Skip to main content

Blog number 1665. ವಿಜಯನಗರದ ಶ್ರೀಕೃಷ್ಣ ದೇವರಾಯ ವಿಶ್ವ ವಿದ್ಯಾಲಯದಿಂದ ಮರಣೋತ್ತರ ಗೌರವ ಡಾಕ್ಟರೇಟ್ ಪುರಸ್ಕಾರ ಸಾಹಿತ್ಯ ಪೋಷಕರಾಗಿದ್ದ ಶಿವಮೊಗ್ಗದ ಹಿರೇಹಾಳ ಇಬ್ರಾಹಿಂ ಸಾಹೇಬರಿಗೆ.

#ಶಿವಮೊಗ್ಗದ_ದಿವಂಗತ_ಹಿರೇಹಾಳ_ಇಬ್ರಾಹಿಂ_ಸಾಹೇಬರಿಗೆ_ಡಾಕ್ಟರೇಟ್.

#ವಿಜಯನಗರ_ಕೃಷ್ಣದೇವರಾಯ_ವಿಶ್ವವಿದ್ಯಾಲಯದಿಂದ_ಮರಣೋತ್ತರ_ಡಾಕ್ಟರೇಟ್

#ಕನ್ನಡ_ಸಾಹಿತ್ಯ_ಲೋಕದ_ಮಹಾನ್_ಪೋಷಕರು

#ಇಸ್ಲಾಂನ_ಪ್ರವಚನ_ಕನ್ನಡಕ್ಕೆ_ಅನುವಾದಿಸಿದವರು

#ಶಿವಮೊಗ್ಗದ_ಪ್ರತಿಷ್ಟಿತ_ಕರ್ನಾಟಕ_ಸಂಘದ_ಉಪಾಧ್ಯಕ್ಷರಾಗಿದ್ದರು.

#ಆ_ಕಾಲದಲ್ಲಿ_ಬಿವಿ_ಕಾರಂತರ_ಹಯವದನ_ನಾಟಕಕ್ಕೆ_ಪ್ರಾಯೋಜಕತ್ವ_ನೀಡಿದವರು.

   ನಾಡಿನ ಪ್ರಖ್ಯಾತ ಕವಿಗಳಾದ "ಮುನಿಸು ತರವೇ ಮುಗುದೇ.. ಹಿತವಾಗಿ ನಗಲೂ ಬಾರದೇ " ಪ್ರಸಿದ್ಧ ಹಾಡು ಬರೆದ ಸುಬ್ರಾಯ ಚೊಕ್ಕಾಡಿ ಅವರು ಕೆಲ ದಿನದ ಹಿಂದೆ ಶಿವಮೊಗ್ಗದ ಹಿರೇಹಾಳ ಇಬ್ರಾಹಿಂ ಸಾಹೇಬರ ನೆನಪಿಸಿಕೊಂಡಿದ್ದರು, ಇಬ್ರಾಹಿಂ ಸಾಹೇಬರ ಆಹ್ವಾನದ ಮೇಲೆ ಶಿವಮೊಗ್ಗಕ್ಕೆ ಬಂದಿದ್ದಾಗಿ ಅವರ ಅತಿಥ್ಯ ಸ್ವೀಕರಿಸಿದ ಬಗ್ಗೆ ತಿಳಿಸಿದ್ದರು.
   ಇವತ್ತು ಅವರೇ ಹಿರೇಹಾಳ ಇಬ್ರಾಹಿಂ ಸಾಹೇಬರಿಗೆ ಮರಣೋತ್ತರ ಡಾಕ್ಟರೇಟ್ ವಿಜಯನಗರದ ಶ್ರೀ ಕೃಷ್ಣ ದೇವರಾಯ ವಿಶ್ವವಿದ್ಯಾಲಯ ಇವತ್ತು (13 ಜುಲೈ 2023) ತನ್ನ 11ನೇ ಘಟಿಕೋತ್ಸವದಲ್ಲಿ ಹಿಂದೂಸ್ಥಾನಿ ಗಾಯಕ ಪಂಡಿತ್ ವೆಂಕಟೇಶ್ ಕುಮಾರ್ ಮತ್ತು ರಾಯಚೂರಿನ ಪ್ರಗತಿ ಪರ ರೈತ ಮಹಿಳೆ ಕವಿತಾ ಮಿಶ್ರರಿಗೂ ನೀಡಿ ಗೌರವಿಸುವ ಪ್ರಕಟನೆ ಮಾಹಿತಿ ಅವರು ಇವತ್ತಿನ ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟವಾದ ಬಗ್ಗೆ ತಿಳಿಸಿದರು.
  ಹಿರೇಹಾಳ ಇಬ್ರಾಹಿಂ ಸಾಹೇಬರ ಬಗ್ಗೆ ಕನ್ನಡ ಸಾಹಿತ್ಯ ಲೋಕದಲ್ಲಿನ ಎಲ್ಲಾ ಹಿರಿಯ ಸಾಹಿತಿಗಳಲ್ಲಿ ಅತ್ಯಂತ ಗೌರವಾಭಿಮಾನ ಕಾರಣ ಅವರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಪೋಷಕ ಸ್ಥಾನ.
   ನಾಡಿನ ಸಾಹಿತಿಗಳಿಗೆ ಶಿವಮೊಗ್ಗಕ್ಕೇ ಆಹ್ವಾನಿಸಿ ಆಧರಿಸಿ ಗೌರವಿಸುತ್ತಿದ್ದ ರೀತಿ ಹಿರೇಹಾಳ ಇಬ್ರಾಹಿಂ ಸಾಹೇಬರ ಬಿಟ್ಟರೆ ಇನ್ನೊಬ್ಬರಿಲ್ಲ.
  ಆ ಕಾಲದಲ್ಲಿ ಖ್ಯಾತ ರಂಗಕರ್ಮಿ ಬಿ.ವಿ.ಕಾರಂತರ #ಹಯವದನ ನಾಟಕ ಪ್ರದರ್ಶನದ ಪ್ರಾಯೋಜಕತ್ವ ಮಾಡುವ ದೈರ್ಯ ಮಾಡಿದ್ದು ಹಿರೇಹಾಳ ಇಬ್ರಾಹಿಂ ಸಾಹೇಬರು, ನಂತರ ಹಯವದನ ನಾಟಕ ಯಶಸ್ವಿಯಾಗಿ ನಡೆಯಿತು.
  ಇಬ್ರಾಹಿಂ ಸಾಹೇಬರು ಶಿವಮೊಗ್ಗದ ಪ್ರತಿಷ್ಟಿತ ಕರ್ನಾಟಕ ಸಂಘದ ಉಪಾಧ್ಯಕ್ಷರಾಗಿದ್ದರು, ರಾಜ್ಯ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿದ್ದರು, 49ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ನೇತೃತ್ವ ವಹಿಸಿದ್ದರು.
  ಶಿವಮೊಗ್ಗದಲ್ಲಿ ಮುಸ್ಲಿಂ ಸಾಹಿತಿಗಳ ಸಮ್ಮೇಳನ ಲಂಕೇಶರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ಇಬ್ರಾಹಿಂ ಸಾಹೇಬರು ನಡೆಸಿದ್ದರು ಇದು ಮುಸ್ಲಿಂ ಸಾಹಿತಿಗಳನ್ನು ಕನ್ನಡ ಸಾಹಿತ್ಯ ಲೋಕದ ಮುಖ್ಯ ವಾಹಿನಿಗೆ ತರುವ ಪ್ರಯತ್ನ ಅವರದ್ದಾಗಿತ್ತು ಅದೇ ಮೊದಲ ಮತ್ತು ಕೊನೆಯ ಮುಸ್ಲಿಂ ಸಾಹಿತಿಗಳ ಸಮ್ಮೇಳನ ಆಯಿತು.
   ಶಿವಮೊಗ್ಗದಲ್ಲಿ ಕೋಟೆ ಪೋಲಿಸ್ ಠಾಣೆ ದಾಟಿ ಮುಂದೆ ಹೋದರೆ ಬಲ ಭಾಗದ ವಿಶಾಲವಾದ ಬಂಗ್ಲೆ ಹಿರೇಹಾಳ ಇಬ್ರಾಹಿಂ ಸಾಹೇಬರದ್ದು ನಾನು ಅನೇಕ ಬಾರಿ ನಮ್ಮ ಊರಿನ ಸಮೀಪದ ಮುಂಬಾಳಿನ ಗೋಕುಲ್ ಪಾರಂನ ಡಾ. ಪಾದರ್ ಜೋಸೆಪ್ ಜೊತೆ ಅವರ ಬೇಟಿಗೆ ಹೋಗಿದ್ದೆ ಕಾರಣ ಪಾದರ್ ಜೋಸೆಪ್ ಮರಗೆಣಸು (ಟ್ಯಾಪಿಯೋಕ ) ಬೆಳೆವ ರೈತರ ಸಹಕಾರಿ ಸಂಘ ರಚಿಸಲು ಆ ದಿನಗಳಲ್ಲಿ ಯೋಚಿಸುತ್ತಿದ್ದರು ಆಗ ಮರಗೆಣಸಿನಿಂದ ಸ್ಪಿರಿಟ್ ಉತ್ಪಾದಿಸುವ ಲೈಸೆನ್ಸ್ ಹಿರೇಹಾಳು ಇಬ್ರಾಹಿಂ ಸಾಹೇಬರು ಹೊಂದಿದ್ದರು.
   ಇತ್ತೀಚೆಗೆ ಇಬ್ರಾಹಿಂ ಸಾಹೇಬರ ಪಟ್ಟದ ಶಿಷ್ಯರೇ ಆಗಿದ್ದ ಡಿವಿಎಸ್ ಕಾಲೇಜಿನ ನಿವೃತ್ತ ಉಪನ್ಯಾಸಕರಾದ ಶಿವಮೊಗ್ಗ ಮುನೀರ್ ಅವರು ಇಬ್ರಾಹಿಂ ಸಾಹೇಬರ ಒಡನಾಟದ ನೆನಪುಗಳನ್ನು ಮೆಲುಕು ಹಾಕಿದ್ದರು ಬಹುಶಃ ಈ ಪ್ರಶಸ್ತಿಯಿಂದ ಅತಿ ಹೆಚ್ಚು ಸಂತೋಷ ಪಡುವವರಲ್ಲಿ ಅವರೂ ಒಬ್ಬರು.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ