Skip to main content

Blog number 1663. ಡಾಕ್ಟರ್ ಪ್ರೀತಮ್ ಅವರ ಶಿವಮೊಗ್ಗದ ನೂತನ ಆಸ್ಪತ್ರೆಗೆ ಶುಭ ಹಾರೈಕೆಗಳು (13 July 2021)

#ಡಾಕ್ಟರ್_ಪ್ರೀತಮರ_ನೂತನ_ಉಧ್ಯಮಕ್ಕೆ_ಶುಭ_ಹಾರೈಕೆಗಳೊಂದಿಗೆ.....

#ಶಿವಮೊಗ್ಗದ_ಮೊದಲ_ಡಯಾಬಿಟಿಕ್_ಸುಸಜ್ಜಿತ_ಆಸ್ಪತ್ರೆ.

#ರಾಷ್ಟ್ರೀಯ_ಹೆದ್ದಾರಿಯಲ್ಲಿ_ದ್ವಾರಕಾ_ಕಲ್ಯಾಣ_ಮಂಟಪದ_ಪಕ್ಕದಲ್ಲಿದೆ

#ಪ್ರಸಿದ್ಧ_ವೈದ್ಯರಾದ_ಡಾಕ್ಟರ್_ಪ್ರೀತಮ್_ಮಾಲಿಕತ್ವದಲ್ಲಿ

#ಐಲೆಟ್ಸ್_ಡಯಾಬಿಟಿಸ್_ಹಾಸ್ಪಿಟಲ್ 


  ಶಿವಮೊಗ್ಗ ಜಿಲ್ಲಾ ಕೇಂದ್ರ ಮೆಡಿಕಲ್ ಹಬ್ ಆಗಿದೆ. ಅನೇಕ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳು ಇಲ್ಲಿದೆ, ಸರ್ಕಾರಿ ಮತ್ತು ಖಾಸಾಗಿ ವೈದ್ಯಕೀಯ ಆಸ್ಪತ್ರೆಗಳು, ಆಯುರ್ವೇದ ಆಸ್ಪತ್ರೆಗಳು, ನರ್ಸಿಂಗ್ ಕಾಲೇಜುಗಳು, ಪ್ಯಾರಾ ಮೆಡಿಕಲ್ ತರಬೇತಿ ಕೇಂದ್ರಗಳು, ಆಸ೦ಖ್ಯಾ ಲ್ಯಾಬ್ ಗಳು ಹಾಗೂ ಮೆಡಿಕಲ್ ಶಾಪ್ ಗಳಿದೆ ಆದರೆ ಸುಸಜ್ಜಿತ ಡಯಾಬಿಟಿಕ್ ( ಮದುಮೇಹಿಗಳಿಗೆ) ಆಸ್ಪತ್ರೆ ಇರಲಿಲ್ಲ.
  ಶಿವಮೊಗ್ಗದಲ್ಲಿ ಡಾಕ್ಟರ್ ಪ್ರೀತಮ್ ಡಯಾಬಿಟಿಕ್ ಸ್ಪೆಷಲಿಸ್ಟ್ ಆಗಿ ಪ್ರಖ್ಯಾತಿ ಗಳಿಸಿದ್ದಾರೆ, ಶಿವಮೊಗ್ಗದ ದುರ್ಗಿಗುಡಿಯ ಅಪೋಲೋ ಆಸ್ಪತ್ರೆ (ಈಗ ರಾಜ್ ಕುಮಾರ್ ಡಯೋಗ್ನೋಸ್ಟಿಕ್ ಸೆಂಟರ್) ಇವರ ಕೇಂದ್ರವಾಗಿ ಎಲ್ಲಾ ಆಸ್ಪತ್ರೆಗಳಿಗೂ ಚಿಕಿತ್ಸೆ ನೀಡುತ್ತಾರೆ.
  ಸದಾ ಹಸನ್ಮುಖರಾಗಿ ರೋಗಿಗಳೊಡನೆ ಆತ್ಮೀಯವಾಗಿ ವ್ಯವಹರಿಸಿ, ಯಾವುದೇ ರಾಂಗ್ ಡಯಾಗ್ನೈಸ್ ಮಾಡದೇ ರೋಗಿಗಳನ್ನು ಗುಣಪಡಿಸಿ ಕಳಿಸುತ್ತಾರೆ.
  ಈಗ ಇವರದ್ದೇ ಸ್ಪಂತದಾದ ಶಿವಮೊಗ್ಗ ಜಿಲ್ಲೆಯಲ್ಲೇ ಪ್ರಥಮ ಸುಸಜ್ಜಿತ ಐಸ್ಲೆಟ್ ಡಯಾಬಿಟೀಸ್ ಆಸ್ಪತ್ರೆ ದಿನಾಂಕ 15 ಜುಲೈ 2021 ರ ಗುರುವಾರದಿಂದ ಶುಭಾರಂಭ ಮಾಡಲಿದೆ.
  30 ಹಾಸಿಗೆಯ ಸುಸಜ್ಜಿತವಾದ ಐಸ್ಲೆಟ್ ಡಯಾಬಿಟೀಸ್ ಹಾಸ್ಪಿಟಲ್ ನಲ್ಲಿ ಡಯಾಬಿಟೀಸ್ ತಜ್ಞರಾದ ಡಾಕ್ಟರ್ ಪ್ರೀತಮ್ ಮುಖ್ಯವೈದ್ಯರಾಗಿ ಕಾರ್ಯನಿರ್ವಹಿಸುವ ಜೊತೆಗೆ ಬೇರೆ ಇತರ ಕಾಯಿಲೆಗಳಿಗೆ ಚಿಕಿತ್ಸೆ ಕೂಡ ತಜ್ಞ ವೈದ್ಯರಿಂದ ದೊರೆಯಲಿದೆ.
    ಆದುನಿಕವಾದ ಸುಸಜ್ಜಿತವಾದ ಆಪರೇಷನ್ ಥಿಯೇಟರ್ ಕೂಡ ಇಲ್ಲಿದೆ.
  ಡಾಕ್ಟರ್ ಪ್ರೀತಮ್ ರ ನೂತನ ಆಸ್ಪತ್ರೆ ವಿಳಾಸ
       #ISLET_DIABETES_HOSPITAL
NH 206, NEAR DWARAKA KALYANA MANTAPA
           (Opp Shimoga Auto Complex)
                         #SHIMOGA

NH 69
https://maps.app.goo.gl/MWgrpZMW9nZ1jR7e6

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...