Skip to main content

Blog number 1669. ಕೊರೊನಾ ಲಾಕ್ ಡೌನ್ ಡೈರಿ 2020 ಲೆಟರ್ ನಂಬರ್ 54.( 15- ಜುಲೈ 2020)

#ಇಂತಹ_ಮಾತುಗಳೇ_ನಿರಾಸೆ_ಹೊಡೆದೋಡಿಸುವ_ಮತ್ತು_ಆತ್ಮವಿಶ್ವಾಸ_ಹೆಚ್ಚಿಸುವುದು

#ಬೆಂಗಳೂರಿಂದ_ಬರುವವರಿಗೆ_ಹೃದಯಸ್ಪಷಿ೯_ಬೆಂಬಲ_ಸಹಕಾರ_ನೀಡಿದ_ಸಾಗರದ_ಶಾಸಕರಾದ_ಹರತಾಳುಹಾಲಪ್ಪನವರು.


   ಮಲೆನಾಡಿನಿಂದ ರಾಜಧಾನಿಗೆ ತಮ್ಮ ಭವಿಷ್ಯ ಹುಡುಕಿ ಹೋಗುವ ಯುವಕ/ಯುವತಿಯರೆಲ್ಲ ನಮ್ಮ ಸಹೋದರ ಸಹೋದರಿಯರೆ, ರೈತರು ಮತ್ತು ಕೃಷಿ ಕಾಮಿ೯ಕ ಕುಟುಂಬದವರೆ.
  ಅವರೆಲ್ಲರ ಕನಸು ಹೆತ್ತವರಿಗೆ ಅಥಿ೯ಕ ಸಹಾಯ ಮಾಡಿ ಮನೆಯಲ್ಲಿನ ಕೃಷಿ ಅಭಿವೃದ್ದಿ, ಹೊಸ ಮನೆ ಕಟ್ಟುವುದು, ಸಹೋದರ / ಸಹೋದರಿಯರ ವಿದ್ಯಾಬ್ಯಾಸ ಅವರ ಮದುವೆ, ಮನೇನಲ್ಲಿ ಕಾಯಿಲೆ ಇದ್ದವರಿಗೆ ಚಿಕಿತ್ಸೆ, ಮನೆಯಲ್ಲಿ ಮಾಡಿದ ಬ್ಯಾಂಕ್ ಅಥವ ಖಾಸಾಗಿ ಸಾಲ ತೀರುಸುವುದು ಮತ್ತು ಹಳ್ಳಿಯಲ್ಲಿ ತಮ್ಮ ಕುಟುಂಬಕ್ಕೆ ಒಂದು ಐಡೆಂಟಿಟಿ ಸಿಗುವಂತೆ ಮಾಡುವುದು.
   ಆದರೆ ಇದರಲ್ಲಿ ಎಷ್ಟು ಜನ ಯಶಸ್ವಿ ಆಗುತ್ತಾರೆ ಎನ್ನುವುದು ಅವರವರ ಪ್ರಯತ್ನ ಮತ್ತು ಅದೃಷ್ಟದ ಮೇಲೆ ಅವಲಂಬಿಸಿದೆ.
  ಈಗ ಬಂದಿರುವ ಕೊರಾನಾ ಗಂಡಾಂತರದಿಂದ ಲಾಕ್ ಡೌನ್ ಗಳಿಂದ ಇಡಿ ರಾಜ್ಯದಲ್ಲಿ ಉದ್ಯೋಗ ಕಳೆದುಕೊಳ್ಳುವ ಪರಿಸ್ಥಿತಿ ನಿಮಾ೯ಣ ಆಗಿದೆ ಇದರಿಂದ ತಾತ್ಕಾಲಿಕವಾಗಿ ಇದು ನಿಯ೦ತ್ರಣಕ್ಕೆ ಬರುವಷ್ಟು ದಿನ ಊರಿಗೆ ಮರಳಿ ಕೃಷಿಯ ಈ ದಿನದಲ್ಲಿ ಮನೆಯವರಿಗೆ ಸಹಕಾರ ಮಾಡುವ ಉದ್ದೇಶ ಮತ್ತು ಮನೆಯವರ ಆತಂಕ ಕಡಿಮೆ ಮಾಡಲಿಕ್ಕಾಗಿ ಊರಿಗೆ ಮರಳುತ್ತಿದ್ದಾರೆ.
   ಬೆಂಗಳೂರಿಂದ ಊರಿಗೆ ಬಂದವರು 14 ದಿನ ಸ್ವಯಂ ಕೊರಂಟೈನ್ ನಲ್ಲಿ ಇರಬೇಕು ಎಲ್ಲೂ ಓಡಾಡಬಾರದೆಂಬ ಆರೋಗ್ಯ ಇಲಾಖೆ ನಿರ್ದೇಶನ ಕಟ್ಟುನಿಟ್ಟಾಗಿ ಪಾಲಿಸಬೇಕು.
  ಕೆಲವು ಉಡಾಪೆ ಸ್ವಭಾವದವರು ಈ ಹಿಂದೆ ಊರಿಗೆ ಬಂದಾಗ ಪಾಲಿಸದೆ ಅನೇಕ ಸಮಸ್ಯೆಗೆ ಕಾರಣರಾದ್ದರಿಂದ ಈ ಬಾರಿ ದೊಡ್ಡ ಪ್ರಮಾಣದಲ್ಲಿ ಊರಿಗೆ ಬರುವವರ ಮೇಲೆ ಆಯಾ ಹಳ್ಳಿಗಳಲ್ಲಿ ಆಕ್ರೋಷ ವ್ಯಕ್ತಪಡಿಸುತ್ತಿದ್ದಾರೆ.
   ಈ ಸಂದಭ೯ದಲ್ಲಿ ಸಾಗರದ ಶಾಸಕರು ನೀಡಿದ ಪತ್ರಿಕಾ ಹೇಳಿಕೆ ನಿಜಕ್ಕೂ ಹೃದಯ ಸ್ಪಷಿ೯,ತಾವು ಕೂಡ ಭವಿಷ್ಯ ಹುಡುಕಿ ಬೆಂಗಳೂರಿಗೆ ಹೋಗಿದ್ದು ಅಲ್ಲಿನ ಅನುಭವ ಸ್ವತ: ಹೊಂದಿದ್ದು ಈಗ ಬೆಂಗಳೂರಿಂದ ಊರಿಗೆ ಬರುವವರ ನೋವು ಗೊತ್ತಿರುವುದರಿಂದ ಅವರಿಗೆಲ್ಲ ದೈಯ೯ ನೀಡಿ ಏನೇ ಸಮಸ್ಯೆ ಇದ್ದರೂ ನೇರವಾಗಿ ಸಂಪಕಿ೯ಸಲು ಕೋರಿದ್ದಾರೆ ಅಷ್ಟೆ ಅಲ್ಲ ಸ್ಥಳಿಯರು ಊರಿಗೆ ಬಂದವರನ್ನ ಯಾವುದೇ ಕಾರಣಕ್ಕೂ ಅವರಿಗೆ ನೋವಾಗದಂತೆ ವತಿ೯ಸಲು ಕೂಡ ವಿನಂತಿಸಿರುವುದು  ಬೆಂಗಳೂರಿಂದ ತಾತ್ಕಾಲಿಕ ಅನಿವಾಯ೯ದಿಂದ ಬರುವವರಿಗೆ ನಿಜಕ್ಕೂ ಪ್ರೋತ್ಸಾಹದಾಯಕ ಮಾತುಗಳಾಗಿದೆ, ಇದೇ ರೀತಿ ತೀಥ೯ಹಳ್ಳಿ ಶಾಸಕರು ವಿಡಿಯೋ ಒಂದನ್ನ ಮಾಡಿ ಬೆಂಗಳೂರು ವಾಸಿ ಮಲೆನಾಡಿಗರ ಗ್ರೂಪ್ ನಲ್ಲಿ ಹಾಕಿದ್ದಾರೆ.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ