ್ದೆ.

#ಪ್ರತಿವರ್ಷ_ಜುಲೈ_೧_ಕನ್ನಡ_ಪತ್ರಿಕಾ_ದಿನ.

#ನಾನು_ಎಲ್ಲಾ_ಪತ್ರಿಕೆಗಳ_ಖರೀದಿ_ನಿಲ್ಲಿಸಿ_ಒಂದು_ವರ್ಷ

#ವೃತ್ತ_ಪತ್ರಿಕೆ_ಓದುವುದು_ಬಿಡಲು_ಕಾರಣವಿದೆ.

#ಮೀಡಿಯಾ_ಖಾಲಿ_ಕಪಾಟುಗಳಾಗಿದೆ

#ಪತ್ರಕರ್ತರನ್ನು_ಸಂಪಾದಕರನ್ನು_ಕಡೆಗಾಣಿಸುತ್ತಿರುವ_ಪತ್ರಿಕೆಗಳ_ಮಾಲಿಕರು.


   ಬಾಲ್ಯದಲ್ಲಿ  ನಾನು ಹುಟ್ಟುವಾಗಲೇ ನಮ್ಮ ಮನೆಗೆ ನಿತ್ಯ ಪ್ರಜಾವಾಣಿ ಪತ್ರಿಕೆ ನಿವೃತ್ತ ಯೋದರಾದ ಹುಚ್ಚಾಚಾರ್ ಬಾಂಗ್ಲಾ ಯುದ್ಧದಲ್ಲಿ ಊನವಾಗಿದ್ದ ಕುಂಟು ಕಾಲಲ್ಲಿ ಕುಂಟುತ್ತಾ ನಮ್ಮ ಮನೆಗೆ ಮತ್ತು ಸಮೀಪದ SRS ಅಕ್ಕಿ ಗಿರಣಿಗೆ ತಪ್ಪದೇ ವಿತರಿಸುತ್ತಿದ್ದರು.
  ವಾರ ಪತ್ರಿಕೆ ಸುದಾ - ಪ್ರಜಾಮತ, ಮಾಸ ಪತ್ರಿಕೆ ಚಂದಮಾಮ - ಮಯೂರ - ತುಷಾರದಿಂದ ಪ್ರಾರಂಭವಾಗಿ ನನ್ನ ಯಜಮಾನಿಕೆಯಲ್ಲಿ ದಿನ ಪತ್ರಿಕೆ ಪ್ರಜಾವಾಣಿ ಜೊತೆ ಕನ್ನಡ ಪ್ರಭ - ಸಂಯುಕ್ತ ಕರ್ನಾಟಕ - ಉದಯವಾಣಿ - ವಿಜಯ ಕರ್ನಾಟಕ - ವಿಜಯವಾಣಿ - ವಿಶ್ವಕರ್ನಾಟಕ, ಇಂಗ್ಲೀಷ್ ಹಿಂದೂ- ಡೆಕನ್ ಹೆರಾಲ್ಡ್ - ಇಂಡಿಯನ್ ಎಕ್ಸ್ ಪ್ರೆಸ್, ಹಿಂದಿಯ ರಾಜಸ್ಥಾನ್ ಪತ್ರಿಕಾ, ವಾರಪತ್ರಿಕೆಗಳಾದ ಹಾಯ್ ಬೆಂಗಳೂರು, ಲಂಕೇಶ್, ಗೌರಿ ಲಂಕೇಶ್, ಅಗ್ನಿ. ಅನೇಕ ಮಾಸ ಪತ್ರಿಕೆಗಳ ಜೊತೆ ಸ್ಥಳೀಯ ಪತ್ರಿಕೆಗಳು ನಾನು ತರಿಸುತ್ತಿದ್ದೆ ಮತ್ತು ಪೂರ್ತಿ ಓದಿದ ನಂತರವೇ ನನ್ನ ನಿತ್ಯದ ಕೆಲಸ ಎಂದು ಅಭ್ಯಾಸ ಆಗಿತ್ತು.
  ನಂತರ ರಾಜ್ಯ ಪತ್ರಿಕೆಗಳು ಸ್ಥಳೀಯ ಪತ್ರಿಕೆಗಳ ಮೇಲೆ ಸ್ಪರ್ದೆ ಮಾಡಿ ಸ್ಥಳೀಯ ಪತ್ರಿಕೆಗಳ ಅಸ್ತಿತ್ವ ಇಲ್ಲ ಮಾಡಿದವು ಅಷ್ಟೆ ಅಲ್ಲ ಪತ್ರಿಕೆಗಳ ಮಾಲಿಕತ್ವ ಬಂಡವಾಳಿಶಾಹಿಗಳ ರಾಜಕಾರಣಿಗಳ ಕೈಗೆ ಹೋದ ಮೇಲೆ ಪತ್ರಕರ್ತರು ಸಂಪಾದಕರಿಗೆ ಇದ್ದಂತಹ ಮಾನ್ಯತೆ -ಘನತೆ ಎರೆಡೂ ಇಲ್ಲವಾಯಿತು.
  ಓದು ಬರಹ ಇಲ್ಲದ ರಾಜಕಾರಣಿಗಳು - ಸ್ವಾಮಿಗಳು ಅಂಕಣ ಪ್ರಕಟವಾಗುತ್ತಿದೆ ಆದರೆ ಅದನ್ನು ಬರೆಯುವವರು? ಈ ರೀತಿ ಪತ್ರಿಕೆಗಳು ಹಣಕ್ಕಾಗಿ ಆತ್ಮವಂಚನೆ ಪ್ರಾರಂಭವಾಯಿತು, ಮುಖ ಪುಟ ಎಂಬ ಕಲ್ಪನೆ ಬದಲಾಯಿತು ಸಿನಿಮಾ - ಟಿವಿ ದಾರಾವಾಹಿಗಳ ಜಾಹಿರಾತು ಫಲಕವಾಯಿತು.
  ವಾಸ್ತವ ಸುದ್ದಿ ನೀಡುವ ಜಾಗದಲ್ಲಿ ರಾಜಕೀಯ ಪ್ರೇರಿತ ಅವಾಸ್ತವ ಸುದ್ದಿ ವಿಜೃಂಬಿಸಲು ಪ್ರಾರಂಭವಾಯಿತು, ಪತ್ರಿಕೆಗಳೆ ಪ್ರಶಸ್ತಿ ನೀಡಲು ಶುರು ಮಾಡಿತು.
   ತಾನು ಪ್ರಕಟಿಸಿದ್ದೆ ಸುದ್ದಿ ಅದೇ ಸತ್ಯ ಎಂದು ಪತ್ರಿಕಾ ವಾಚಕರು ಒಪ್ಪಿಕೊಳ್ಳಲೇ ಬೇಕೆಂಬ ಒತ್ತಡ ಅನಿವಾರ್ಯವಾಗಿ ಪತ್ರಿಕೆ ವಾಚಕರ ಮೇಲೆ ಸರಿಯಲ್ಲ ಅನ್ನಿಸಲು ನನಗೆ ಪ್ರಾರಂಭವಾಗಿತ್ತು.
  ನಿತ್ಯ ಮನೆ ಮಂದಿಯೆಲ್ಲ ಬೆಳಿಗ್ಗೆ 7 ರಿಂದ 10 ರ ತನಕ ಎಲ್ಲಾ ಪತ್ರಿಕೆ ಓದಿ ಮುಗಿಸಲು ದಿನದ ಅಮೂಲ್ಯ ಸಮಯ ಕಳೆಯುವಂತ ಅಡಿಕ್ಷನ್ ಆಗಿತ್ತು.
  ಇದರ ಮಧ್ಯೆ ಪತ್ರಿಕಾ ವಿತರಣೆ ಮಾಡುವವರು ಕೆಲ ಪತ್ರಿಕೆ ಹಾಕುವುದಿಲ್ಲ, ಸಮಯ ಪಾಲಿಸುವುದಿಲ್ಲ ಎ೦ಬುದು ನನ್ನ ಬಿಪಿ ಹೆಚ್ಚಿಸುತ್ತಿತ್ತು, ವಾಕಿಂಗ್ ಮತ್ತು ವ್ಯಾಯಾಮ ತಪ್ಪಿಸುತ್ತಿತ್ತು, ವಾರ್ಷಿಕ ಸುಮಾರು ಲಾಡ್ಜ್ ಗೆ ತರಿಸುವ ಪತ್ರಿಕೆ ಸೇರಿ ಹತ್ತಿರ ಹತ್ತಿರ 50 ಸಾವಿರ ಹಣ ಬೇಕಾಗಿತ್ತು.
   ಕಳೆದ ವರ್ಷ ಯಾವಾಗ ಎಲ್ಲಾ ಪತ್ರಿಕೆಗಳ ಮುಖ ಪುಟ ಟೀವಿ ದಾರಾವಾಹಿ ಜಾಹಿರಾತಿನ ಕರಪತ್ರವಾಯಿತೋ ಅವತ್ತೇ ದಿನ ಪತ್ರಿಕೆ ಓದಲು ನಿಲ್ಲಿಸಿದೆ.
  ಮನೆಗೆ ತರಿಸುವ ಎಲ್ಲಾ ಪತ್ರಿಕೆಗಳನ್ನು ನಿಲ್ಲಿಸಲು ತೀರ್ಮಾನಿಸಿ ಕಳೆದ ವರ್ಷ ಜುಲೈ -1- 2022 ರಿಂದ ಎಲ್ಲಾ ಪತ್ರಿಕೆ ಓದುವ ಮತ್ತು ತರಿಸುವುದು ನಿಲ್ಲಿಸಿದೆ.
   ಕನ್ನಡ ಪತ್ರಿಕಾ ದಿನಾಚರಣೆ ನಡೆಸಲು ಕಾರಣವಾದ ಮಂಗಳೂರು ಸಮಾಚಾರ ಪತ್ರಿಕೆ ಮಂಗಳೂರಿನ ಬಾಸೆಲ್ ಮಿಷನ್ ಸಂಸ್ಥೆ 1841 ರ ಜುಲೈ 1ರಂದು ಪ್ರಾರಂಬಿಸಿದ್ದು ಕಾರಣವಾದರೆ 2022 ಜುಲೈ 1 ನಾನು ಕನ್ನಡ ವೃತ್ತ ಪತ್ರಿಕೆ ಓದು ಮತ್ತು ಚಂದಾದಾರಿಕೆ ನಿಲ್ಲಿಸಿದ ದಿನವಾಗಿದೆ.
 2006 ರ ನಂತರ ಚಿತ್ರಮಂದಿರದಲ್ಲಿ ಸಿನಿಮಾ ನೋಡಲಿಲ್ಲ, 2015 ರ ಅಕ್ಷಯ ತೃತೀಯ ದಿನದಿಂದ ಟೀವಿ ಮನೆಯಿಂದ ತೆಗೆದೆ, 2020 ರ ಶಿವರಾತ್ರಿಯಿಂದ ರಾತ್ರಿ ಊಟ ಬಿಟ್ಟಿದ್ದೇನೆ ಇದೆಲ್ಲದರ ಜೊತೆ ಕಳೆದ 2022 ರ ಕನ್ನಡ ಪತ್ರಿಕಾ ದಿನಾಚರಣೆಯಿಂದ ವೃತ್ತಪತ್ರಿಕೆ ಓದುವುದು ನಿಲ್ಲಿಸಿದ್ದೇನೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...